ಹಿಂದಿನ ಬಿಜೆಪಿ ಸರ್ಕಾರ ಬಸವಕಲ್ಯಾಣದ ನೂತನ ಅನುಭವ ಮಂಟಪಕ್ಕೆ ₹650 ಕೋಟಿ ಅನುದಾನ ಮಂಜೂರು ಮಾಡಿ, ₹200 ಕೋಟಿ ಬಿಡುಗಡೆಗೊಳಿಸಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಇದುವರೆಗೆ ನಯಾಪೈಸೆ ಬಿಡುಗಡೆಗೊಳಿಸಿಲ್ಲ. ಇದರಿಂದ ಬಸವ ಭಕ್ತರಿಗೆ ನೋವಾಗಿದೆ. ಬಸವಕಲ್ಯಾಣ ಸಮೀಪ ಶಿವಾಜಿ ಪಾರ್ಕ್ ನಿರ್ಮಾಣಕ್ಕೆ ಬಿಜೆಪಿ ಸರ್ಕಾರ 10 ಎಕರೆ ಜಮೀನು ನೀಡಿದೆ. ಆದರೆ, ಅದರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಯಾವುದೇ ಅನುದಾನ ನೀಡಿಲ್ಲ ಎಂದು ಆರೋಪಿಸಿದ್ದಾರೆ.