‘ಗ್ರಾಮದಲ್ಲಿ ಚರಂಡಿ ನೀರು ಮನೆಗಳಿಗೆ ನುಗ್ಗುತ್ತಿದೆ. ಗ್ರಾಮ ಪಂಚಾಯಿತಿಯವರು ಹೊಸದಾಗಿ ಚರಂಡಿ ನಿರ್ಮಿಸಿ ಬಡಾವಣೆಯ ಸಮಸ್ಯೆ ಬಗೆಹರಿಸಬೇಕು. ಮನೆಗಳಿಂದ ತ್ಯಾಜ್ಯ ನೀರು ಸರಾಗವಾಗಿ ಹರಿದು ಹೊರ ಹೋಗಲು ಚರಂಡಿ ನಿರ್ಮಿಸಿ ಸ್ವಚ್ಛತೆ ಕಾಪಾಡಬೇಕು’ ಎಂದು ನಿವಾಸಿಗಳಾದ ಮಲ್ಲಿಕಾರ್ಜುನ ವಗ್ಗೆ, ಸಚಿನ್ ಭಂಡಾರಿ, ಆಕಾಶ ವಗ್ಗೆ, ಅಭಿಷೇಕ ಸೂರ್ಯವಂಶಿ ಆಗ್ರಹಿಸುತ್ತಾರೆ.