‘ಯಾವುದೇ ರಾಜಕೀಯ ಪಕ್ಷದ ಮುಖಂಡರು ಗಣೇಶ ಮೈದಾನದಲ್ಲಿ ಬಹಿರಂಗ ಸಭೆ ನಡೆಸುವ ಕುರಿತು ಜಿಲ್ಲಾ ಪೊಲೀಸರ ಅನುಮತಿ ಕೋರಿ ಅರ್ಜಿ ಸಲ್ಲಿಸಿಲ್ಲ. ಆದರೆ, ನಗರಸಭೆಯ ಆಯುಕ್ತರು ಪತ್ರ ಬರೆದು ಅಭಿಪ್ರಾಯ ಕೇಳಿದ್ದರು. ಅವರಿಗೆ ಸಮರ್ಪಕವಾದ ಉತ್ತರ ನೀಡಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ ತಿಳಿಸಿದ್ದಾರೆ.