<p><strong>ಬೀದರ್: </strong>’ಗ್ರಾಹಕರಿಗೆ ಉತ್ತಮ ಸೇವೆ ಹಾಗೂ ಪ್ಯಾಕ್ಸ್ಗಳಿಗೆ ಆಧುನಿಕತೆಗೆ ಅನುಗುಣವಾಗಿ ಮಾರ್ಗದರ್ಶನ ನೀಡುವಲ್ಲಿಬೀದರ್ ಡಿಸಿಸಿ ಬ್ಯಾಂಕ್ ದೇಶದಲ್ಲೇ ಮಾದರಿಯಾಗಿದೆ‘ ಎಂದು ಡಿಸಿಸಿ ಬ್ಯಾಂಕ್ನ ಪ್ರಧಾನ ವ್ಯವಸ್ಥಾಪಕ (ಆಡಳಿತ ವಿಭಾಗ) ಚನ್ನಬಸಯ್ಯ ಸ್ವಾಮಿ ಹೇಳಿದರು.</p>.<p>ಇಲ್ಲಿಯ ಡಾ.ಗುರುಪಾದಪ್ಪ ನಾಗಮಾರಪಳ್ಳಿ ಸಹಾರ್ದ ತರಬೇತಿ ಸಂಸ್ಥೆಯಲ್ಲಿ ನಬಾರ್ಡ್ ವತಿಯಿಂದ ಕಲಬುರಗಿ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರಿಗೆ ಆಯೋಜಿಸಿದ್ದ ರೈತರ ಆದಾಯ ವೃದ್ಧಿ ಕುರಿತ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>’’ಷೇರು ಬಂಡವಾಳ ಸಹಕಾರಿ ಸಂಘದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಸಹಕಾರಿ ಸಂಘಗಳಲ್ಲಿ ಅದರ ಸದಸ್ಯರೇ ಆಸ್ತಿಗಳಾಗಿದ್ದಾರೆ. ಸದಸ್ಯರಿಂದ ಸದಸ್ಯರಿಗಾಗಿ ನಡೆಸಲ್ಪಡುವ ಸಹಕಾರ ಸಂಸ್ಥೆಗಳು ಅಭಿವೃದ್ಧಿ ತತ್ವವನ್ನು ಪಾಲಿಸುತ್ತಿವೆ‘ ಎಂದರು.</p>.<p>’ಸಂಘಗಳು ಹೆಚ್ಚು ಸದಸ್ಯರನ್ನು ಹೊಂದಬೇಕು. ಸದಸ್ಯರಿಗೆ ಹೆಚ್ಚೆಚ್ಚು ಸಾಲ ನೀಡಿ ಷೇರು ಬಂಡವಾಳ ಹೆಚ್ಚಿಸಿಕೊಳ್ಳಬೇಕು. ಷೇರು ಬಂಡವಾಳ ಮತ್ತು ಠೇವಣಿಗಳಿಂದ ದೊರಕುವ ಬಂಡವಾಳಕ್ಕೆ ಬಹಳಷ್ಟು ವ್ಯತ್ಯಾಸಗಳಿವೆ. ಕಷ್ಟದಲ್ಲಿ ಗ್ರಾಹಕರಿಗೆ ಅವರ ಠೇವಣಿ ಮರಳಿಸಿದರೆ ಜನರ ವಿಶ್ವಾಸ ದ್ವಿಗುಣಗೊಳ್ಳುತ್ತದೆ‘ ಎಂದು ತಿಳಿಸಿದರು.</p>.<p>’ಈಗಿನ ವಾತಾವರಣ ಸಹಕಾರ ಸಂಸ್ಥೆಗಳ ವ್ಯವಹಾರ ಅಭಿವೃದ್ಧಿಗೆ ಪೂರಕವಾಗಿದೆ. ಸಹಕಾರಿ ಸಂಘಗಳು ಈ ಅವಕಾಶವನ್ನು ಬಳಸಿಕೊಳ್ಳಬೇಕು. ಸಂಘಗಳು ಸ್ವಂತ ಬಂಡವಾಳವನ್ನು ವ್ಯಾಪಾರ ಅಭಿವೃದ್ಧಿಗೆ ಸಾಲವಾಗಿ ನೀಡಬೇಕು. ಇದರಿಂದ ಜನರಿಗೆ ಉದ್ಯೋಗ ಕೈಗೊಳ್ಳಲು ಅನುಕೂಲವಾಗುತ್ತದೆ, ಬ್ಯಾಂಕಿಗೆ ಬಡ್ಡಿಯೂ ಬರುತ್ತದ‘‘ ಎಂದು ಹೇಳಿದರು.</p>.<p>’ಡಿಸಿಸಿ ಬ್ಯಾಂಕ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮೂಲಕ ರೈತರಿಗೆ ಸಾಲ ನೀಡುತ್ತಿದೆ. ಎಲ್ಲಿ ಜನರಿದ್ದಾರೋ ಅಲ್ಲಿ ಮಾರುಕಟ್ಟೆ ವ್ಯವಹಾರ ನಡೆಯುತ್ತದೆ. ಸಹಕಾರಿಗಳು ಇದನ್ನು ಮನಗಂಡು ತಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಬೇಕು‘ ಎಂದು ಸಲಹೆ ನೀಡಿದರು.</p>.<p>ಡಿಸಿಸಿ ಬ್ಯಾಂಕ್ ಬ್ಯಾಂಕಿಂಗ್, ಹಣಕಾಸು ವಿಭಾಗದ ಪ್ರಧಾನ ವ್ಯವಸ್ಥಾಪಕ ವಿಠ್ಠಲ್ ರೆಡ್ಡಿ ಮಾತನಾಡಿ, ’ಸಂಘ ನಡೆಸುವಲ್ಲಿ ಮುಖ್ಯ ಕಾರ್ಯನಿರ್ವಾಹಕರ ಜವಾಬ್ದಾರಿ ಮಹತ್ವದ್ದಾಗಿದೆ‘ ಎಂದರು.</p>.<p>’ದಶಕದ ಹಿಂದೆ ಬೆಳೆ ವಿಮೆ ಯೋಜನೆ ಹಾಗೂ ಸಹಕಾರಿ ಸಾಲ ವಿತರಣೆಯಲ್ಲಿ ಕಲಬುರಗಿ ಮೊದಲ ಸ್ಥಾನದಲ್ಲಿತ್ತು. ಪಿ.ಎಂ.ಎಫ್.ಬಿ.ವೈ-ಬಂದ ಬಳಿಕ ಬೀದರ್ ಡಿಸಿಸಿ ಬ್ಯಾಂಕ್ ಮುಂಚೂಣಿಯಲ್ಲಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಅವರು ಬ್ಯಾಂಕಿನಿಂದಲೇ ಪ್ರೀಮಿಯಂ ತುಂಬಿಸುವ ಕ್ರಾಂತಿಕಾರಿ ನಿರ್ಧಾರ ಕೈಗೊಂಡಿದ್ದರಿಂದ ಬೆಳೆ 1.25 ಲಕ್ಷ ರೈತರಿಗೆ ಒಟ್ಟು ₹ 350 ಕೋಟಿ ಬೆಳೆ .ವಿಮೆ ದೊರಕಿದೆ‘ ಎಂದು ಹೇಳಿದರು.</p>.<p>’ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕರು ಗ್ರಾಮ ಸಮೀಕ್ಷೆ ಮಾಡಿ ಸಾಲದ ಬೇಡಿಕೆ, ಉಳಿತಾಯ ಹಾಗೂ ಅವರ ಕುಟುಂಬದ ಆದಾಯದ ಮಾಹಿತಿ ಪಡೆದು ಯೋಜನೆ ರೂಪಿಸಬೇಕು. ಜನ ಸೇವಕ ಸಂಸ್ಥೆಯಾಗಿ ಸಹಕಾರಿ ಸಂಘಗಳನ್ನು ಬೆಳೆಸಬೇಕು‘ ಎಂದು ಸಲಹೆ ನೀಡಿದರು.</p>.<p>ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ .ಮಲ್ಲಿಕಾರ್ಜುನ ಮಹಾಜನ ಮಾತನಾಡಿ, ’ತರಬೇತಿಗಳು ಕೌಶಲ ಹೆಚ್ಚಿಸಲು ನೆರವಾಗುತ್ತವೆ‘ ಎಂದರು.</p>.<p>ಡಾ. ಗುರುಪಾದಪ್ಪ ನಾಗಮಾರಪಳ್ಳಿ ಸಹಾರ್ದ ತರಬೇತಿ ಸಂಸ್ಥೆಯ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು ಸ್ವಾಗತಿಸಿದರು. ಅನಿಲ ಪಿ. ಹಾಗೂ ಮಹಾಲಿಂಗ ನಿರೂಪಿಸಿದರು. ಉಪನ್ಯಾಸಕ ಎಸ್.ಜಿ. ಪಾಟೀಲ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>’ಗ್ರಾಹಕರಿಗೆ ಉತ್ತಮ ಸೇವೆ ಹಾಗೂ ಪ್ಯಾಕ್ಸ್ಗಳಿಗೆ ಆಧುನಿಕತೆಗೆ ಅನುಗುಣವಾಗಿ ಮಾರ್ಗದರ್ಶನ ನೀಡುವಲ್ಲಿಬೀದರ್ ಡಿಸಿಸಿ ಬ್ಯಾಂಕ್ ದೇಶದಲ್ಲೇ ಮಾದರಿಯಾಗಿದೆ‘ ಎಂದು ಡಿಸಿಸಿ ಬ್ಯಾಂಕ್ನ ಪ್ರಧಾನ ವ್ಯವಸ್ಥಾಪಕ (ಆಡಳಿತ ವಿಭಾಗ) ಚನ್ನಬಸಯ್ಯ ಸ್ವಾಮಿ ಹೇಳಿದರು.</p>.<p>ಇಲ್ಲಿಯ ಡಾ.ಗುರುಪಾದಪ್ಪ ನಾಗಮಾರಪಳ್ಳಿ ಸಹಾರ್ದ ತರಬೇತಿ ಸಂಸ್ಥೆಯಲ್ಲಿ ನಬಾರ್ಡ್ ವತಿಯಿಂದ ಕಲಬುರಗಿ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರಿಗೆ ಆಯೋಜಿಸಿದ್ದ ರೈತರ ಆದಾಯ ವೃದ್ಧಿ ಕುರಿತ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>’’ಷೇರು ಬಂಡವಾಳ ಸಹಕಾರಿ ಸಂಘದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಸಹಕಾರಿ ಸಂಘಗಳಲ್ಲಿ ಅದರ ಸದಸ್ಯರೇ ಆಸ್ತಿಗಳಾಗಿದ್ದಾರೆ. ಸದಸ್ಯರಿಂದ ಸದಸ್ಯರಿಗಾಗಿ ನಡೆಸಲ್ಪಡುವ ಸಹಕಾರ ಸಂಸ್ಥೆಗಳು ಅಭಿವೃದ್ಧಿ ತತ್ವವನ್ನು ಪಾಲಿಸುತ್ತಿವೆ‘ ಎಂದರು.</p>.<p>’ಸಂಘಗಳು ಹೆಚ್ಚು ಸದಸ್ಯರನ್ನು ಹೊಂದಬೇಕು. ಸದಸ್ಯರಿಗೆ ಹೆಚ್ಚೆಚ್ಚು ಸಾಲ ನೀಡಿ ಷೇರು ಬಂಡವಾಳ ಹೆಚ್ಚಿಸಿಕೊಳ್ಳಬೇಕು. ಷೇರು ಬಂಡವಾಳ ಮತ್ತು ಠೇವಣಿಗಳಿಂದ ದೊರಕುವ ಬಂಡವಾಳಕ್ಕೆ ಬಹಳಷ್ಟು ವ್ಯತ್ಯಾಸಗಳಿವೆ. ಕಷ್ಟದಲ್ಲಿ ಗ್ರಾಹಕರಿಗೆ ಅವರ ಠೇವಣಿ ಮರಳಿಸಿದರೆ ಜನರ ವಿಶ್ವಾಸ ದ್ವಿಗುಣಗೊಳ್ಳುತ್ತದೆ‘ ಎಂದು ತಿಳಿಸಿದರು.</p>.<p>’ಈಗಿನ ವಾತಾವರಣ ಸಹಕಾರ ಸಂಸ್ಥೆಗಳ ವ್ಯವಹಾರ ಅಭಿವೃದ್ಧಿಗೆ ಪೂರಕವಾಗಿದೆ. ಸಹಕಾರಿ ಸಂಘಗಳು ಈ ಅವಕಾಶವನ್ನು ಬಳಸಿಕೊಳ್ಳಬೇಕು. ಸಂಘಗಳು ಸ್ವಂತ ಬಂಡವಾಳವನ್ನು ವ್ಯಾಪಾರ ಅಭಿವೃದ್ಧಿಗೆ ಸಾಲವಾಗಿ ನೀಡಬೇಕು. ಇದರಿಂದ ಜನರಿಗೆ ಉದ್ಯೋಗ ಕೈಗೊಳ್ಳಲು ಅನುಕೂಲವಾಗುತ್ತದೆ, ಬ್ಯಾಂಕಿಗೆ ಬಡ್ಡಿಯೂ ಬರುತ್ತದ‘‘ ಎಂದು ಹೇಳಿದರು.</p>.<p>’ಡಿಸಿಸಿ ಬ್ಯಾಂಕ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮೂಲಕ ರೈತರಿಗೆ ಸಾಲ ನೀಡುತ್ತಿದೆ. ಎಲ್ಲಿ ಜನರಿದ್ದಾರೋ ಅಲ್ಲಿ ಮಾರುಕಟ್ಟೆ ವ್ಯವಹಾರ ನಡೆಯುತ್ತದೆ. ಸಹಕಾರಿಗಳು ಇದನ್ನು ಮನಗಂಡು ತಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಬೇಕು‘ ಎಂದು ಸಲಹೆ ನೀಡಿದರು.</p>.<p>ಡಿಸಿಸಿ ಬ್ಯಾಂಕ್ ಬ್ಯಾಂಕಿಂಗ್, ಹಣಕಾಸು ವಿಭಾಗದ ಪ್ರಧಾನ ವ್ಯವಸ್ಥಾಪಕ ವಿಠ್ಠಲ್ ರೆಡ್ಡಿ ಮಾತನಾಡಿ, ’ಸಂಘ ನಡೆಸುವಲ್ಲಿ ಮುಖ್ಯ ಕಾರ್ಯನಿರ್ವಾಹಕರ ಜವಾಬ್ದಾರಿ ಮಹತ್ವದ್ದಾಗಿದೆ‘ ಎಂದರು.</p>.<p>’ದಶಕದ ಹಿಂದೆ ಬೆಳೆ ವಿಮೆ ಯೋಜನೆ ಹಾಗೂ ಸಹಕಾರಿ ಸಾಲ ವಿತರಣೆಯಲ್ಲಿ ಕಲಬುರಗಿ ಮೊದಲ ಸ್ಥಾನದಲ್ಲಿತ್ತು. ಪಿ.ಎಂ.ಎಫ್.ಬಿ.ವೈ-ಬಂದ ಬಳಿಕ ಬೀದರ್ ಡಿಸಿಸಿ ಬ್ಯಾಂಕ್ ಮುಂಚೂಣಿಯಲ್ಲಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಅವರು ಬ್ಯಾಂಕಿನಿಂದಲೇ ಪ್ರೀಮಿಯಂ ತುಂಬಿಸುವ ಕ್ರಾಂತಿಕಾರಿ ನಿರ್ಧಾರ ಕೈಗೊಂಡಿದ್ದರಿಂದ ಬೆಳೆ 1.25 ಲಕ್ಷ ರೈತರಿಗೆ ಒಟ್ಟು ₹ 350 ಕೋಟಿ ಬೆಳೆ .ವಿಮೆ ದೊರಕಿದೆ‘ ಎಂದು ಹೇಳಿದರು.</p>.<p>’ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕರು ಗ್ರಾಮ ಸಮೀಕ್ಷೆ ಮಾಡಿ ಸಾಲದ ಬೇಡಿಕೆ, ಉಳಿತಾಯ ಹಾಗೂ ಅವರ ಕುಟುಂಬದ ಆದಾಯದ ಮಾಹಿತಿ ಪಡೆದು ಯೋಜನೆ ರೂಪಿಸಬೇಕು. ಜನ ಸೇವಕ ಸಂಸ್ಥೆಯಾಗಿ ಸಹಕಾರಿ ಸಂಘಗಳನ್ನು ಬೆಳೆಸಬೇಕು‘ ಎಂದು ಸಲಹೆ ನೀಡಿದರು.</p>.<p>ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ .ಮಲ್ಲಿಕಾರ್ಜುನ ಮಹಾಜನ ಮಾತನಾಡಿ, ’ತರಬೇತಿಗಳು ಕೌಶಲ ಹೆಚ್ಚಿಸಲು ನೆರವಾಗುತ್ತವೆ‘ ಎಂದರು.</p>.<p>ಡಾ. ಗುರುಪಾದಪ್ಪ ನಾಗಮಾರಪಳ್ಳಿ ಸಹಾರ್ದ ತರಬೇತಿ ಸಂಸ್ಥೆಯ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು ಸ್ವಾಗತಿಸಿದರು. ಅನಿಲ ಪಿ. ಹಾಗೂ ಮಹಾಲಿಂಗ ನಿರೂಪಿಸಿದರು. ಉಪನ್ಯಾಸಕ ಎಸ್.ಜಿ. ಪಾಟೀಲ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>