ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟವನ್ನು ಶಾಶ್ವತ ಅನುದಾನ ಪಡೆಯುವ ಸಂಸ್ಥೆಯನ್ನಾಗಿ ಪರಿಗಣಿಸಬೇಕು. ಜಯದೇವಿ ತಾಯಿ ಲಿಗಾಡೆ, ಎಸ್.ಎಂ. ಪಂಡಿತ, ಎಂ.ಆರ್. ಬುದ್ಧಿವಂತ ಶೆಟ್ಟರ್, ಪಂಡಿತ ಸಿದ್ಧರಾಮ ಜಂಬಲದಿನ್ನಿ, ಡಾ. ಸಿದ್ಧಯ್ಯ ಪುರಾಣಿಕ, ಡಾ. ಸುಭದ್ರಮ್ಮ ಮನಸೂರು, ಎಂ.ಪಿ. ಪ್ರಕಾಶ ಹೆಸರಲ್ಲಿ ಟ್ರಸ್ಟ್ ಸ್ಥಾಪಿಸಬೇಕು. ಕಲ್ಯಾಣ ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ ರಚಿಸಬೇಕು. ಕಲಾವಿದರ ಮಾಸಾಶನ ₹ 2 ಸಾವಿರದಿಂದ ರೂ. 5 ಸಾವಿರಕ್ಕೆ ಹೆಚ್ಚಿಸಬೇಕು. ಮಾಸಾಶನ ವಯೋಮಿತಿ 58 ರಿಂದ 50 ವರ್ಷಕ್ಕೆ ಇಳಿಸಬೇಕು. ಸರ್ಕಾರಿ ಶಾಲೆಗಳಲ್ಲಿ ರಂಗ, ಸಂಗೀತ ಶಿಕ್ಷಕರನ್ನು ನೇಮಿಸಬೇಕು. ವಸತಿ ಶಾಲೆಗಳಲ್ಲಿ ಜನಪದ ಶಿಕ್ಷಕರ ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.