<p>ಬೀದರ್: ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ ಅಗೌರವ ತೋರಿದ್ದು, ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ರೆಡ್ಡಿ ಸಮಾಜ ಆಗ್ರಹಿಸಿದೆ.</p>.<p>ಈ ಸಂಬಂಧ ಸಮಾಜದ ಪ್ರಮುಖರು ನಗರದಲ್ಲಿ ಶನಿವಾರ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.</p>.<p>ಜಯಂತಿ ದಿನ ಯಾವುದೋ ಒಂದು ಮೂಲೆಯಲ್ಲಿರುವ ಹೇಮರೆಡ್ಡಿ ಮಲ್ಲಮ್ಮನವರ ಫೋಟೋ ತಂದು ಜಯಂತಿ ಆಚರಿಸಿ ಅಗೌರವ ತೋರಿದ್ದಾರೆ. ಈ ಸಂಬಂಧ ಈಗಾಗಲೇ ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ತಿಳಿಸಿದ್ದಾರೆ.</p>.<p>ಪಿಡಿಒ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದರೆ ಮೇ 21ರಂದು ಪಂಚಾಯಿತಿ ಕಚೇರಿ ಎದುರು ಸಮಾಜದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.</p>.<p>ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷ ಶಂಕರ ರೆಡ್ಡಿ, ಯುವ ಘಟಕದ ಜಿಲ್ಲಾಧ್ಯಕ್ಷ ಸಂತೋಷ್ ರೆಡ್ಡಿ ಆಣದೂರ್, ಪ್ರಮುಖರಾದ ಪೆಂಟಾರೆಡ್ಡಿ, ವಿಜಯರೆಡ್ಡಿ, ದೀಪಕರೆಡ್ಡಿ, ಜಗನ್ನಾಥ್ ರೆಡ್ಡಿ, ಯಮರೆಡ್ಡಿ, ಕೃಷ್ಣಾರೆಡ್ಡಿ, ಸುಭಾಷ್ ರೆಡ್ಡಿ, ವೆಂಕಟರೆಡ್ಡಿ, ಬಲವಂತ ರೆಡ್ಡಿ, ಸಾಯಿನಾಥ್ ರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ ಅಗೌರವ ತೋರಿದ್ದು, ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ರೆಡ್ಡಿ ಸಮಾಜ ಆಗ್ರಹಿಸಿದೆ.</p>.<p>ಈ ಸಂಬಂಧ ಸಮಾಜದ ಪ್ರಮುಖರು ನಗರದಲ್ಲಿ ಶನಿವಾರ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.</p>.<p>ಜಯಂತಿ ದಿನ ಯಾವುದೋ ಒಂದು ಮೂಲೆಯಲ್ಲಿರುವ ಹೇಮರೆಡ್ಡಿ ಮಲ್ಲಮ್ಮನವರ ಫೋಟೋ ತಂದು ಜಯಂತಿ ಆಚರಿಸಿ ಅಗೌರವ ತೋರಿದ್ದಾರೆ. ಈ ಸಂಬಂಧ ಈಗಾಗಲೇ ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ತಿಳಿಸಿದ್ದಾರೆ.</p>.<p>ಪಿಡಿಒ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದರೆ ಮೇ 21ರಂದು ಪಂಚಾಯಿತಿ ಕಚೇರಿ ಎದುರು ಸಮಾಜದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.</p>.<p>ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷ ಶಂಕರ ರೆಡ್ಡಿ, ಯುವ ಘಟಕದ ಜಿಲ್ಲಾಧ್ಯಕ್ಷ ಸಂತೋಷ್ ರೆಡ್ಡಿ ಆಣದೂರ್, ಪ್ರಮುಖರಾದ ಪೆಂಟಾರೆಡ್ಡಿ, ವಿಜಯರೆಡ್ಡಿ, ದೀಪಕರೆಡ್ಡಿ, ಜಗನ್ನಾಥ್ ರೆಡ್ಡಿ, ಯಮರೆಡ್ಡಿ, ಕೃಷ್ಣಾರೆಡ್ಡಿ, ಸುಭಾಷ್ ರೆಡ್ಡಿ, ವೆಂಕಟರೆಡ್ಡಿ, ಬಲವಂತ ರೆಡ್ಡಿ, ಸಾಯಿನಾಥ್ ರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>