<p><strong>ಔರಾದ್ (ಬೀದರ್ ಜಿಲ್ಲೆ):</strong> ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ ಅವರ ಬ್ಯಾಂಕ್ ಖಾತೆಯಿಂದ ₹30.99 ಲಕ್ಷ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.</p>.ಔರಾದ್: ಉದ್ದಿನ ರಾಶಿ ಮಾಡುವಾಗ ಯಂತ್ರಕ್ಕೆ ಸಿಲುಕಿ ವ್ಯಕ್ತಿ ಸಾವು.<p>ಈ ಸಂಬಂಧ ಗುಂಡಪ್ಪ ವಕೀಲರು ಮಂಗಳವಾರ ಬೆಂಗಳೂರಿನ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆಗಸ್ಟ್ 12ರಂದು ತಮ್ಮ ಬ್ಯಾಂಕ್ ಖಾತೆಯಿಂದ ₹ 30.99 ಲಕ್ಷ ಅಕ್ರಮವಾಗಿ ದೋಚಲಾಗಿದೆ. ಇದರಲ್ಲಿ ಮುಂಬೈ ಮೂಲದ ಸಂದೀಪಕುಮಾರ ಹಾಗೂ ನೀರಜ್ ಕುಮಾರ ಅವರ ಕೈವಾಡವಿದ್ದು, ಅವರ ವಿರುದ್ಧ ತನಿಖೆ ನಡೆಸುವಂತೆ ತಿಳಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಶೇಷ ತಂಡ ರಚಿಸಿ ಬ್ಯಾಂಕ್ ವಹಿವಾಟು ಪರಿಶೀಲಿಸುತ್ತಿದ್ದಾರೆ.</p>.ಔರಾದ್: ಬಾಲಕಿ ಮೇಲೆ ಅತ್ಯಾಚಾರ- ಆರೋಪಿ ಬಂಧನ.<p>ಆ. 12ರಂದು ಅಪರಿಚಿತ ವ್ಯಕ್ತಿಯೊಬ್ಬ ಗುಂಡಪ್ಪ ವಕೀಲರಿಗೆ ಕರೆ ಮಾಡಿ ತಾನು ಸಿಬಿಐ ಅಧಿಕಾರಿ ಎಂದು ಹೇಳಿಕೊಂಡು ನರೇಶ್ ಗೋಯಿಲ್ ಮನಿ ಲ್ಯಾಂಡಿಂಗ್ ಕೇಸಿನಲ್ಲಿ ನೀವು ಭಾಗಿಯಾಗಿದ್ದಿರಿ. ಜಪ್ತಿ ಮಾಡಲಾದ ವಸ್ತುಗಳಲ್ಲಿ ನಿಮ್ಮ ಬ್ಯಾಂಕ್ ಖಾತೆ, ಎಟಿಎಂ ಕಾರ್ಡ್ ಗಳು ಸಿಕ್ಕಿವೆ. ಸಾಕಷ್ಟು ಅವ್ಯವಹಾರ ನಡೆಸಿದ್ದೀರಿ ಎಂದು ಹೇಳಿ ಡಿಜಿಟಲ್ ಅರೆಸ್ಟ್ ಮಾಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹಂತ ಹಂತವಾಗಿ ಹಣ ವಂಚಿಸಲಾಗಿದೆ ಎಂದು ವಕೀಲರು ದೂರಿನಲ್ಲಿ ತಿಳಿಸಿದ್ದಾರೆ.</p> .ಔರಾದ್ | ದುರ್ಗಮ ದಾರಿಯಲ್ಲಿ ತಾಂಡಾ ನಿವಾಸಿಗಳು: ರಸ್ತೆ ನಿರ್ಮಾಣಕ್ಕೆ ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್ (ಬೀದರ್ ಜಿಲ್ಲೆ):</strong> ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ ಅವರ ಬ್ಯಾಂಕ್ ಖಾತೆಯಿಂದ ₹30.99 ಲಕ್ಷ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.</p>.ಔರಾದ್: ಉದ್ದಿನ ರಾಶಿ ಮಾಡುವಾಗ ಯಂತ್ರಕ್ಕೆ ಸಿಲುಕಿ ವ್ಯಕ್ತಿ ಸಾವು.<p>ಈ ಸಂಬಂಧ ಗುಂಡಪ್ಪ ವಕೀಲರು ಮಂಗಳವಾರ ಬೆಂಗಳೂರಿನ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆಗಸ್ಟ್ 12ರಂದು ತಮ್ಮ ಬ್ಯಾಂಕ್ ಖಾತೆಯಿಂದ ₹ 30.99 ಲಕ್ಷ ಅಕ್ರಮವಾಗಿ ದೋಚಲಾಗಿದೆ. ಇದರಲ್ಲಿ ಮುಂಬೈ ಮೂಲದ ಸಂದೀಪಕುಮಾರ ಹಾಗೂ ನೀರಜ್ ಕುಮಾರ ಅವರ ಕೈವಾಡವಿದ್ದು, ಅವರ ವಿರುದ್ಧ ತನಿಖೆ ನಡೆಸುವಂತೆ ತಿಳಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಶೇಷ ತಂಡ ರಚಿಸಿ ಬ್ಯಾಂಕ್ ವಹಿವಾಟು ಪರಿಶೀಲಿಸುತ್ತಿದ್ದಾರೆ.</p>.ಔರಾದ್: ಬಾಲಕಿ ಮೇಲೆ ಅತ್ಯಾಚಾರ- ಆರೋಪಿ ಬಂಧನ.<p>ಆ. 12ರಂದು ಅಪರಿಚಿತ ವ್ಯಕ್ತಿಯೊಬ್ಬ ಗುಂಡಪ್ಪ ವಕೀಲರಿಗೆ ಕರೆ ಮಾಡಿ ತಾನು ಸಿಬಿಐ ಅಧಿಕಾರಿ ಎಂದು ಹೇಳಿಕೊಂಡು ನರೇಶ್ ಗೋಯಿಲ್ ಮನಿ ಲ್ಯಾಂಡಿಂಗ್ ಕೇಸಿನಲ್ಲಿ ನೀವು ಭಾಗಿಯಾಗಿದ್ದಿರಿ. ಜಪ್ತಿ ಮಾಡಲಾದ ವಸ್ತುಗಳಲ್ಲಿ ನಿಮ್ಮ ಬ್ಯಾಂಕ್ ಖಾತೆ, ಎಟಿಎಂ ಕಾರ್ಡ್ ಗಳು ಸಿಕ್ಕಿವೆ. ಸಾಕಷ್ಟು ಅವ್ಯವಹಾರ ನಡೆಸಿದ್ದೀರಿ ಎಂದು ಹೇಳಿ ಡಿಜಿಟಲ್ ಅರೆಸ್ಟ್ ಮಾಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹಂತ ಹಂತವಾಗಿ ಹಣ ವಂಚಿಸಲಾಗಿದೆ ಎಂದು ವಕೀಲರು ದೂರಿನಲ್ಲಿ ತಿಳಿಸಿದ್ದಾರೆ.</p> .ಔರಾದ್ | ದುರ್ಗಮ ದಾರಿಯಲ್ಲಿ ತಾಂಡಾ ನಿವಾಸಿಗಳು: ರಸ್ತೆ ನಿರ್ಮಾಣಕ್ಕೆ ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>