ಔರಾದ್: ಜಮೀನು ವಿವಾದದ ಕಾರಣ ಯುವಕರೊಬ್ಬರನ್ನು ಕೊಲೆ ಮಾಡಿದ ಆರೋಪದಲ್ಲಿ ಔರಾದ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಸಂದೀಪ ದೇವರಾಜ ಮಚಕುರಿ ಹಾಗೂ ಆಕಾಶ ಲಕ್ಷ್ಮಣರಾವ್ ಬಿರಾದಾರ ಎನ್ನುವವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಆಗಸ್ಟ್ 15 ರಂದು ಬೆಳಿಗ್ಗೆ ಯುವಕನನ್ನು ಕೊಲೆ ಮಾಡಲಾಗಿತ್ತು. ಮುಂಗನಾಳ ಗ್ರಾಮದ ವೈಜಿನಾಥ ಮಚಕುರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಔರಾದ್ ಸಿಪಿಐ ರಾಘವೇಂದ್ರ, ಪಿಎಸ್ಐ ಜಗದೀಶ ನಾಯ್ಕ, ಪೊಲೀಸ್ ಕಾನ್ಸ್ಟೆಬಲ್ ಶ್ರೀನಿವಾಸ, ಉಜ್ವಲಾ ಹಾಗೂ ಜೈಶ್ರೀ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.