ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಔರಾದ್‌: ಕೊಲೆ ಆರೋಪಿಗಳ ಬಂಧನ

Last Updated 20 ಆಗಸ್ಟ್ 2020, 12:06 IST
ಅಕ್ಷರ ಗಾತ್ರ

ಔರಾದ್‌: ಜಮೀನು ವಿವಾದದ ಕಾರಣ ಯುವಕರೊಬ್ಬರನ್ನು ಕೊಲೆ ಮಾಡಿದ ಆರೋಪದಲ್ಲಿ ಔರಾದ್‌ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.


ಸಂದೀಪ ದೇವರಾಜ ಮಚಕುರಿ ಹಾಗೂ ಆಕಾಶ ಲಕ್ಷ್ಮಣರಾವ್ ಬಿರಾದಾರ ಎನ್ನುವವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಆಗಸ್ಟ್‌ 15 ರಂದು ಬೆಳಿಗ್ಗೆ ಯುವಕನನ್ನು ಕೊಲೆ ಮಾಡಲಾಗಿತ್ತು. ಮುಂಗನಾಳ ಗ್ರಾಮದ ವೈಜಿನಾಥ ಮಚಕುರಿ ‍‍ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಔರಾದ್‌ ಸಿಪಿಐ ರಾಘವೇಂದ್ರ, ಪಿಎಸ್‌ಐ ಜಗದೀಶ ನಾಯ್ಕ, ಪೊಲೀಸ್‌ ಕಾನ್‌ಸ್ಟೆಬಲ್ ಶ್ರೀನಿವಾಸ, ಉಜ್ವಲಾ ಹಾಗೂ ಜೈಶ್ರೀ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸ್‌ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT