<p><strong>ಬೀದರ್:</strong> ಜಿಲ್ಲೆಯಲ್ಲಿ ಸತತ ಮಳೆಯಿಂದ ಬೆಳೆ ಹಾನಿಗೀಡಾದ ರೈತರಿಗೆ ಪ್ರತಿ ಎಕರೆಗೆ ₹ 25 ಸಾವಿರ ಪರಿಹಾರ ಒದಗಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ)ಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ ಆಗ್ರಹಿಸಿದ್ದಾರೆ.</p>.<p>ವಾರದ ಅವಧಿಯಲ್ಲಿ ಸುರಿದ ಮಳೆಗೆ ಉದ್ದು, ಹೆಸರು, ಸೋಯಾಬೀನ್, ತೊಗರಿ, ಹತ್ತಿ, ಕಬ್ಬು ಬೆಳೆಗಳು ನೀರು ಪಾಲಾಗಿವೆ. ಸಾಲ ಮಾಡಿ ಬಿತ್ತನೆ ಮಾಡಿದ್ದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದ್ದಾರೆ.</p>.<p>ಕೋವಿಡ್ನಿಂದ ತೊಂದರೆಯಲ್ಲಿ ಇರುವ ರೈತರು ಈ ಬಾರಿ ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದರು. ಆದರೆ, ನಿರಂತರ ಅವರ ಆಸೆಯನ್ನು ನುಚ್ಚುನೂರು ಮಾಡಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಎಂದು ತಿಳಿಸಿದ್ದಾರೆ.</p>.<p>ಮಳೆಯ ಆರ್ಭಟಕ್ಕೆ ಜಿಲ್ಲೆಯ ಗ್ರಾಮೀಣ ಪ್ರದೇಶದ ಅನೇಕ ರಸ್ತೆಗಳು ಕಿತ್ತುಕೊಂಡು ಹೋಗಿವೆ. ಸೇತುವೆಗಳು ಕುಸಿದಿವೆ. ಅನೇಕ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. 200ಕ್ಕೂ ಹೆಚ್ಚು ಮನೆಗಳು ಬಿದ್ದಿವೆ. ಜಿಲ್ಲೆಯಲ್ಲಿ ಆಸ್ತಿ ಪಾಸ್ತಿಗೆ ಅಪಾರ ಹಾನಿ ಉಂಟಾಗಿದೆ ಎಂದು ಹೇಳಿದ್ದಾರೆ.</p>.<p>ರಾಜ್ಯ ಸರ್ಕಾರ ಕೂಡಲೇ ಜಿಲ್ಲೆಯನ್ನು ಅತಿವೃಷ್ಟಿ ಪೀಡಿತ ಪ್ರದೇಶ ಎಂದು ಘೋಷಿಸಬೇಕು. ಬೆಳೆ ಹಾನಿ, ಮನೆ ಕಳೆದುಕೊಂಡವರಿಗೆ ತಕ್ಷಣ ಪರಿಹಾರ ಕೊಡಬೇಕು. ಹಾಳಾದ ರಸ್ತೆ, ಸೇತುವೆಗಳ ದುರಸ್ತಿ ಕಾರ್ಯ ಯುದ್ಧೋಪಾದಿಯಲ್ಲಿ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ರೈತರು ಸಹಕಾರ ಹಾಗೂ ರಾಷ್ಟ್ರೀಕೃತ ಬ್ಯಾಂಕ್ಗಳಿಂದ ಪಡೆದ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಮುಂದಿನ ಕೃಷಿ ಚಟುವಟಿಕೆಗಾಗಿ ಹೊಸ ಸಾಲ ಮಂಜೂರು ಮಾಡಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಜಿಲ್ಲೆಯಲ್ಲಿ ಸತತ ಮಳೆಯಿಂದ ಬೆಳೆ ಹಾನಿಗೀಡಾದ ರೈತರಿಗೆ ಪ್ರತಿ ಎಕರೆಗೆ ₹ 25 ಸಾವಿರ ಪರಿಹಾರ ಒದಗಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ)ಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ ಆಗ್ರಹಿಸಿದ್ದಾರೆ.</p>.<p>ವಾರದ ಅವಧಿಯಲ್ಲಿ ಸುರಿದ ಮಳೆಗೆ ಉದ್ದು, ಹೆಸರು, ಸೋಯಾಬೀನ್, ತೊಗರಿ, ಹತ್ತಿ, ಕಬ್ಬು ಬೆಳೆಗಳು ನೀರು ಪಾಲಾಗಿವೆ. ಸಾಲ ಮಾಡಿ ಬಿತ್ತನೆ ಮಾಡಿದ್ದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದ್ದಾರೆ.</p>.<p>ಕೋವಿಡ್ನಿಂದ ತೊಂದರೆಯಲ್ಲಿ ಇರುವ ರೈತರು ಈ ಬಾರಿ ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದರು. ಆದರೆ, ನಿರಂತರ ಅವರ ಆಸೆಯನ್ನು ನುಚ್ಚುನೂರು ಮಾಡಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಎಂದು ತಿಳಿಸಿದ್ದಾರೆ.</p>.<p>ಮಳೆಯ ಆರ್ಭಟಕ್ಕೆ ಜಿಲ್ಲೆಯ ಗ್ರಾಮೀಣ ಪ್ರದೇಶದ ಅನೇಕ ರಸ್ತೆಗಳು ಕಿತ್ತುಕೊಂಡು ಹೋಗಿವೆ. ಸೇತುವೆಗಳು ಕುಸಿದಿವೆ. ಅನೇಕ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. 200ಕ್ಕೂ ಹೆಚ್ಚು ಮನೆಗಳು ಬಿದ್ದಿವೆ. ಜಿಲ್ಲೆಯಲ್ಲಿ ಆಸ್ತಿ ಪಾಸ್ತಿಗೆ ಅಪಾರ ಹಾನಿ ಉಂಟಾಗಿದೆ ಎಂದು ಹೇಳಿದ್ದಾರೆ.</p>.<p>ರಾಜ್ಯ ಸರ್ಕಾರ ಕೂಡಲೇ ಜಿಲ್ಲೆಯನ್ನು ಅತಿವೃಷ್ಟಿ ಪೀಡಿತ ಪ್ರದೇಶ ಎಂದು ಘೋಷಿಸಬೇಕು. ಬೆಳೆ ಹಾನಿ, ಮನೆ ಕಳೆದುಕೊಂಡವರಿಗೆ ತಕ್ಷಣ ಪರಿಹಾರ ಕೊಡಬೇಕು. ಹಾಳಾದ ರಸ್ತೆ, ಸೇತುವೆಗಳ ದುರಸ್ತಿ ಕಾರ್ಯ ಯುದ್ಧೋಪಾದಿಯಲ್ಲಿ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ರೈತರು ಸಹಕಾರ ಹಾಗೂ ರಾಷ್ಟ್ರೀಕೃತ ಬ್ಯಾಂಕ್ಗಳಿಂದ ಪಡೆದ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಮುಂದಿನ ಕೃಷಿ ಚಟುವಟಿಕೆಗಾಗಿ ಹೊಸ ಸಾಲ ಮಂಜೂರು ಮಾಡಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>