ಬೀದರ್: ಮುಂಗಾರು ಹಂಗಾಮಿನ ಬೆಳೆಯಲ್ಲಿ ಖಾತ್ರಿ ಬೆಳೆ ಎಂದೇ ಖ್ಯಾತಿ ಪಡೆದಿರುವ ಸೋಯಾ ಬೀಜದ ಕೊರತೆ ಕಾಡುತ್ತಿದೆ. ಸರ್ಕಾರ ರೈತರಿಗೆ ತಕ್ಷಣ ಸೋಯಾ ವಿತರಿಸಲು ಕ್ರಮಕೈಗೊಳ್ಳಬೇಕು ಎಂದು ಮಾಜಿ ಶಾಸಕ ಅಶೋಕ ಖೇಣಿ ಆಗ್ರಹಿಸಿದ್ದಾರೆ.
ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಕೃಷಿ ಚಟುವಟಿಕೆಯಲ್ಲಿ ತೊಡಗುವ ಉತ್ಸಾಹದಲ್ಲಿದ್ದ ರೈತರು ಬೀಜಕ್ಕಾಗಿ ಪರದಾಡುತ್ತಿದ್ದಾರೆ. ವಿಳಂಬ ಮಾಡದೆ ಸರ್ಕಾರ ಬೀಜ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.