ರಸ್ತೆ ಮಧ್ಯೆ ಸೃಷ್ಟಿಯಾಗಿರುವ ತಗ್ಗು ಗುಂಡಿಗಳನ್ನು ಭರ್ತಿ ಮಾಡುವಂತೆ ಎರಡು ವರ್ಷಗಳಿಂದ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ಉಪ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್, ನಗರಸಭೆ ಆಯುಕ್ತ, ಜಿಲ್ಲಾಧಿಕಾರಿ ಹಾಗೂ ಕಲಬುರ್ಗಿಯ ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸುತ್ತ ಬರಲಾಗಿದೆ. ಆದರೆ, ಈವರೆಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದಾರೆ.