<p>ಬೀದರ್: ಪ್ರಸ್ತುತ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಷೀನ್ ಲರ್ನಿಂಗ್ ಕೋರ್ಸ್ಗೆ ಬಹು ಬೇಡಿಕೆ ಇದೆ. ನಾಲ್ಕು ವರ್ಷಗಳ ಕೋರ್ಸ್ ಪೂರೈಸುತ್ತಲೇ ಐಟಿ ಕಂಪೆನಿಗಳಲ್ಲಿ ಉದ್ಯೋಗ ಅವಕಾಶಗಳು ಲಭಿಸುತ್ತಿವೆ ಎಂದು ಪ್ರಾಚಾರ್ಯ ಡಾ. ರವೀಂದ್ರ ಎಕಲಾರಕರ್ ತಿಳಿಸಿದರು.</p>.<p>ಇಲ್ಲಿಯ ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಷೀನ್ ಲರ್ನಿಂಗ್ ಕೋರ್ಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಜಿಲ್ಲೆಯ ವಿದ್ಯಾರ್ಥಿಗಳು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಷೀನ್ ಲರ್ನಿಂಗ್ ಕೋರ್ಸ್ ಸದುಪಯೋಗ ಪಡೆಯಬೇಕು ಎಂದು ಗುರುನಾನಕ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷೆ ರೇಷ್ಮಾ ಕೌರ್ ಹೇಳಿದರು.</p>.<p>ವಿದ್ಯಾರ್ಥಿಗಳ ಓದು ಪರೀಕ್ಷೆಗೆ ಸೀಮಿತವಾಗಬಾರದು. ಓದಿನ ಉದ್ದೇಶ ಜ್ಞಾನಾರ್ಜನೆ ಆಗಬೇಕು. ಮೊಬೈಲ್ ಬಂದ ನಂತರ ಓದುವ ಹವ್ಯಾಸ ಕಡಿಮೆಯಾಗುತ್ತಿದೆ. ಮೊಬೈಲ್ ಅನ್ನು ರಚನಾತ್ಮಕ ಉದ್ದೇಶಕ್ಕೆ ಬಳಸಿಕೊಳ್ಳುವವರ ಸಂಖ್ಯೆ ಹೆಚ್ಚುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಕರ್ನಲ್ ಡಾ.ಬಿ.ಎಸ್. ಧಾಲಿವಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಪ್ರಸ್ತುತ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಷೀನ್ ಲರ್ನಿಂಗ್ ಕೋರ್ಸ್ಗೆ ಬಹು ಬೇಡಿಕೆ ಇದೆ. ನಾಲ್ಕು ವರ್ಷಗಳ ಕೋರ್ಸ್ ಪೂರೈಸುತ್ತಲೇ ಐಟಿ ಕಂಪೆನಿಗಳಲ್ಲಿ ಉದ್ಯೋಗ ಅವಕಾಶಗಳು ಲಭಿಸುತ್ತಿವೆ ಎಂದು ಪ್ರಾಚಾರ್ಯ ಡಾ. ರವೀಂದ್ರ ಎಕಲಾರಕರ್ ತಿಳಿಸಿದರು.</p>.<p>ಇಲ್ಲಿಯ ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಷೀನ್ ಲರ್ನಿಂಗ್ ಕೋರ್ಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಜಿಲ್ಲೆಯ ವಿದ್ಯಾರ್ಥಿಗಳು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಷೀನ್ ಲರ್ನಿಂಗ್ ಕೋರ್ಸ್ ಸದುಪಯೋಗ ಪಡೆಯಬೇಕು ಎಂದು ಗುರುನಾನಕ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷೆ ರೇಷ್ಮಾ ಕೌರ್ ಹೇಳಿದರು.</p>.<p>ವಿದ್ಯಾರ್ಥಿಗಳ ಓದು ಪರೀಕ್ಷೆಗೆ ಸೀಮಿತವಾಗಬಾರದು. ಓದಿನ ಉದ್ದೇಶ ಜ್ಞಾನಾರ್ಜನೆ ಆಗಬೇಕು. ಮೊಬೈಲ್ ಬಂದ ನಂತರ ಓದುವ ಹವ್ಯಾಸ ಕಡಿಮೆಯಾಗುತ್ತಿದೆ. ಮೊಬೈಲ್ ಅನ್ನು ರಚನಾತ್ಮಕ ಉದ್ದೇಶಕ್ಕೆ ಬಳಸಿಕೊಳ್ಳುವವರ ಸಂಖ್ಯೆ ಹೆಚ್ಚುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಕರ್ನಲ್ ಡಾ.ಬಿ.ಎಸ್. ಧಾಲಿವಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>