ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮರ್ಪಕ ಬೆಲೆ ಘೋಷಿಸಲು ಆಗ್ರಹ

Last Updated 12 ಜನವರಿ 2022, 6:27 IST
ಅಕ್ಷರ ಗಾತ್ರ

ಭಾಲ್ಕಿ: ರೈತರು ಬೆಳೆದ ಬೆಳೆಗಳಿಗೆ ಲಾಭದಾಯಕ ಬೆಲೆ ಘೋಷಿಸುವಂತೆ ಆಗ್ರಹಿಸಿ ಮಂಗಳವಾರ ಭಾರತೀಯ ಕಿಸಾನ್‌ ಸಂಘದ ಪದಾಧಿಕಾರಿಗಳು ತಹಶೀಲ್ದಾರ್‌ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿ ಮನವಿ ಸಲ್ಲಿಸಿದರು.

ನಂತರ ಮಾತನಾಡಿದ ತಾಲ್ಲೂಕು ಅಧ್ಯಕ್ಷ ಪ್ರಭು ಮೂಲಗೆ, ರೈತರು ಕಷ್ಟಪಟ್ಟು ಬೆಳೆದ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಸಿಗುತ್ತಿಲ್ಲ. ಇದರಿಂದ ಅನ್ನದಾತರು ಸಂಕಷ್ಟದಲ್ಲಿ ಹುಟ್ಟಿ ಸಂಕಷ್ಟದಲ್ಲಿಯೇ ಸಾಯುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರಿಗೆ ಉತ್ಪಾದನಾ ವೆಚ್ಚದ ಆಧಾರದ ಮೇಲೆ ಲಾಭದಾಯಕ ಬೆಲೆ ದೊರೆಯುವಂತಾಗಬೇಕು. ಅಂದಾಗ ಮಾತ್ರ ರೈತರ ಆರ್ಥಿಕ ಸ್ಥಿತಿ ಸುಧಾರಿಸಲು ಸಾಧ್ಯ. ಹಾಗಾಗಿ, ಕೇವಲ ಬೆಂಬಲ ಬೆಲೆ ಘೋಷಿಸಿ ಸುಮ್ಮನಾದರೆ ಸಾಲದು. ಹಣದುಬ್ಬರಕ್ಕೆ ಅನುಗುಣವಾಗಿ ಬೆಳೆಗಳ ದರ ನಿಗದಿಪಡಿಸಬೇಕು. ಘೋಷಿತ ಬೆಲೆಗಿಂತ ಕಡಿಮೆ ಬೆಲೆಗೆ ಮಾರಾಟವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಮುಖರಾದ ಅಮಿತ್ ಪಾಟೀಲ, ಸುನಿಲ್‌ಕುಮಾರ್ ದೇಶಮುಖ್, ಬಸವರಾಜ್ ಪಾಟೀಲ. ರವಿ ಸಿರ್ಸಿ, ಪ್ರಶಾಂತ ಪಾಟೀಲ, ಧನರಾಜ್ ಪಾಟೀಲ, ದೇವಿದಾಸ ಜೋಶಿ, ಉದಯರಾಜ್ ಪಟ್ನೆ, ಮಹದೇವ, ಮೋಷಿನ್ ಖುರೇಶಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT