<p><strong>ಬೀದರ್</strong>: ‘ಹುಮನಾಬಾದ್ ಕೈಗಾರಿಕಾ ಪ್ರದೇಶದ ಕೈಗಾರಿಕೆಗಳಿಂದ ವಿಷಪೂರಿತ ರಾಸಾಯನಿಕ ಮಿಶ್ರಿತ ನೀರು ಬೇಕಾಬಿಟ್ಟಿ ಹರಿಸುತ್ತಿರುವುದರಿಂದ ಜನ ಹಾಗೂ ಜಾನುವಾರುಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ’ ಎಂದು ಸ್ವತಃ ಕೈಗಾರಿಕೋದ್ಯಮಿ ಆಗಿರುವ ಪರಮೇಶ್ವರ ಬೆಳಮಗಿ ಆರೋಪಿಸಿದರು.</p>.<p>ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆಯಿಂದ ಸಂಜೆಯವರೆಗೆ ಯಾವುದೇ ಅಡೆತಡೆಯಿಲ್ಲದೆ ವಿಷಪೂರಿತ ನೀರು ಹರಿಸಲಾಗುತ್ತಿದೆ. ಇದರಿಂದ ನೆರೆಯ ಕೈಗಾರಿಕೆಗಳಿಗೆ ಸಮಸ್ಯೆಯಾಗುತ್ತಿದೆ ಎಂದರು.</p>.<p>ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು, ಮಾಲಿನ್ಯ ನಿಯಂತ್ರಣ ಮಂಡಳಿಗೆ ಪತ್ರ ಬರೆದರೂ ಪ್ರಯೋಜನವಾಗಿಲ್ಲ. ಕೈಗಾರಿಕೆ ವಿರುದ್ಧ ಧ್ವನಿ ಎತ್ತಿದರೆ ಅವರಿಗೆ ತೊಂದರೆ ಕೊಡಲಾಗುತ್ತಿದೆ. ಈಗಾಗಲೇ ಈ ಭಾಗದ 11 ಕೈಗಾರಿಕೆಗಳನ್ನು ಬಂದ್ ಮಾಡಲಾಗಿದೆ. ವಾತಾವರಣ ಕಲುಷಿತಗೊಳಿಸುತ್ತಿರುವ ಕೈಗಾರಿಕೆಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಪಾರ್ವತಿ ಪರಮೇಶ್ವರ ಬೆಳಮಗಿ, ಪ್ರವೀಣ ಕೋಮಲ್, ಪ್ರಸನ್ನ ಕೋಮಲ್, ಮಲ್ಲಿನಾಥ ಬಿಲಗುಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ಹುಮನಾಬಾದ್ ಕೈಗಾರಿಕಾ ಪ್ರದೇಶದ ಕೈಗಾರಿಕೆಗಳಿಂದ ವಿಷಪೂರಿತ ರಾಸಾಯನಿಕ ಮಿಶ್ರಿತ ನೀರು ಬೇಕಾಬಿಟ್ಟಿ ಹರಿಸುತ್ತಿರುವುದರಿಂದ ಜನ ಹಾಗೂ ಜಾನುವಾರುಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ’ ಎಂದು ಸ್ವತಃ ಕೈಗಾರಿಕೋದ್ಯಮಿ ಆಗಿರುವ ಪರಮೇಶ್ವರ ಬೆಳಮಗಿ ಆರೋಪಿಸಿದರು.</p>.<p>ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆಯಿಂದ ಸಂಜೆಯವರೆಗೆ ಯಾವುದೇ ಅಡೆತಡೆಯಿಲ್ಲದೆ ವಿಷಪೂರಿತ ನೀರು ಹರಿಸಲಾಗುತ್ತಿದೆ. ಇದರಿಂದ ನೆರೆಯ ಕೈಗಾರಿಕೆಗಳಿಗೆ ಸಮಸ್ಯೆಯಾಗುತ್ತಿದೆ ಎಂದರು.</p>.<p>ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು, ಮಾಲಿನ್ಯ ನಿಯಂತ್ರಣ ಮಂಡಳಿಗೆ ಪತ್ರ ಬರೆದರೂ ಪ್ರಯೋಜನವಾಗಿಲ್ಲ. ಕೈಗಾರಿಕೆ ವಿರುದ್ಧ ಧ್ವನಿ ಎತ್ತಿದರೆ ಅವರಿಗೆ ತೊಂದರೆ ಕೊಡಲಾಗುತ್ತಿದೆ. ಈಗಾಗಲೇ ಈ ಭಾಗದ 11 ಕೈಗಾರಿಕೆಗಳನ್ನು ಬಂದ್ ಮಾಡಲಾಗಿದೆ. ವಾತಾವರಣ ಕಲುಷಿತಗೊಳಿಸುತ್ತಿರುವ ಕೈಗಾರಿಕೆಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಪಾರ್ವತಿ ಪರಮೇಶ್ವರ ಬೆಳಮಗಿ, ಪ್ರವೀಣ ಕೋಮಲ್, ಪ್ರಸನ್ನ ಕೋಮಲ್, ಮಲ್ಲಿನಾಥ ಬಿಲಗುಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>