<p>ಬೀದರ್: ‘ಬೀದರ್ ಜಿಲ್ಲೆಯಲ್ಲಿ 13 ಸಾವಿರ ಸಂಘಗಳಿಗೆ ಒಟ್ಟು ₹5 ಕೋಟಿ ಲಾಭಾಂಶ ವಿತರಣೆ ಮಾಡಲಾಗುತ್ತಿದೆ. ಸಂಘಗಳ ಸದಸ್ಯರು ಉತ್ತಮ ವ್ಯವಹಾರ ನಡೆಸಿ ₹30ರಿಂದ 40 ಸಾವಿರ ಲಾಭ ಪಡೆದುಕೊಂಡಿದ್ದಾರೆ’ ಎಂದು ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಪ್ರಾದೇಶಿಕ<br />ವಿಭಾಗದ ನಿರ್ದೇಶಕ ಶಿವರಾಯ ಫ್ರಭು ಹೇಳಿದರು.</p>.<p>ಇಲ್ಲಿಯ ರಾಮಕೃಷ್ಣ ವಿವೇಕಾನಂದ ಆಶ್ರಮದ ವಿವೇಕ ಭವನದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ ಟ್ರಸ್ಟ್ ವತಿಯಿಂದ ಬೀದರ್ ತಾಲ್ಲೂಕಿನ ಸ್ವಸಹಾಯ ಸಂಘಗಳಿಗೆ ಐದು ವರ್ಷದ ಲಾಭಾಂಶ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕೋವಿಡ್ನಿಂದ ಸಂಕಷ್ಟಕ್ಕೆ ಒಳಗಾದ 15 ಸಾವಿರ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಿಸಲಾಗಿದೆ.<br />ಜಿಲ್ಲೆಗೆ 5 ಟನ್ ಆಕ್ಸಿಜನ್ ಪೂರೈಕೆ, 5 ಆಮ್ಲಜನಕ ಸಾಂದ್ರಕಗಳನ್ನು ಕೊಡಲಾಗಿದೆ’ ಎಂದು ತಿಳಿಸಿದರು.</p>.<p>ಜ್ಯೋತಿರ್ಮಯಾನಂದ ಸ್ವಾಮೀಜಿ ಮಾತಾನಾಡಿ, ‘ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಮೂಲಕ ಜಿಲ್ಲೆಯ ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ಒತ್ತು ಕೊಡಲಾಗಿದೆ. ಇದು ಕುಟುಂಬದ ಅಭಿವೃಧ್ಧಿಗೆ ನೆರವಾಗಿದೆ’ ಎಂದು ಬಣ್ಣಿಸಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಮಾತನಾಡಿ, ‘ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಐದು ವರ್ಷಗಳ ಹಿಂದೆ ಬೀದರ್ ಜಿಲ್ಲೆಗೆ ಪಾದಾರ್ಪಣೆ ಮಾಡಿದೆ. ಆರಂಭದಲ್ಲಿ ಅನುಮಾನದಿಂದ ನೋಡಿದ ಜನರೇ ಇಂದು ಸಂಘಗಳಲ್ಲಿ ಸೇರಿಕೊಂಡು ಪ್ರಗತಿ ಸಾಧಿಸಿದ್ದಾರೆ’ ಎಂದರು.</p>.<p>ಕೆನರಾ ಬ್ಯಾಂಕ್ ಬೀದರ್ 2ನೇ ಮುಖ್ಯ ಶಾಖೆಯ ಮುಖ್ಯ ವ್ಯವಸ್ಥಾಪಕ ಶಿವಪ್ರಸಾದ ಮಾತನಾಡಿ, ‘ಕೆನರಾ ಬ್ಯಾಂಕ್ ಮೂಲಕ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಸ್ವ ಸಹಾಯ ಸಂಘಗಳಿಗೆ ಪ್ರಗತಿ ನಿಧಿ ವಿತರಿಸಲಾಗುತ್ತಿದೆ. ಸದಸ್ಯರು ಇದರ ಪೂರ್ಣ ಲಾಭ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಬೀದರ್ ತಾಲ್ಲೂಕಿನ ಯೋಜನಾಧಿಕಾರಿ ರಮೇಶ ನಾಯ್ಕ, ಹಣಕಾಸು ಪ್ರಬಂಧಕ ಯಮನೂರಪ್ಪ, ಕಚೇರಿ ಸಹಾಯಕ ರೋಹನ್, ಸೇವಾ ಪ್ರತಿನಿಧಿಗಳಾದ ಮಂಜುಳಾ, ಶಾಂತಮ್ಮ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ‘ಬೀದರ್ ಜಿಲ್ಲೆಯಲ್ಲಿ 13 ಸಾವಿರ ಸಂಘಗಳಿಗೆ ಒಟ್ಟು ₹5 ಕೋಟಿ ಲಾಭಾಂಶ ವಿತರಣೆ ಮಾಡಲಾಗುತ್ತಿದೆ. ಸಂಘಗಳ ಸದಸ್ಯರು ಉತ್ತಮ ವ್ಯವಹಾರ ನಡೆಸಿ ₹30ರಿಂದ 40 ಸಾವಿರ ಲಾಭ ಪಡೆದುಕೊಂಡಿದ್ದಾರೆ’ ಎಂದು ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಪ್ರಾದೇಶಿಕ<br />ವಿಭಾಗದ ನಿರ್ದೇಶಕ ಶಿವರಾಯ ಫ್ರಭು ಹೇಳಿದರು.</p>.<p>ಇಲ್ಲಿಯ ರಾಮಕೃಷ್ಣ ವಿವೇಕಾನಂದ ಆಶ್ರಮದ ವಿವೇಕ ಭವನದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ ಟ್ರಸ್ಟ್ ವತಿಯಿಂದ ಬೀದರ್ ತಾಲ್ಲೂಕಿನ ಸ್ವಸಹಾಯ ಸಂಘಗಳಿಗೆ ಐದು ವರ್ಷದ ಲಾಭಾಂಶ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕೋವಿಡ್ನಿಂದ ಸಂಕಷ್ಟಕ್ಕೆ ಒಳಗಾದ 15 ಸಾವಿರ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಿಸಲಾಗಿದೆ.<br />ಜಿಲ್ಲೆಗೆ 5 ಟನ್ ಆಕ್ಸಿಜನ್ ಪೂರೈಕೆ, 5 ಆಮ್ಲಜನಕ ಸಾಂದ್ರಕಗಳನ್ನು ಕೊಡಲಾಗಿದೆ’ ಎಂದು ತಿಳಿಸಿದರು.</p>.<p>ಜ್ಯೋತಿರ್ಮಯಾನಂದ ಸ್ವಾಮೀಜಿ ಮಾತಾನಾಡಿ, ‘ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಮೂಲಕ ಜಿಲ್ಲೆಯ ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ಒತ್ತು ಕೊಡಲಾಗಿದೆ. ಇದು ಕುಟುಂಬದ ಅಭಿವೃಧ್ಧಿಗೆ ನೆರವಾಗಿದೆ’ ಎಂದು ಬಣ್ಣಿಸಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಮಾತನಾಡಿ, ‘ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಐದು ವರ್ಷಗಳ ಹಿಂದೆ ಬೀದರ್ ಜಿಲ್ಲೆಗೆ ಪಾದಾರ್ಪಣೆ ಮಾಡಿದೆ. ಆರಂಭದಲ್ಲಿ ಅನುಮಾನದಿಂದ ನೋಡಿದ ಜನರೇ ಇಂದು ಸಂಘಗಳಲ್ಲಿ ಸೇರಿಕೊಂಡು ಪ್ರಗತಿ ಸಾಧಿಸಿದ್ದಾರೆ’ ಎಂದರು.</p>.<p>ಕೆನರಾ ಬ್ಯಾಂಕ್ ಬೀದರ್ 2ನೇ ಮುಖ್ಯ ಶಾಖೆಯ ಮುಖ್ಯ ವ್ಯವಸ್ಥಾಪಕ ಶಿವಪ್ರಸಾದ ಮಾತನಾಡಿ, ‘ಕೆನರಾ ಬ್ಯಾಂಕ್ ಮೂಲಕ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಸ್ವ ಸಹಾಯ ಸಂಘಗಳಿಗೆ ಪ್ರಗತಿ ನಿಧಿ ವಿತರಿಸಲಾಗುತ್ತಿದೆ. ಸದಸ್ಯರು ಇದರ ಪೂರ್ಣ ಲಾಭ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಬೀದರ್ ತಾಲ್ಲೂಕಿನ ಯೋಜನಾಧಿಕಾರಿ ರಮೇಶ ನಾಯ್ಕ, ಹಣಕಾಸು ಪ್ರಬಂಧಕ ಯಮನೂರಪ್ಪ, ಕಚೇರಿ ಸಹಾಯಕ ರೋಹನ್, ಸೇವಾ ಪ್ರತಿನಿಧಿಗಳಾದ ಮಂಜುಳಾ, ಶಾಂತಮ್ಮ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>