<p><strong>ಬೀದರ್</strong>: ‘ಸ್ಥಗಿತಗೊಂಡಿರುವ ವಾಯಾ ಕಲಬುರಗಿ ಮೂಲಕ ಸಂಚರಿಸುತ್ತಿದದ ಬೀದರ್–ಬೆಂಗಳೂರು ರೈಲು ಪುನಃ ಓಡಿಸಬೇಕು’ ಎಂದು ಬೀದರ್ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಅಧ್ಯಕ್ಷ ಬಿ.ಜಿ. ಶೆಟಕಾರ, ಕಾರ್ಯದರ್ಶಿ ವಿರೇಂದ್ರ ಶಾಸ್ತ್ರಿ ಆಗ್ರಹಿಸಿದ್ದಾರೆ.</p>.<p>ಅವರು ಈ ಸಂಬಂಧ ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಪತ್ರ ಬರೆದಿದ್ದಾರೆ. ವಾಯಾ ವಿಕಾರಾಬಾದ್ ಬದಲು ಕಲಬುರಗಿ ಮೂಲಕ ರೈಲು ಓಡಿಸಬೇಕೆನ್ನುವುದು ಈ ಭಾಗದ ಜನರ ದಶಕಗಳ ಬೇಡಿಕೆ ಈಡೇರಿತ್ತು. ಆದರೆ, ಕಲಬುರಗಿ ಭಾಗದ ಕೆಲವು ತಾಲ್ಲೂಕುಗಳವರ ವಿರೋಧದಿಂದ ಸ್ಥಗಿತಗೊಳಿಸಲಾಗಿದ್ದು, ಇದು ಖಂಡನಾರ್ಹ ಎಂದು ತಿಳಿಸಿದ್ದಾರೆ.</p>.<p>ಕಲಬುರಗಿ ಮೂಲಕ ಸಂಚರಿಸಿದರೆ ಈ ಭಾಗದ ಸರ್ವಾಂಗೀಣ ಪ್ರಗತಿಗೆ ಸಹಕಾರಿಯಾಗುತ್ತದೆ. 2ರಿಂದ 3 ಗಂಟೆ ಸಮಯವೂ ಉಳಿತಾಯವಾಗುತ್ತದೆ. ಜನರ ಹಿತದೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಯ ದೃಷ್ಟಿಕೋನದಿಂದ ರೈಲು ಕಲಬುರಗಿ ಮೂಲಕ ಸಂಚರಿಸಿದರೆ ಉತ್ತಮ. ಆ ನಿಟ್ಟಿನಲ್ಲಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ಸ್ಥಗಿತಗೊಂಡಿರುವ ವಾಯಾ ಕಲಬುರಗಿ ಮೂಲಕ ಸಂಚರಿಸುತ್ತಿದದ ಬೀದರ್–ಬೆಂಗಳೂರು ರೈಲು ಪುನಃ ಓಡಿಸಬೇಕು’ ಎಂದು ಬೀದರ್ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಅಧ್ಯಕ್ಷ ಬಿ.ಜಿ. ಶೆಟಕಾರ, ಕಾರ್ಯದರ್ಶಿ ವಿರೇಂದ್ರ ಶಾಸ್ತ್ರಿ ಆಗ್ರಹಿಸಿದ್ದಾರೆ.</p>.<p>ಅವರು ಈ ಸಂಬಂಧ ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಪತ್ರ ಬರೆದಿದ್ದಾರೆ. ವಾಯಾ ವಿಕಾರಾಬಾದ್ ಬದಲು ಕಲಬುರಗಿ ಮೂಲಕ ರೈಲು ಓಡಿಸಬೇಕೆನ್ನುವುದು ಈ ಭಾಗದ ಜನರ ದಶಕಗಳ ಬೇಡಿಕೆ ಈಡೇರಿತ್ತು. ಆದರೆ, ಕಲಬುರಗಿ ಭಾಗದ ಕೆಲವು ತಾಲ್ಲೂಕುಗಳವರ ವಿರೋಧದಿಂದ ಸ್ಥಗಿತಗೊಳಿಸಲಾಗಿದ್ದು, ಇದು ಖಂಡನಾರ್ಹ ಎಂದು ತಿಳಿಸಿದ್ದಾರೆ.</p>.<p>ಕಲಬುರಗಿ ಮೂಲಕ ಸಂಚರಿಸಿದರೆ ಈ ಭಾಗದ ಸರ್ವಾಂಗೀಣ ಪ್ರಗತಿಗೆ ಸಹಕಾರಿಯಾಗುತ್ತದೆ. 2ರಿಂದ 3 ಗಂಟೆ ಸಮಯವೂ ಉಳಿತಾಯವಾಗುತ್ತದೆ. ಜನರ ಹಿತದೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಯ ದೃಷ್ಟಿಕೋನದಿಂದ ರೈಲು ಕಲಬುರಗಿ ಮೂಲಕ ಸಂಚರಿಸಿದರೆ ಉತ್ತಮ. ಆ ನಿಟ್ಟಿನಲ್ಲಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>