<p><strong>ಹುಮನಾಬಾದ್: </strong>ಅಭಿವೃದ್ಧಿ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೂಳಿಸಬೇಕು.ಕಾಮಗಾರಿ ಕಳಪೆಯಿಂದ ಕೂಡಿದರೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಶಾಸಕ ರಾಜಶೇಖರ ಪಾಟೀಲ ಎಚ್ಚರಿಕೆ ನೀಡಿದರು.</p>.<p>ತಾಲ್ಲೂಕಿನ ಹಳ್ಳಿಖೇಡ್ ಬಿ. ಪಟ್ಟಣಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.</p>.<p>ಎಸ್.ಎಫ್.ಸಿ. ಯೋಜನೆ ಅಡಿಯಲ್ಲಿ ಪುರಸಭೆ ಕಚೇರಿಯ ಕಟ್ಟಡವನ್ನು ಸುಮಾರು ₹1.63 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ನಗರೋತ್ಥನಾ ಯೋಜನೆ ಅಡಿಯಲ್ಲಿ ಸಿ.ಸಿ ರಸ್ತೆ ನಿರ್ಮಾಣವಾಗುತ್ತಿವೆ. ಈ ಕಾಮಗಾರಿಗಳನ್ನು ಉತ್ತಮ ರೀತಿಯಿಂದ ಪೂರ್ಣಗೂಳ್ಳಬೇಕು ಎಂದು ಹೇಳಿದರು.</p>.<p>ಸಾರ್ವಜನಿಕರು ಕೋವಿಡ್ ನಿಮಗಳನ್ನು ಪಾಲಿಸಿ ಸುರಕ್ಷತೆಯಿಂದ ಇರಬೇಕು. ಕೆಮ್ಮು, ನೆಗಡಿ, ಜ್ವರ ಕಂಡುಬಂದರೆ ತಕ್ಷಣ ವೈದ್ಯರಿಂದ ಸಲಹೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ಪಟ್ಟಣದಲ್ಲಿ ಪುರಸಭೆ ವತಿಯಿಂದ ಕೋವಿಡ್ ಜಾಗೃತಿ ಮೂಡಿಸಬೇಕು. ಪಟ್ಟಣ ಸ್ವಚ್ಛತೆಯಿಂದ ಕಾಪಾಡಬೇಕು. ನಾಗರಿಕರಿಗೆ ಕುಡಿಯುವ ನೀರು ಸೇರಿದಂತೆ ಇನ್ನಿತರ ಅಗತ್ಯ ವಸ್ತುಗಳನ್ನು ಖರೀದಿಸಲು ಸಮಸ್ಯೆ ಉಂಟಾಗದಂತೆ ನೋಡಿಕೊಳಬೇಕು ಎಂದು ಪುರಸಭೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಪುರಸಭೆ ಅಧ್ಯಕ್ಷ ಮಾಹಾಂತಯ್ಯ ತೀರ್ಥ, ಉಪಾಧ್ಯೆಕ್ಷೆ ಹುರ್ಮಂತ್ ಬೇಗಂ, ಯೂಸೂಫ್ ಸೌದಾಕರ್, ಚಾಂದ್ ಖುರೇಶಿ, ಸಾಜಿತ್ತ್ ಪಟೇಲ್, ರಜಾಕ್ ಮಸೂಲ್ದಾರ್, ಗೌಸ್ ರಾಜಮಿಯ್ಯಾ, ವಿಜಯಕುಮಾರ ಜಗದಾಳೆ, ಪುರಸಭೆ ಮುಖ್ಯಾಧಿಕಾರಿ ಮಹಮ್ಮದ್ ಯೂಸೂಫ್, ಕಿರಿಯ ಎಂಜಿನಿಯರ್ ಅಶ್ವಿನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್: </strong>ಅಭಿವೃದ್ಧಿ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೂಳಿಸಬೇಕು.ಕಾಮಗಾರಿ ಕಳಪೆಯಿಂದ ಕೂಡಿದರೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಶಾಸಕ ರಾಜಶೇಖರ ಪಾಟೀಲ ಎಚ್ಚರಿಕೆ ನೀಡಿದರು.</p>.<p>ತಾಲ್ಲೂಕಿನ ಹಳ್ಳಿಖೇಡ್ ಬಿ. ಪಟ್ಟಣಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.</p>.<p>ಎಸ್.ಎಫ್.ಸಿ. ಯೋಜನೆ ಅಡಿಯಲ್ಲಿ ಪುರಸಭೆ ಕಚೇರಿಯ ಕಟ್ಟಡವನ್ನು ಸುಮಾರು ₹1.63 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ನಗರೋತ್ಥನಾ ಯೋಜನೆ ಅಡಿಯಲ್ಲಿ ಸಿ.ಸಿ ರಸ್ತೆ ನಿರ್ಮಾಣವಾಗುತ್ತಿವೆ. ಈ ಕಾಮಗಾರಿಗಳನ್ನು ಉತ್ತಮ ರೀತಿಯಿಂದ ಪೂರ್ಣಗೂಳ್ಳಬೇಕು ಎಂದು ಹೇಳಿದರು.</p>.<p>ಸಾರ್ವಜನಿಕರು ಕೋವಿಡ್ ನಿಮಗಳನ್ನು ಪಾಲಿಸಿ ಸುರಕ್ಷತೆಯಿಂದ ಇರಬೇಕು. ಕೆಮ್ಮು, ನೆಗಡಿ, ಜ್ವರ ಕಂಡುಬಂದರೆ ತಕ್ಷಣ ವೈದ್ಯರಿಂದ ಸಲಹೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ಪಟ್ಟಣದಲ್ಲಿ ಪುರಸಭೆ ವತಿಯಿಂದ ಕೋವಿಡ್ ಜಾಗೃತಿ ಮೂಡಿಸಬೇಕು. ಪಟ್ಟಣ ಸ್ವಚ್ಛತೆಯಿಂದ ಕಾಪಾಡಬೇಕು. ನಾಗರಿಕರಿಗೆ ಕುಡಿಯುವ ನೀರು ಸೇರಿದಂತೆ ಇನ್ನಿತರ ಅಗತ್ಯ ವಸ್ತುಗಳನ್ನು ಖರೀದಿಸಲು ಸಮಸ್ಯೆ ಉಂಟಾಗದಂತೆ ನೋಡಿಕೊಳಬೇಕು ಎಂದು ಪುರಸಭೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಪುರಸಭೆ ಅಧ್ಯಕ್ಷ ಮಾಹಾಂತಯ್ಯ ತೀರ್ಥ, ಉಪಾಧ್ಯೆಕ್ಷೆ ಹುರ್ಮಂತ್ ಬೇಗಂ, ಯೂಸೂಫ್ ಸೌದಾಕರ್, ಚಾಂದ್ ಖುರೇಶಿ, ಸಾಜಿತ್ತ್ ಪಟೇಲ್, ರಜಾಕ್ ಮಸೂಲ್ದಾರ್, ಗೌಸ್ ರಾಜಮಿಯ್ಯಾ, ವಿಜಯಕುಮಾರ ಜಗದಾಳೆ, ಪುರಸಭೆ ಮುಖ್ಯಾಧಿಕಾರಿ ಮಹಮ್ಮದ್ ಯೂಸೂಫ್, ಕಿರಿಯ ಎಂಜಿನಿಯರ್ ಅಶ್ವಿನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>