<p><strong>ಬೀದರ್</strong>: ಜಿಲ್ಲೆಯ ಬೆಳೆ ಸಮೀಕ್ಷೆಗಾರರಿಗೆ ಸುರಕ್ಷಾ ಕವಚ, ಸಾಧನಗಳನ್ನು ಒದಗಿಸಬೇಕೆಂದು ಬೆಳೆ ಸಮೀಕ್ಷೆಗಾರರು ಆಗ್ರಹಿಸಿದ್ದಾರೆ.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿಗೆ ಬರೆದ ಮನವಿ ಪತ್ರವನ್ನು ಜಂಟಿ ಕೃಷಿ ನಿರ್ದೇಶಕ ಡಾ. ರತೇಂದ್ರನಾಥ ಸುಗೂರ ಅವರಿಗೆ ಸಲ್ಲಿಸಿ ಒತ್ತಾಯಿಸಿದ್ದಾರೆ.</p>.<p>ಬೆಳೆ ಸಮೀಕ್ಷೆ ಕೈಗೊಳ್ಳುವಾಗ ಹಲವು ರೀತಿಯ ಸಮಸ್ಯೆಗಳು ಎದುರಾಗುತ್ತಿವೆ. ವಿಷಜಂತುಗಳ ತೊಂದರೆ ಇದೆ. ಜೀವಕ್ಕೂ ಕುತ್ತು ಬರಬಹುದು. ಬೆಳೆ ಸಮೀಕ್ಷೆ ವೇಳೆ ಮೃತಪಟ್ಟರೆ ₹5 ಲಕ್ಷ ಪರಿಹಾರ ಕೊಡಬೇಕು. ಅಗತ್ಯ ಸುರಕ್ಷ ಸಾಧನಗಳನ್ನು ಒದಗಿಸಬೇಕು. ಕನಿಷ್ಠ ಗೌರವ ಧನ ಮಾಸಿಕ ₹10 ಸಾವಿರ ನಿಗದಿಪಡಿಸಬೇಕು. ಎಲ್ಲರಿಗೂ ಗುರುತಿನ ಚೀಟಿ ಕೊಡಬೇಕು. ಜಿಪಿಎಸ್ ನಕ್ಷೆ ವ್ಯವಸ್ಥೆ ಮಾಡಬೇಕು. ಉತ್ತಮ ಮೊಬೈಲ್, ಪವರ್ ಬ್ಯಾಂಕ್ ಒದಗಿಸಬೇಕು. ಹಿಸ್ಸಾ ಜಿಪಿಎಸ್ ವ್ಯವಸ್ಥೆ ಸರಿಪಡಿಸಬೇಕು ಎನ್ನುವುದು ಪ್ರಮುಖ ಬೇಡಿಕೆಗಳಾಗಿವೆ.</p>.<p>ಬೆಳೆ ಸಮೀಕ್ಷೆಗಾರರಾದ ಲೋಕೇಶ, ಬಸವರಾಜ ಕುಪ್ಪೆ, ಸಂಜುಕುಮಾರ, ವೀರಶೆಟ್ಟಿ, ಏಕನಾಥ ಮೇತ್ರೆ, ನಾಗಶೇಟ್ಟಿ, ಸಂತೋಷ, ಶ್ರೀಕಾಂತ, ಸುಂದರ, ರಮೇಶ, ಸೊಗೇಲ್, ದಾವುದ್ ಮಿಯ್ಯಾ, ನಾಗರಾಜ, ಕಲ್ಯಾಣಿ, ನರಸಪ್ಪ, ಪ್ರಕಾಶ, ಬಲಭೀಮ, ಮಧುಕರ, ಗುಂಡಪ್ಪ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಜಿಲ್ಲೆಯ ಬೆಳೆ ಸಮೀಕ್ಷೆಗಾರರಿಗೆ ಸುರಕ್ಷಾ ಕವಚ, ಸಾಧನಗಳನ್ನು ಒದಗಿಸಬೇಕೆಂದು ಬೆಳೆ ಸಮೀಕ್ಷೆಗಾರರು ಆಗ್ರಹಿಸಿದ್ದಾರೆ.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿಗೆ ಬರೆದ ಮನವಿ ಪತ್ರವನ್ನು ಜಂಟಿ ಕೃಷಿ ನಿರ್ದೇಶಕ ಡಾ. ರತೇಂದ್ರನಾಥ ಸುಗೂರ ಅವರಿಗೆ ಸಲ್ಲಿಸಿ ಒತ್ತಾಯಿಸಿದ್ದಾರೆ.</p>.<p>ಬೆಳೆ ಸಮೀಕ್ಷೆ ಕೈಗೊಳ್ಳುವಾಗ ಹಲವು ರೀತಿಯ ಸಮಸ್ಯೆಗಳು ಎದುರಾಗುತ್ತಿವೆ. ವಿಷಜಂತುಗಳ ತೊಂದರೆ ಇದೆ. ಜೀವಕ್ಕೂ ಕುತ್ತು ಬರಬಹುದು. ಬೆಳೆ ಸಮೀಕ್ಷೆ ವೇಳೆ ಮೃತಪಟ್ಟರೆ ₹5 ಲಕ್ಷ ಪರಿಹಾರ ಕೊಡಬೇಕು. ಅಗತ್ಯ ಸುರಕ್ಷ ಸಾಧನಗಳನ್ನು ಒದಗಿಸಬೇಕು. ಕನಿಷ್ಠ ಗೌರವ ಧನ ಮಾಸಿಕ ₹10 ಸಾವಿರ ನಿಗದಿಪಡಿಸಬೇಕು. ಎಲ್ಲರಿಗೂ ಗುರುತಿನ ಚೀಟಿ ಕೊಡಬೇಕು. ಜಿಪಿಎಸ್ ನಕ್ಷೆ ವ್ಯವಸ್ಥೆ ಮಾಡಬೇಕು. ಉತ್ತಮ ಮೊಬೈಲ್, ಪವರ್ ಬ್ಯಾಂಕ್ ಒದಗಿಸಬೇಕು. ಹಿಸ್ಸಾ ಜಿಪಿಎಸ್ ವ್ಯವಸ್ಥೆ ಸರಿಪಡಿಸಬೇಕು ಎನ್ನುವುದು ಪ್ರಮುಖ ಬೇಡಿಕೆಗಳಾಗಿವೆ.</p>.<p>ಬೆಳೆ ಸಮೀಕ್ಷೆಗಾರರಾದ ಲೋಕೇಶ, ಬಸವರಾಜ ಕುಪ್ಪೆ, ಸಂಜುಕುಮಾರ, ವೀರಶೆಟ್ಟಿ, ಏಕನಾಥ ಮೇತ್ರೆ, ನಾಗಶೇಟ್ಟಿ, ಸಂತೋಷ, ಶ್ರೀಕಾಂತ, ಸುಂದರ, ರಮೇಶ, ಸೊಗೇಲ್, ದಾವುದ್ ಮಿಯ್ಯಾ, ನಾಗರಾಜ, ಕಲ್ಯಾಣಿ, ನರಸಪ್ಪ, ಪ್ರಕಾಶ, ಬಲಭೀಮ, ಮಧುಕರ, ಗುಂಡಪ್ಪ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>