<p><strong>ಬೀದರ್:</strong> ‘ಈಗ ವಿಜ್ಞಾನ ಕಲಾ ಹಾಗೂ ವಾಣಿಜ್ಯ ವಿಭಾಗದ ಪದವೀಧರರಿಗೆ ಬಹು ಬೇಡಿಕೆ ಇದೆ’ ಎಂದು ಅಕ್ಕ ಮಹಾದೇವಿ ಮಹಿಳಾ ಕಾಲೇಜು ಪ್ರಾಚಾರ್ಯ ಪ್ರೊ.ಎಸ್.ಜಿ. ಹುಗ್ಗೆ ಪಾಟೀಲ ಹೇಳಿದರು.</p>.<p>ಇಲ್ಲಿಯ ಅಕ್ಕ ಮಹಾದೇವಿ ಮಹಿಳಾ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಬಿ.ಎ, ಬಿ.ಕಾಂ, ಬಿ.ಎಸ್ಸಿ ಪ್ರಥಮ ವರ್ಷದ ವಿದ್ಯಾರ್ಥಿನಿಯರ ಕಾರ್ಯಾಗಾರ ಹಾಗೂ ವಿದ್ಯಾರ್ಥಿನಿಯರ ಒಕ್ಕೂಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ತಾಂತ್ರಿಕ ವಿಭಾಗದಲ್ಲಿ ನೌಕರಿಗಳ ಜತೆ ವೇತನವೂ ಕಡಿಮೆಯಾಗುತ್ತಿದೆ’ ಎಂದು ತಿಳಿಸಿದರು.<br />‘ಬಿ.ಎ, ಬಿ.ಎಸ್ಸಿ, ಬಿ.ಕಾಂ ನಂತರ ಎರಡು ವರ್ಷಗಳ ಸ್ನಾತಕೋತ್ತರ ಪದವಿ ಪೂರೈಸಿದರೆ ಉಜ್ವಲ ಭವಿಷ್ಯ ಇದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆದು ಉಪನ್ಯಾಸಕರಾಗಿ ಆಯ್ಕೆಯಾದರೆ ಮಾಸಿಕ ₹ 80 ಸಾವಿರದಿಂದ ₹ 90 ಸಾವಿರ ವರೆಗೂ ವೇತನ ಪಡೆಯಬಹುದು. ಐದು ವರ್ಷ ಪರಿಶ್ರಮ ವಹಿಸಿದರೆ ಜೀವನವಿಡೀ ಸುಖವಾಗಿ ಇರಬಹುದು’ ಎಂದು ಹೇಳಿದರು.</p>.<p>‘ಮಹಿಳಾ ಶಿಕ್ಷಣಕ್ಕೆ ಉತ್ತೇಜನ ನೀಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಸೌಲಭ್ಯಗಳನ್ನು ಒದಗಿಸುತ್ತಿವೆ. ಅವುಗಳ ಪ್ರಯೋಜನ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಕನ್ನಡ ವಿಭಾಗದ ಮುಖ್ಯಸ್ಥ ವಿಶ್ವನಾಥ ಬಿ. ಕಿವಡೆ, ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ವಿಜಯಕುಮಾರ ಬಿರಾದಾರ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ವಿಜಯಲಕ್ಷ್ಮಿ ಪಾಟೀಲ ಮಾತನಾಡಿದರು.</p>.<p>ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಮಹಾವಿದ್ಯಾಲಯದ ವಿದ್ಯಾರ್ಥಿನಿಯರ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ವೀಣಾಕುಮಾರಿ, ಡಾ. ಗಂಗಾಂಬಿಕೆ ಪಾಟೀಲ, ಗಿರಿಜಾ ಪಾಟೀಲ, ಡಾ. ಸುನಂದಾ ಗಂಗೂ, ಶರಣಪ್ಪ ದುಬಲಗುಂಡೆ ಉಪಸ್ಥಿತರಿದ್ದರು. ಪ್ರೊ. ಓಂಕಾಂತ ಪಾಟೀಲ ನಿರೂಪಿಸಿದರು. ಡಾ. ಓಂಕಾಶ ಖಂಡ್ರೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ಈಗ ವಿಜ್ಞಾನ ಕಲಾ ಹಾಗೂ ವಾಣಿಜ್ಯ ವಿಭಾಗದ ಪದವೀಧರರಿಗೆ ಬಹು ಬೇಡಿಕೆ ಇದೆ’ ಎಂದು ಅಕ್ಕ ಮಹಾದೇವಿ ಮಹಿಳಾ ಕಾಲೇಜು ಪ್ರಾಚಾರ್ಯ ಪ್ರೊ.ಎಸ್.ಜಿ. ಹುಗ್ಗೆ ಪಾಟೀಲ ಹೇಳಿದರು.</p>.<p>ಇಲ್ಲಿಯ ಅಕ್ಕ ಮಹಾದೇವಿ ಮಹಿಳಾ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಬಿ.ಎ, ಬಿ.ಕಾಂ, ಬಿ.ಎಸ್ಸಿ ಪ್ರಥಮ ವರ್ಷದ ವಿದ್ಯಾರ್ಥಿನಿಯರ ಕಾರ್ಯಾಗಾರ ಹಾಗೂ ವಿದ್ಯಾರ್ಥಿನಿಯರ ಒಕ್ಕೂಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ತಾಂತ್ರಿಕ ವಿಭಾಗದಲ್ಲಿ ನೌಕರಿಗಳ ಜತೆ ವೇತನವೂ ಕಡಿಮೆಯಾಗುತ್ತಿದೆ’ ಎಂದು ತಿಳಿಸಿದರು.<br />‘ಬಿ.ಎ, ಬಿ.ಎಸ್ಸಿ, ಬಿ.ಕಾಂ ನಂತರ ಎರಡು ವರ್ಷಗಳ ಸ್ನಾತಕೋತ್ತರ ಪದವಿ ಪೂರೈಸಿದರೆ ಉಜ್ವಲ ಭವಿಷ್ಯ ಇದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆದು ಉಪನ್ಯಾಸಕರಾಗಿ ಆಯ್ಕೆಯಾದರೆ ಮಾಸಿಕ ₹ 80 ಸಾವಿರದಿಂದ ₹ 90 ಸಾವಿರ ವರೆಗೂ ವೇತನ ಪಡೆಯಬಹುದು. ಐದು ವರ್ಷ ಪರಿಶ್ರಮ ವಹಿಸಿದರೆ ಜೀವನವಿಡೀ ಸುಖವಾಗಿ ಇರಬಹುದು’ ಎಂದು ಹೇಳಿದರು.</p>.<p>‘ಮಹಿಳಾ ಶಿಕ್ಷಣಕ್ಕೆ ಉತ್ತೇಜನ ನೀಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಸೌಲಭ್ಯಗಳನ್ನು ಒದಗಿಸುತ್ತಿವೆ. ಅವುಗಳ ಪ್ರಯೋಜನ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಕನ್ನಡ ವಿಭಾಗದ ಮುಖ್ಯಸ್ಥ ವಿಶ್ವನಾಥ ಬಿ. ಕಿವಡೆ, ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ವಿಜಯಕುಮಾರ ಬಿರಾದಾರ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ವಿಜಯಲಕ್ಷ್ಮಿ ಪಾಟೀಲ ಮಾತನಾಡಿದರು.</p>.<p>ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಮಹಾವಿದ್ಯಾಲಯದ ವಿದ್ಯಾರ್ಥಿನಿಯರ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ವೀಣಾಕುಮಾರಿ, ಡಾ. ಗಂಗಾಂಬಿಕೆ ಪಾಟೀಲ, ಗಿರಿಜಾ ಪಾಟೀಲ, ಡಾ. ಸುನಂದಾ ಗಂಗೂ, ಶರಣಪ್ಪ ದುಬಲಗುಂಡೆ ಉಪಸ್ಥಿತರಿದ್ದರು. ಪ್ರೊ. ಓಂಕಾಂತ ಪಾಟೀಲ ನಿರೂಪಿಸಿದರು. ಡಾ. ಓಂಕಾಶ ಖಂಡ್ರೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>