ಅಸೋಸಿಯೇಷನ್ ಜಿಲ್ಲಾ ಕಾರ್ಯದರ್ಶಿ, ನಗರಸಭೆ ನಾಮನಿರ್ದೇಶಿತ ಸದಸ್ಯ ಸುನೀಲ ಬಚ್ಚನ್ ಮಾತನಾಡಿ, ಭಾರತಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಕ್ರೈಸ್ತ ಧರ್ಮೀಯರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುತ್ತ ಬಂದಿದ್ದಾರೆ. ಕಾಂಗ್ರೆಸ್ ಅಂದರೆ ಕ್ರೈಸ್ತರು, ಕ್ರೈಸ್ತರೆಂದರೆ ಕಾಂಗ್ರೆಸ್ ಎಂಬಂತೆ ಅವಿನಾಭಾವ ಸಂಬಂಧವಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಮಾರು 10 ಲಕ್ಷಕ್ಕೂ ಅಧಿಕ ಕ್ರೈಸ್ತ ಧರ್ಮೀಯರಿದ್ದಾರೆ. ಆದರೆ, ಸಮುದಾಯಕ್ಕೆ ರಾಜಕೀಯವಾಗಿ ಪ್ರಾತಿನಿಧ್ಯ ಸಿಕ್ಕಿಲ್ಲ. ಈ ಸಲ ಸಮಾಜಕ್ಕೆ ಪ್ರಾತಿನಿಧ್ಯ ಕೊಟ್ಟು ಆಗಿರುವ ಅನ್ಯಾಯ ಸರಿಪಡಿಸಬೇಕೆಂದು ಒತ್ತಾಯಿಸಿದರು.