ನಾಳೆ ವಿದ್ಯುತ್ ವ್ಯತ್ಯಯ
ಬೀದರ್: ನಗರದ ಗುಂಪಾದ 11 ಕೆ.ವಿ. ಫೀಡರ್ ಮೇಲೆ ತುರ್ತು ನಿರ್ವಹಣೆ ಕೆಲಸದ ನಿಮಿತ್ತ ಅಲ್ಲಮಪ್ರಭುನಗರ, ಶಿವಾಜಿ ನಗರ, ಕೃಷ್ಣ ಕಾಲೊನಿ, ಸಿಎಂಸಿ ಕಾಲೊನಿ, ಗಾಂಧಿನಗರ, ವಡ್ಡರ ಕಾಲೊನಿ, ಸಂಗಮೇಶ್ವರ ಕಾಲೊನಿ, ಚಿದ್ರಿ ಕಾಲೊನಿ, ಮೈಲೂರಿನ ಶಾಸ್ತ್ರಿ ನಗರ ಪ್ರದೇಶಗಳಲ್ಲಿ ಮೇ 14 ರಂದು ಬೆಳಿಗ್ಗೆ 10 ರಿಂದ ಸಂಜೆ 4 ರ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಜೆಸ್ಕಾಂ ಪ್ರಕಟಣೆ ತಿಳಿಸಿದೆ.
****
ನಾಲ್ವರು ಬಾಲ ಕಾರ್ಮಿಕರ ರಕ್ಷಣೆ
ಬೀದರ್: ನಗರದಲ್ಲಿ ಗುರುವಾರ ನಾಲ್ವರು ಬಾಲ ಕಾರ್ಮಿಕರನ್ನು ರಕ್ಷಿಸಲಾಗಿದೆ.
ಕಾರ್ಮಿಕ ಇಲಾಖೆ, ಬಾಲ ಕಾರ್ಮಿಕ ಯೋಜನೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ ಹಾಗೂ ಮಕ್ಕಳ ಸಹಾಯವಾಣಿ ಪ್ರತಿನಿಧಿಗಳು ಜಂಟಿಯಾಗಿ ಅಂಗಡಿ, ಧಾಬಾ, ಹೊಟೇಲ್, ಗ್ಯಾರೇಜ್ಗಳ ಮೇಲೆ ಹಠಾತ್ ದಾಳಿ ನಡೆಸಿ, ಬಾಲ ಕಾರ್ಮಿಕರನ್ನು ರಕ್ಷಿಸಿದರು.
ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಂಡು, ನಾಲ್ವರು ಬಾಲ ಕಾರ್ಮಿಕ ಮಕ್ಕಳಿಗೆ ಸರ್ಕಾರಿ ಬಾಲಕರ ಬಾಲ ಮಂದಿರದಲ್ಲಿ ಪುನರ್ವಸತಿ ಕಲ್ಪಿಸಿದರು.
ಕಾರ್ಮಿಕ ನಿರೀಕ್ಷಕಿ ಕೆ. ಸುವರ್ಣಾ, ಬಾಲ ಕಾರ್ಮಿಕ ಯೋಜನೆಯ ಅರ್ಜುನ ಸಿತಾಳಗೇರಾ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಗೌರಿಶಂಕರ ಪ್ರತಾಪುರೆ, ಮಕ್ಕಳ ಸಹಾಯವಾಣಿ ಸಿಬ್ಬಂದಿ ನೆಲ್ಸನ್, ಜಾನ್ಸನ್, ಗಾಂಧಿಗಂಜ್ ಪಿಎಸ್ಐ ಸವಿತಾ ಹಾಗೂ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.