ವಿದ್ಯಾರ್ಥಿಗಳು ಪದವಿ, ಡಿಪ್ಲೊಮಾ ನಂತರ ಕನಿಷ್ಠ 6 ತಿಂಗಳ ವರೆಗೆ ಸರ್ಕಾರಿ ಅಥವಾ ಖಾಸಗಿ ಸ್ಥಳದಲ್ಲಿ ಉದ್ಯೋಗ ಮಾಡಿರಬಾರದು. ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರೆಸದವರು ಯುವನಿಧಿ ಅಡಿ ನೋಂದಣಿ ಮಾಡಿಸಬಹುದು. ಉಚಿತವಾಗಿ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಸೇವಾ ಸಿಂಧು ಪೋರ್ಟಲ್ನಲ್ಲಿ ಮಾಸಿಕವಾಗಿ ನಿರುದ್ಯೋಗ ದೃಢೀಕರಣ ಕಡ್ಡಾಯ. ತಪ್ಪು ಮಾಹಿತಿ ನೀಡಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ದಂಡ ವಿಧಿಸಲಾಗುತ್ತದೆ ಎಂದು ಹೇಳಿದರು.