<p><strong>ಬೀದರ್: </strong>ಕೃಷಿ ಉತ್ಪನ್ನ ಮಾರುಕಟ್ಟೆ ಶುಲ್ಕ ಹೆಚ್ಚಳವನ್ನು ಕೈಬಿಡಬೇಕು ಎಂದು ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಆಗ್ರಹಿಸಿದೆ.</p>.<p>ಸಂಸ್ಥೆಯ ಅಧ್ಯಕ್ಷ ಬಿ.ಜಿ. ಶೆಟಕಾರ್ ಹಾಗೂ ಕಾರ್ಯದರ್ಶಿ ಡಾ. ವೀರೇಂದ್ರ ಶಾಸ್ತ್ರಿ ಅವರು ಈ ಕುರಿತು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಎಸ್.ಟಿ. ಸೋಮಶೇಖರ ಅವರಿಗೆ ಪತ್ರ ಬರೆದಿದ್ದಾರೆ.</p>.<p>ಮಾರುಕಟ್ಟೆ ಶುಲ್ಕವನ್ನು ಶೇ 0.35 ಪೈಸೆಯಿಂದ ಶೇ 1ಕ್ಕೆ ಏರಿಕೆ ಮಾಡಿರುವುದು ಆಘಾತಕಾರಿ ಸಂಗತಿಯಾಗಿದೆ ಎಂದು ಹೇಳಿದ್ದಾರೆ.</p>.<p>ಕೃಷಿ ಉತ್ಪನ್ನ ಮಾರುಕಟ್ಟೆ ಹಾಗೂ ಕೃಷಿ ಉತ್ಪನ್ನ ವಹಿವಾಟಿಗೆ ಸಂಬಂಧಿಸಿದ ಮಾರ್ಗಸೂಚಿಯ ಪ್ರಕಾರ ಮಾರುಕಟ್ಟೆ ಪ್ರಾಂಗಣದ ಹೊರಗೆ ನಡೆಯುವ ವಹಿವಾಟಿನ ಮೇಲೆ ಯಾವುದೇ ನಿಯಂತ್ರಣವಾಗಲಿ, ಶುಲ್ಕವಾಗಲಿ ಇಲ್ಲ. ಆದರೆ, ಮಾರುಕಟ್ಟೆ ಒಳಗೆ ವಹಿವಾಟು ನಡೆಸಿದರೆ ಶುಲ್ಕ ಪಾವತಿಸಬೇಕಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಕೃಷಿ ಉತ್ಪನ್ನ ಹಾಗೂ ವಾಣಿಜ್ಯಕ್ಕೆ ಸಂಬಂಧಿಸಿದ ಕೇಂದ್ರ ಸರ್ಕಾರದ ಸುಗ್ರಿವಾಜ್ಞೆ ವಾಪಸ್ ಪಡೆಯಲು ಒತ್ತಾಯಿಸಿ ರೈತರು ದೇಶದಾದ್ಯಂತ ಪ್ರತಿಭಟನೆ ನಡೆಸುತ್ತಿರುವಾಗಲೇ ರಾಜ್ಯ ಸರ್ಕಾರ ರೈತ ಸಂಘಟನೆಗಳು ಹಾಗೂ ಮುಖಂಡರೊಂದಿಗೆ ಚರ್ಚಿಸದೆ, ಏಕಪಕ್ಷೀಯವಾಗಿ ಶುಲ್ಕ ಹೆಚ್ಚಳದ ನಿರ್ಧಾರ ಕೈಗೊಂಡಿದೆ ಎಂದು ಟೀಕಿಸಿದ್ದಾರೆ.</p>.<p>ಮಾರುಕಟ್ಟೆ ಪ್ರಾಂಗಣದ ಒಳಗೆ ಹಾಗೂ ಹೊರಗೆ ವಹಿವಾಟು ನಡೆಸುವ ವರ್ತಕರಿಗೆ ಒಂದೇ ತೆರನಾದ ಶುಲ್ಕ ವಿಧಿಸಬೇಕು.</p>.<p>ಸದ್ಯ ಇರುವ ಮಾರುಕಟ್ಟೆ ಶುಲ್ಕವನ್ನೇ ಮುಂದುವರಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಕೃಷಿ ಉತ್ಪನ್ನ ಮಾರುಕಟ್ಟೆ ಶುಲ್ಕ ಹೆಚ್ಚಳವನ್ನು ಕೈಬಿಡಬೇಕು ಎಂದು ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಆಗ್ರಹಿಸಿದೆ.</p>.<p>ಸಂಸ್ಥೆಯ ಅಧ್ಯಕ್ಷ ಬಿ.ಜಿ. ಶೆಟಕಾರ್ ಹಾಗೂ ಕಾರ್ಯದರ್ಶಿ ಡಾ. ವೀರೇಂದ್ರ ಶಾಸ್ತ್ರಿ ಅವರು ಈ ಕುರಿತು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಎಸ್.ಟಿ. ಸೋಮಶೇಖರ ಅವರಿಗೆ ಪತ್ರ ಬರೆದಿದ್ದಾರೆ.</p>.<p>ಮಾರುಕಟ್ಟೆ ಶುಲ್ಕವನ್ನು ಶೇ 0.35 ಪೈಸೆಯಿಂದ ಶೇ 1ಕ್ಕೆ ಏರಿಕೆ ಮಾಡಿರುವುದು ಆಘಾತಕಾರಿ ಸಂಗತಿಯಾಗಿದೆ ಎಂದು ಹೇಳಿದ್ದಾರೆ.</p>.<p>ಕೃಷಿ ಉತ್ಪನ್ನ ಮಾರುಕಟ್ಟೆ ಹಾಗೂ ಕೃಷಿ ಉತ್ಪನ್ನ ವಹಿವಾಟಿಗೆ ಸಂಬಂಧಿಸಿದ ಮಾರ್ಗಸೂಚಿಯ ಪ್ರಕಾರ ಮಾರುಕಟ್ಟೆ ಪ್ರಾಂಗಣದ ಹೊರಗೆ ನಡೆಯುವ ವಹಿವಾಟಿನ ಮೇಲೆ ಯಾವುದೇ ನಿಯಂತ್ರಣವಾಗಲಿ, ಶುಲ್ಕವಾಗಲಿ ಇಲ್ಲ. ಆದರೆ, ಮಾರುಕಟ್ಟೆ ಒಳಗೆ ವಹಿವಾಟು ನಡೆಸಿದರೆ ಶುಲ್ಕ ಪಾವತಿಸಬೇಕಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಕೃಷಿ ಉತ್ಪನ್ನ ಹಾಗೂ ವಾಣಿಜ್ಯಕ್ಕೆ ಸಂಬಂಧಿಸಿದ ಕೇಂದ್ರ ಸರ್ಕಾರದ ಸುಗ್ರಿವಾಜ್ಞೆ ವಾಪಸ್ ಪಡೆಯಲು ಒತ್ತಾಯಿಸಿ ರೈತರು ದೇಶದಾದ್ಯಂತ ಪ್ರತಿಭಟನೆ ನಡೆಸುತ್ತಿರುವಾಗಲೇ ರಾಜ್ಯ ಸರ್ಕಾರ ರೈತ ಸಂಘಟನೆಗಳು ಹಾಗೂ ಮುಖಂಡರೊಂದಿಗೆ ಚರ್ಚಿಸದೆ, ಏಕಪಕ್ಷೀಯವಾಗಿ ಶುಲ್ಕ ಹೆಚ್ಚಳದ ನಿರ್ಧಾರ ಕೈಗೊಂಡಿದೆ ಎಂದು ಟೀಕಿಸಿದ್ದಾರೆ.</p>.<p>ಮಾರುಕಟ್ಟೆ ಪ್ರಾಂಗಣದ ಒಳಗೆ ಹಾಗೂ ಹೊರಗೆ ವಹಿವಾಟು ನಡೆಸುವ ವರ್ತಕರಿಗೆ ಒಂದೇ ತೆರನಾದ ಶುಲ್ಕ ವಿಧಿಸಬೇಕು.</p>.<p>ಸದ್ಯ ಇರುವ ಮಾರುಕಟ್ಟೆ ಶುಲ್ಕವನ್ನೇ ಮುಂದುವರಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>