<p><strong>ಹುಲಸೂರ: </strong>ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಸಮಿತಿ ವತಿಯಿಂದ ಪಟ್ಟಣದ ಸ್ವಾಯತ್ತ ಕಲಾ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸಾಧಕರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.</p>.<p>ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕಿ ಪ್ರಶಸ್ತಿ ಪಡೆದ ಮಲ್ಲಮ್ಮ ಆರ್.ಪಾಟೀಲ ಅವರನ್ನು ಕಸಾಪ ತಾಲ್ಲೂಕು ಸಮಿತಿ ವತಿಯಿಂದ ಸನ್ಮಾನಿಸಲಾಯಿತು.</p>.<p>ನಂತರ ವಿದ್ಯಾರ್ಥಿಗಳು ಅವರೊಂದಿಗೆ ಸಂವಾದ ನಡೆಸಿದರು.</p>.<p>‘ಪ್ರಶಸ್ತಿ ಪಡೆಯಬೇಕು ಎಂದು ನಾನು ವಿದ್ಯಾರ್ಥಿಗಳಿಗೆ ಬೋಧನೆ ಮಾಡಿರಲಿಲ್ಲ. ಈ ಪ್ರಶಸ್ತಿ ಪಡೆದ ಜಿಲ್ಲೆಯ ಮೊದಲ ಉಪನ್ಯಾಸಕಿ ನಾನು. ನನ್ನನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದ್ದರಿಂದ ಸಂತಸವಾಗಿದೆ. ವಿದ್ಯಾರ್ಥಿಗಳು ನನ್ನನ್ನು ಅಭಿನಂದಿಸಿರುವುದು ಸೇವೆಗೆ ಸಂದ ಗೌರವ’ ಎಂದು ಮಲ್ಲಮ್ಮ ಆರ್.ಪಾಟೀಲ ಹೇಳಿದರು.</p>.<p>ಗುರು ಬಸವೇಶ್ವರ ಸಂಸ್ಥಾನ ಮಠದ ಶಿವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<p>ಕಸಾಪ ತಾಲ್ಲೂಕು ಸಮಿತಿ ಕೋಶಾಧ್ಯಕ್ಷ ರಮೇಶ ಕಾಮಣ್ಣ ಮಾತನಾಡಿ,‘ಗಡಿಯಲ್ಲಿರುವುದರಿಂದ ನಮ್ಮ ತಾಲ್ಲೂಕಿನ ಬಹುತೇಕ ಗ್ರಾಮಗಳಲ್ಲಿ ಅನ್ಯ ಭಾಷಿಕರ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಕಸಾಪದಿಂದ ಹಲವು ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಜನ ಸಹಕರಿಸಬೇಕು’ ಎಂದರು.</p>.<p>ಕಸಾಪ ತಾಲ್ಲೂಕು ಸಮಿತಿ ಅಧ್ಯಕ್ಷ ನಾಗರಾಜ ಹಾವಣ್ಣ ಅವರು ಅಧ್ಯಕ್ಷತೆ ವಹಿಸಿದ್ದರು.</p>.<p>ಕಸಾಪ ಯುವ ಘಟಕದ ಅಧ್ಯಕ್ಷ ನಾಗೇಶ್ ಮೇತ್ರೆ ನಿರೂಪಿಸಿದರು.</p>.<p>ಪಿಡಿಒ ಸಂದೀಪ್ ಬಿರಾದಾರ, ಕಸಾಪ ಗೌರವ ಅಧ್ಯಕ್ಷ ರುದ್ರಮಣಿ ಮಠಪತಿ, ಕಸಾಪ ಗೌರವ ಕಾರ್ಯದರ್ಶಿ ಬಸವರಾಜ ಪಾಟೀಲ ಗೋರಟಾ, ಉಪನ್ಯಾಸಕರಾದ ರವಿ ಕುಲಕರ್ಣಿ, ಅಶೋಕ, ಗಣಪತರಾವ ಖರಾಟ ಸೇರಿದಂತೆ ಕಾಲೇಜಿನ ಬೋಧಕರು–ಬೋಧಕೇತರ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಲಸೂರ: </strong>ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಸಮಿತಿ ವತಿಯಿಂದ ಪಟ್ಟಣದ ಸ್ವಾಯತ್ತ ಕಲಾ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸಾಧಕರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.</p>.<p>ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕಿ ಪ್ರಶಸ್ತಿ ಪಡೆದ ಮಲ್ಲಮ್ಮ ಆರ್.ಪಾಟೀಲ ಅವರನ್ನು ಕಸಾಪ ತಾಲ್ಲೂಕು ಸಮಿತಿ ವತಿಯಿಂದ ಸನ್ಮಾನಿಸಲಾಯಿತು.</p>.<p>ನಂತರ ವಿದ್ಯಾರ್ಥಿಗಳು ಅವರೊಂದಿಗೆ ಸಂವಾದ ನಡೆಸಿದರು.</p>.<p>‘ಪ್ರಶಸ್ತಿ ಪಡೆಯಬೇಕು ಎಂದು ನಾನು ವಿದ್ಯಾರ್ಥಿಗಳಿಗೆ ಬೋಧನೆ ಮಾಡಿರಲಿಲ್ಲ. ಈ ಪ್ರಶಸ್ತಿ ಪಡೆದ ಜಿಲ್ಲೆಯ ಮೊದಲ ಉಪನ್ಯಾಸಕಿ ನಾನು. ನನ್ನನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದ್ದರಿಂದ ಸಂತಸವಾಗಿದೆ. ವಿದ್ಯಾರ್ಥಿಗಳು ನನ್ನನ್ನು ಅಭಿನಂದಿಸಿರುವುದು ಸೇವೆಗೆ ಸಂದ ಗೌರವ’ ಎಂದು ಮಲ್ಲಮ್ಮ ಆರ್.ಪಾಟೀಲ ಹೇಳಿದರು.</p>.<p>ಗುರು ಬಸವೇಶ್ವರ ಸಂಸ್ಥಾನ ಮಠದ ಶಿವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<p>ಕಸಾಪ ತಾಲ್ಲೂಕು ಸಮಿತಿ ಕೋಶಾಧ್ಯಕ್ಷ ರಮೇಶ ಕಾಮಣ್ಣ ಮಾತನಾಡಿ,‘ಗಡಿಯಲ್ಲಿರುವುದರಿಂದ ನಮ್ಮ ತಾಲ್ಲೂಕಿನ ಬಹುತೇಕ ಗ್ರಾಮಗಳಲ್ಲಿ ಅನ್ಯ ಭಾಷಿಕರ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಕಸಾಪದಿಂದ ಹಲವು ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಜನ ಸಹಕರಿಸಬೇಕು’ ಎಂದರು.</p>.<p>ಕಸಾಪ ತಾಲ್ಲೂಕು ಸಮಿತಿ ಅಧ್ಯಕ್ಷ ನಾಗರಾಜ ಹಾವಣ್ಣ ಅವರು ಅಧ್ಯಕ್ಷತೆ ವಹಿಸಿದ್ದರು.</p>.<p>ಕಸಾಪ ಯುವ ಘಟಕದ ಅಧ್ಯಕ್ಷ ನಾಗೇಶ್ ಮೇತ್ರೆ ನಿರೂಪಿಸಿದರು.</p>.<p>ಪಿಡಿಒ ಸಂದೀಪ್ ಬಿರಾದಾರ, ಕಸಾಪ ಗೌರವ ಅಧ್ಯಕ್ಷ ರುದ್ರಮಣಿ ಮಠಪತಿ, ಕಸಾಪ ಗೌರವ ಕಾರ್ಯದರ್ಶಿ ಬಸವರಾಜ ಪಾಟೀಲ ಗೋರಟಾ, ಉಪನ್ಯಾಸಕರಾದ ರವಿ ಕುಲಕರ್ಣಿ, ಅಶೋಕ, ಗಣಪತರಾವ ಖರಾಟ ಸೇರಿದಂತೆ ಕಾಲೇಜಿನ ಬೋಧಕರು–ಬೋಧಕೇತರ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>