<p><strong>ಬೀದರ್:</strong> ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೀದರ್ ನಗರ ಘಟಕದ ಉಪಾಧ್ಯಕ್ಷ ನಾಗೇಶ ಬಿರಾದಾರ ಅವರು ಔರಾದ್ ತಾಲ್ಲೂಕಿನ ಕೌಠಾದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಸೇರಿದಂತೆ 100 ಜನರಿಗೆ ಸಸಿ ವಿತರಿಸುವ ಮೂಲಕ ತಮ್ಮ 33ನೇ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು.</p>.<p>ಕೋವಿಡ್ ಎರಡನೇ ಅಲೆ ವೇಳೆ ಆಮ್ಲಜನಕ ಕೊರತೆಯಿಂದಾಗಿ ಅನೇಕ ಸೋಂಕಿತರು ಪ್ರಾಣ ಕಳೆದುಕೊಂಡಿದ್ದರು. ಜನರಿಗೆ ಆಮ್ಲಜನಕದ ಕುರಿತು ಜಾಗೃತಿ ಮೂಡಿಸಲು ಸಸಿಗಳನ್ನು ವಿತರಿಸಲಾಗಿದೆ ಎಂದು ಬಿರಾದಾರ ಹೇಳಿದರು.</p>.<p>ಜನ್ಮದಿನ, ನಿಶ್ಚಿತಾರ್ಥ, ಮದುವೆ ವಾರ್ಷಿಕೋತ್ಸವ ಮೊದಲಾದ ಕಾರ್ಯಕ್ರಮಗಳನ್ನು ದುಂದು ವೆಚ್ಚದ ಬದಲು ಸಾಮಾಜಿಕ ಚಟುವಟಿಕೆ ಮೂಲಕ ಆಚರಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.</p>.<p>ಪರಿಸರ ಚೆನ್ನಾಗಿದ್ದರೆ ಮಾತ್ರ ಮನುಕುಲಕ್ಕೆ ಉಳಿಗಾಲ ಇದೆ. ಹೀಗಾಗಿ ಪ್ರತಿಯೊಬ್ಬರೂ ಪರಿಸರ ಕಾಳಜಿ ತೋರಬೇಕು. ಕಾರ್ಯಕ್ರಮಗಳಲ್ಲಿ ಸಸಿಗಳನ್ನು ಉಡುಗೊರೆಯಾಗಿ ಕೊಡಬೇಕು ಎಂದು ಜಿಲ್ಲೆಯವರೇ ಆದ ಚಲನಚಿತ್ರ ನಟ ಹಣ್ಮು ಪಾಜಿ ಸಲಹೆ ಮಾಡಿದರು.</p>.<p>ಪ್ರಮುಖರಾದ ರವಿ ದೇವರೆ, ಬಸವರಾಜ ಶೇಳಕೆ, ಓಂಕಾರ ಗಾದಗೆ, ಸಂಗಮೇಶ ಮರ್ತುಳೆ, ಮಲ್ಲಿಕಾರ್ಜುನ ಕೌಠಾ, ಶಿವಾನಂದ ಬಿರಾದಾರ, ಸೂರ್ಯಕಾಂತ ಬೆಳ್ಳೂರೆ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೀದರ್ ನಗರ ಘಟಕದ ಉಪಾಧ್ಯಕ್ಷ ನಾಗೇಶ ಬಿರಾದಾರ ಅವರು ಔರಾದ್ ತಾಲ್ಲೂಕಿನ ಕೌಠಾದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಸೇರಿದಂತೆ 100 ಜನರಿಗೆ ಸಸಿ ವಿತರಿಸುವ ಮೂಲಕ ತಮ್ಮ 33ನೇ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು.</p>.<p>ಕೋವಿಡ್ ಎರಡನೇ ಅಲೆ ವೇಳೆ ಆಮ್ಲಜನಕ ಕೊರತೆಯಿಂದಾಗಿ ಅನೇಕ ಸೋಂಕಿತರು ಪ್ರಾಣ ಕಳೆದುಕೊಂಡಿದ್ದರು. ಜನರಿಗೆ ಆಮ್ಲಜನಕದ ಕುರಿತು ಜಾಗೃತಿ ಮೂಡಿಸಲು ಸಸಿಗಳನ್ನು ವಿತರಿಸಲಾಗಿದೆ ಎಂದು ಬಿರಾದಾರ ಹೇಳಿದರು.</p>.<p>ಜನ್ಮದಿನ, ನಿಶ್ಚಿತಾರ್ಥ, ಮದುವೆ ವಾರ್ಷಿಕೋತ್ಸವ ಮೊದಲಾದ ಕಾರ್ಯಕ್ರಮಗಳನ್ನು ದುಂದು ವೆಚ್ಚದ ಬದಲು ಸಾಮಾಜಿಕ ಚಟುವಟಿಕೆ ಮೂಲಕ ಆಚರಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.</p>.<p>ಪರಿಸರ ಚೆನ್ನಾಗಿದ್ದರೆ ಮಾತ್ರ ಮನುಕುಲಕ್ಕೆ ಉಳಿಗಾಲ ಇದೆ. ಹೀಗಾಗಿ ಪ್ರತಿಯೊಬ್ಬರೂ ಪರಿಸರ ಕಾಳಜಿ ತೋರಬೇಕು. ಕಾರ್ಯಕ್ರಮಗಳಲ್ಲಿ ಸಸಿಗಳನ್ನು ಉಡುಗೊರೆಯಾಗಿ ಕೊಡಬೇಕು ಎಂದು ಜಿಲ್ಲೆಯವರೇ ಆದ ಚಲನಚಿತ್ರ ನಟ ಹಣ್ಮು ಪಾಜಿ ಸಲಹೆ ಮಾಡಿದರು.</p>.<p>ಪ್ರಮುಖರಾದ ರವಿ ದೇವರೆ, ಬಸವರಾಜ ಶೇಳಕೆ, ಓಂಕಾರ ಗಾದಗೆ, ಸಂಗಮೇಶ ಮರ್ತುಳೆ, ಮಲ್ಲಿಕಾರ್ಜುನ ಕೌಠಾ, ಶಿವಾನಂದ ಬಿರಾದಾರ, ಸೂರ್ಯಕಾಂತ ಬೆಳ್ಳೂರೆ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>