<p><strong>ಬೀದರ್:</strong> ಜಿಲ್ಲೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಶಾಲಾ ಮಕ್ಕಳ ಆಧಾರ್ ಕಾರ್ಡ್ ಅಪ್ಡೇಟ್ ಆಗದ ಕಾರಣ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ.</p><p>ಸರ್ಕಾರದ ಯೋಜನೆಯ ಪ್ರಯೋಜನ ಪಡೆಯಬೇಕಾದರೆ ಆಧಾರ್ ಇರುವುದು ಕಡ್ಡಾಯ. ಶಿಷ್ಯವೇತನ, ಲಸಿಕೆ, ಚುಚ್ಚುಮದ್ದು, ಶಾಲಾ ದಾಖಲಾತಿ ವೇಳೆ ಆಧಾರ್ ಸಲ್ಲಿಸುವುದು ಕಡ್ಡಾಯಗೊಳಿಸಲಾಗಿದೆ. ಎಸ್ಎಟಿಎಸ್ನಲ್ಲಿ(ಸ್ಯಾಟ್ಸ್–ಸ್ಟೂಡೆಂಟ್ಸ್ ಟ್ರ್ಯಾಕಿಂಗ್ ಸಿಸ್ಟಂ) ವಿದ್ಯಾರ್ಥಿಗಳ ಸಂಪೂರ್ಣ ವಿವರ ದಾಖಲಿಸುವುದು ಕಡ್ಡಾಯ ಮಾಡಲಾಗಿದೆ.</p><p>ಎಲ್ಲ ಜಿಲ್ಲೆಗಳಲ್ಲಿ ನೂರಕ್ಕೆ ನೂರರಷ್ಟು ವಿದ್ಯಾರ್ಥಿಗಳ ವಿವರ ನಮೂದಿಸುವಂತೆ ತಿಳಿಸಲಾಗಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಪ್ರಸಕ್ತ ಸಾಲಿನ ಜನವರಿ 21ರಂದು ಸುತ್ತೋಲೆ ಹೊರಡಿಸಿ, ಅತಿ ತುರ್ತಾಗಿ ಈ ಕೆಲಸ ಮುಗಿಸಬೇಕೆಂದು ರಾಜ್ಯದ ಎಲ್ಲ ಡಿಡಿಪಿಐಗಳಿಗೆ ನಿರ್ದೇಶನ ನೀಡಿದ್ದಾರೆ. ಹೀಗಿದ್ದರೂ ಕೆಲಸ ನಿಧಾನ ಗತಿಯಲ್ಲಿ ಆಗುತ್ತಿದೆ. ಅದರ ಪರಿಣಾಮ ವಿದ್ಯಾರ್ಥಿಗಳ ಮೇಲೆ<br>ಆಗುತ್ತಿದೆ.</p><p>‘ಈಗ ಪ್ರತಿಯೊಂದಕ್ಕೂ ಆಧಾರ್ ಕಾರ್ಡ್ ಬೇಕು. ಅದು ಇರದಿದ್ದರೆ ಯಾವುದೇ ರೀತಿಯ ಕೆಲಸಗಳು ಆಗುವುದಿಲ್ಲ. ಸಂವಿಧಾನದಲ್ಲಿಯೇ ಶಿಕ್ಷಣ ಮೂಲಹಕ್ಕು ಎಂದು ತಿಳಿಸಲಾಗಿದೆ. ಆಧಾರ್ನಿಂದ ಮಗುವಿನ ಶಿಕ್ಷಣಕ್ಕೆ ತೊಡಕಾದರೆ ಗಂಭೀರ ಪ್ರಮಾದ’ ಎನ್ನುತ್ತಾರೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಜಿಲ್ಲೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಶಾಲಾ ಮಕ್ಕಳ ಆಧಾರ್ ಕಾರ್ಡ್ ಅಪ್ಡೇಟ್ ಆಗದ ಕಾರಣ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ.</p><p>ಸರ್ಕಾರದ ಯೋಜನೆಯ ಪ್ರಯೋಜನ ಪಡೆಯಬೇಕಾದರೆ ಆಧಾರ್ ಇರುವುದು ಕಡ್ಡಾಯ. ಶಿಷ್ಯವೇತನ, ಲಸಿಕೆ, ಚುಚ್ಚುಮದ್ದು, ಶಾಲಾ ದಾಖಲಾತಿ ವೇಳೆ ಆಧಾರ್ ಸಲ್ಲಿಸುವುದು ಕಡ್ಡಾಯಗೊಳಿಸಲಾಗಿದೆ. ಎಸ್ಎಟಿಎಸ್ನಲ್ಲಿ(ಸ್ಯಾಟ್ಸ್–ಸ್ಟೂಡೆಂಟ್ಸ್ ಟ್ರ್ಯಾಕಿಂಗ್ ಸಿಸ್ಟಂ) ವಿದ್ಯಾರ್ಥಿಗಳ ಸಂಪೂರ್ಣ ವಿವರ ದಾಖಲಿಸುವುದು ಕಡ್ಡಾಯ ಮಾಡಲಾಗಿದೆ.</p><p>ಎಲ್ಲ ಜಿಲ್ಲೆಗಳಲ್ಲಿ ನೂರಕ್ಕೆ ನೂರರಷ್ಟು ವಿದ್ಯಾರ್ಥಿಗಳ ವಿವರ ನಮೂದಿಸುವಂತೆ ತಿಳಿಸಲಾಗಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಪ್ರಸಕ್ತ ಸಾಲಿನ ಜನವರಿ 21ರಂದು ಸುತ್ತೋಲೆ ಹೊರಡಿಸಿ, ಅತಿ ತುರ್ತಾಗಿ ಈ ಕೆಲಸ ಮುಗಿಸಬೇಕೆಂದು ರಾಜ್ಯದ ಎಲ್ಲ ಡಿಡಿಪಿಐಗಳಿಗೆ ನಿರ್ದೇಶನ ನೀಡಿದ್ದಾರೆ. ಹೀಗಿದ್ದರೂ ಕೆಲಸ ನಿಧಾನ ಗತಿಯಲ್ಲಿ ಆಗುತ್ತಿದೆ. ಅದರ ಪರಿಣಾಮ ವಿದ್ಯಾರ್ಥಿಗಳ ಮೇಲೆ<br>ಆಗುತ್ತಿದೆ.</p><p>‘ಈಗ ಪ್ರತಿಯೊಂದಕ್ಕೂ ಆಧಾರ್ ಕಾರ್ಡ್ ಬೇಕು. ಅದು ಇರದಿದ್ದರೆ ಯಾವುದೇ ರೀತಿಯ ಕೆಲಸಗಳು ಆಗುವುದಿಲ್ಲ. ಸಂವಿಧಾನದಲ್ಲಿಯೇ ಶಿಕ್ಷಣ ಮೂಲಹಕ್ಕು ಎಂದು ತಿಳಿಸಲಾಗಿದೆ. ಆಧಾರ್ನಿಂದ ಮಗುವಿನ ಶಿಕ್ಷಣಕ್ಕೆ ತೊಡಕಾದರೆ ಗಂಭೀರ ಪ್ರಮಾದ’ ಎನ್ನುತ್ತಾರೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>