<p><strong>ಬೀದರ್</strong>: ‘ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಗೋರಟಾ (ಬಿ) ಹುತಾತ್ಮ ಸ್ಮಾರಕವನ್ನು ₹ 50 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಸ್ಮಾರಕವಾಗಿ ಅಭಿವೃದ್ಧಿ ಪಡಿಸಲಾಗುವುದು’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದರು.</p>.<p>ಜಿಲ್ಲೆಯ ಹುಲಸೂರು ತಾಲ್ಲೂಕಿನ ಗೋರಟಾ (ಬಿ) ಗ್ರಾಮದ ಹೊರ ವಲಯದಲ್ಲಿ ಹುತಾತ್ಮ ಸ್ಮಾರಕ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದರು.</p>.<p>‘ಗೋರಟಾದಲ್ಲಿ ಧ್ವನಿ ಬೆಳಕಿನ ವ್ಯವಸ್ಥೆ ಮಾಡಲಾಗುವುದು. ಸಾಕ್ಷ್ಯ ಚಿತ್ರದ ಮೂಲಕ ನಿಜಾಮರ ವಿರುದ್ಧದ ಹೋರಾಟದಲ್ಲಿ ಹುತಾತ್ಮರಾದವರ ಸಾಕ್ಷ್ಯಚಿತ್ರ ಪ್ರದರ್ಶಿಸಲಾಗುವುದು. ರಾಷ್ಟ್ರ ಮಟ್ಟದ ಪ್ರವಾಸಿ ಕೇಂದ್ರವನ್ನಾಗಿ ರೂಪಿಸಲಾಗುವುದು’ ಎಂದು ಹೇಳಿದರು.</p>.<p>‘ತೆಲಂಗಾಣ ಸರ್ಕಾರ ಹೈದರಾಬಾದ್ ವಿಮೋಚನಾ ದಿನ ಆಚರಿಸುತ್ತಿಲ್ಲ. ಆದರೆ, ಕಳೆದ ವರ್ಷ ಬಿಜೆಪಿ ಹೈದರಾಬಾದ್ನಲ್ಲಿ ಹೈದರಾಬಾದ್ ವಿಮೋಚನಾ ದಿನ ಆಚರಿಸಿದೆ. ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಷ್ಟ್ರಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ’ ಎಂದು ತಿಳಿಸಿದರು.</p>.<p>‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶೇಕಡ 4ರಷ್ಟಿದ್ದ ಅಲ್ಪಸಂಖ್ಯಾತರ ಮೀಸಲಾತಿಯನ್ನು ಕಡಿತಗೊಳಿಸಿ ಲಿಂಗಾಯತರು ಹಾಗೂ ಒಕ್ಕಲಿಗರಿಗೆ ನೀಡಿ ಒಳ್ಳೆಯ ಕೆಲಸ ಮಾಡಿದ್ದಾರೆ. ಪರಿಶಿಷ್ಟ ಜಾತಿಯಲ್ಲಿನ ಸಮುದಾಯಕ್ಕೂ ಒಳ ಮೀಸಲಾತಿ ನೀಡಿದ್ದಾರೆ’ ಎಂದು ಹೇಳಿದರು.</p>.<p>ಕಾಂಗ್ರೆಸ್ ಪ್ರತಿಯೊಂದು ಕೆಲಸವನ್ನು ಲಟಕಾನಾ, ಅಟಕಾನಾ, ಭಟಕಾನಾ (ನೇತಾಡಿಸುವುದು, ಸಿಕ್ಕಿಸುವುದು, ಅಲೆದಾಡಿಸುವುದು) ಮಾಡುತ್ತಿತ್ತು. ಅಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ನ್ಯಾಯಪೀಠ ರಚಿಸಿ ಅಯೋಧ್ಯೆಯ ರಾಮಮಂದಿರ ಸಮಸ್ಯೆಯನ್ನು ನಿವಾರಿಸಿದರು. ಕಾಶ್ಮೀರ ಸಮಸ್ಯೆಯನ್ನೂ ಬಗೆಹರಿಸಲಾಯಿತು’ ಎಂದು ತಿಳಿಸಿದರು.</p>.<p>ಶಾಸಕ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್, ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಪಶು ಸಂಗೋಪನೆ ಸಚಿವ ಪ್ರಭು ಚವಾಣ್, ರಾಜ್ಯ ಮರಾಠ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಜಿ.ಮುಳೆ, ಶಾಸಕ ಶರಣು ಸಲಗರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಗೋರಟಾ (ಬಿ) ಹುತಾತ್ಮ ಸ್ಮಾರಕವನ್ನು ₹ 50 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಸ್ಮಾರಕವಾಗಿ ಅಭಿವೃದ್ಧಿ ಪಡಿಸಲಾಗುವುದು’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದರು.</p>.<p>ಜಿಲ್ಲೆಯ ಹುಲಸೂರು ತಾಲ್ಲೂಕಿನ ಗೋರಟಾ (ಬಿ) ಗ್ರಾಮದ ಹೊರ ವಲಯದಲ್ಲಿ ಹುತಾತ್ಮ ಸ್ಮಾರಕ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದರು.</p>.<p>‘ಗೋರಟಾದಲ್ಲಿ ಧ್ವನಿ ಬೆಳಕಿನ ವ್ಯವಸ್ಥೆ ಮಾಡಲಾಗುವುದು. ಸಾಕ್ಷ್ಯ ಚಿತ್ರದ ಮೂಲಕ ನಿಜಾಮರ ವಿರುದ್ಧದ ಹೋರಾಟದಲ್ಲಿ ಹುತಾತ್ಮರಾದವರ ಸಾಕ್ಷ್ಯಚಿತ್ರ ಪ್ರದರ್ಶಿಸಲಾಗುವುದು. ರಾಷ್ಟ್ರ ಮಟ್ಟದ ಪ್ರವಾಸಿ ಕೇಂದ್ರವನ್ನಾಗಿ ರೂಪಿಸಲಾಗುವುದು’ ಎಂದು ಹೇಳಿದರು.</p>.<p>‘ತೆಲಂಗಾಣ ಸರ್ಕಾರ ಹೈದರಾಬಾದ್ ವಿಮೋಚನಾ ದಿನ ಆಚರಿಸುತ್ತಿಲ್ಲ. ಆದರೆ, ಕಳೆದ ವರ್ಷ ಬಿಜೆಪಿ ಹೈದರಾಬಾದ್ನಲ್ಲಿ ಹೈದರಾಬಾದ್ ವಿಮೋಚನಾ ದಿನ ಆಚರಿಸಿದೆ. ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಷ್ಟ್ರಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ’ ಎಂದು ತಿಳಿಸಿದರು.</p>.<p>‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶೇಕಡ 4ರಷ್ಟಿದ್ದ ಅಲ್ಪಸಂಖ್ಯಾತರ ಮೀಸಲಾತಿಯನ್ನು ಕಡಿತಗೊಳಿಸಿ ಲಿಂಗಾಯತರು ಹಾಗೂ ಒಕ್ಕಲಿಗರಿಗೆ ನೀಡಿ ಒಳ್ಳೆಯ ಕೆಲಸ ಮಾಡಿದ್ದಾರೆ. ಪರಿಶಿಷ್ಟ ಜಾತಿಯಲ್ಲಿನ ಸಮುದಾಯಕ್ಕೂ ಒಳ ಮೀಸಲಾತಿ ನೀಡಿದ್ದಾರೆ’ ಎಂದು ಹೇಳಿದರು.</p>.<p>ಕಾಂಗ್ರೆಸ್ ಪ್ರತಿಯೊಂದು ಕೆಲಸವನ್ನು ಲಟಕಾನಾ, ಅಟಕಾನಾ, ಭಟಕಾನಾ (ನೇತಾಡಿಸುವುದು, ಸಿಕ್ಕಿಸುವುದು, ಅಲೆದಾಡಿಸುವುದು) ಮಾಡುತ್ತಿತ್ತು. ಅಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ನ್ಯಾಯಪೀಠ ರಚಿಸಿ ಅಯೋಧ್ಯೆಯ ರಾಮಮಂದಿರ ಸಮಸ್ಯೆಯನ್ನು ನಿವಾರಿಸಿದರು. ಕಾಶ್ಮೀರ ಸಮಸ್ಯೆಯನ್ನೂ ಬಗೆಹರಿಸಲಾಯಿತು’ ಎಂದು ತಿಳಿಸಿದರು.</p>.<p>ಶಾಸಕ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್, ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಪಶು ಸಂಗೋಪನೆ ಸಚಿವ ಪ್ರಭು ಚವಾಣ್, ರಾಜ್ಯ ಮರಾಠ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಜಿ.ಮುಳೆ, ಶಾಸಕ ಶರಣು ಸಲಗರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>