<p><strong>ಬೀದರ್</strong>: ಪ್ರವರ್ಧ ಸ್ವಯಂ ಸೇವಾ ಸಂಸ್ಥೆ, ಬೆಂಗಳೂರಿನ ಅಜೀಂ ಪ್ರೇಮ್ಜಿ ಫಿಲಾಂತ್ರಪಿಕ್ ಇನಿಷಿಯೇಟಿವ್ಸ್ ಹಾಗೂ ಆರ್ಬಿಟ್ ಸಂಸ್ಥೆ ವತಿಯಿಂದ ಬೀದರ್ ತಾಲ್ಲೂಕಿನ ಘೋಡಂಪಳ್ಳಿಯಲ್ಲಿ 40 ಜನ ವಲಸೆ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್, ಸ್ಯಾನಿಟೈಸರ್ ಹಾಗೂ ಮಾಸ್ಕ್ ವಿತರಿಸಲಾಯಿತು.</p>.<p>ಪ್ರವರ್ಧ ಸಂಸ್ಥೆಯ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ್ ಬಿ ಮಾತನಾಡಿ, ‘ಬಿಹಾರ, ಉತ್ತರಪ್ರದೇಶ, ಆಂಧ್ರಪ್ರದೇಶ ಸೇರಿದಂತೆ ವಿವಿಧೆಡೆಯಿಂದ ಬಹಳಷ್ಟು ಕಾರ್ಮಿಕರು ಜಿಲ್ಲೆಗೆ ವಲಸೆ ಬಂದಿದ್ದಾರೆ. ಕಟ್ಟಡ ನಿರ್ಮಾಣ, ಇಟ್ಟಿಗೆ ತಯಾರಿಕೆ ಹಾಗೂ ವಿವಿಧ ಕಾರ್ಖಾನೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೋವಿಡ್ ಪ್ರಯುಕ್ತ ವಿಧಿಸಿರುವ ಲಾಕ್ಡೌನ್ನಿಂದ ತೊಂದರೆಗೆ ಒಳಗಾಗಿರುವ ಕಾರಣ ಅವರಿಗೆ ಆಹಾರಧಾನ್ಯ ಕಿಟ್ ವಿತರಿಸಲಾಗಿದೆ’ ಎಂದು ತಿಳಿಸಿದರು.</p>.<p>‘ಕಿಟ್ 10 ಕೆ.ಜಿ ಅಕ್ಕಿ, 5 ಕೆ.ಜಿ ಗೋಧಿ ಹಿಟ್ಟು, 1 ಕೆ.ಜಿ ಸಿಹಿ ಎಣ್ಣೆ, 1 ಕೆ.ಜಿ. ಬೇಳೆ, 1 ಕೆ.ಜಿ ಸಕ್ಕರೆ, ಉಪ್ಪು, ಖಾರ ಮೊದಲಾದ ಸಾಮಗ್ರಿಗಳನ್ನು ಒಳಗೊಂಡಿದೆ’ ಎಂದು ತಿಳಿಸಿದರು.</p>.<p>‘ವಲಸೆ ಕಾರ್ಮಿಕರು ತಪ್ಪದೇ ಕೋವಿಡ್ ಲಸಿಕೆ ಪಡೆಯಬೇಕು. ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು’ ಎಂದು ಮನವಿ ಮಾಡಿದರು.</p>.<p>ಸಂಸ್ಥೆಯ ಆಪ್ತ ಸಮಾಲೋಚಕ ಕಲ್ಲಪ್ಪ, ಕ್ಷೇತ್ರ ಕಾರ್ಯಕರ್ತರಾದ ಸತೀಶ, ಸಾಧನಾ, ಜಗದೀಶ, ಶ್ರೀದೇವಿ, ಸೈಮನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಪ್ರವರ್ಧ ಸ್ವಯಂ ಸೇವಾ ಸಂಸ್ಥೆ, ಬೆಂಗಳೂರಿನ ಅಜೀಂ ಪ್ರೇಮ್ಜಿ ಫಿಲಾಂತ್ರಪಿಕ್ ಇನಿಷಿಯೇಟಿವ್ಸ್ ಹಾಗೂ ಆರ್ಬಿಟ್ ಸಂಸ್ಥೆ ವತಿಯಿಂದ ಬೀದರ್ ತಾಲ್ಲೂಕಿನ ಘೋಡಂಪಳ್ಳಿಯಲ್ಲಿ 40 ಜನ ವಲಸೆ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್, ಸ್ಯಾನಿಟೈಸರ್ ಹಾಗೂ ಮಾಸ್ಕ್ ವಿತರಿಸಲಾಯಿತು.</p>.<p>ಪ್ರವರ್ಧ ಸಂಸ್ಥೆಯ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ್ ಬಿ ಮಾತನಾಡಿ, ‘ಬಿಹಾರ, ಉತ್ತರಪ್ರದೇಶ, ಆಂಧ್ರಪ್ರದೇಶ ಸೇರಿದಂತೆ ವಿವಿಧೆಡೆಯಿಂದ ಬಹಳಷ್ಟು ಕಾರ್ಮಿಕರು ಜಿಲ್ಲೆಗೆ ವಲಸೆ ಬಂದಿದ್ದಾರೆ. ಕಟ್ಟಡ ನಿರ್ಮಾಣ, ಇಟ್ಟಿಗೆ ತಯಾರಿಕೆ ಹಾಗೂ ವಿವಿಧ ಕಾರ್ಖಾನೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೋವಿಡ್ ಪ್ರಯುಕ್ತ ವಿಧಿಸಿರುವ ಲಾಕ್ಡೌನ್ನಿಂದ ತೊಂದರೆಗೆ ಒಳಗಾಗಿರುವ ಕಾರಣ ಅವರಿಗೆ ಆಹಾರಧಾನ್ಯ ಕಿಟ್ ವಿತರಿಸಲಾಗಿದೆ’ ಎಂದು ತಿಳಿಸಿದರು.</p>.<p>‘ಕಿಟ್ 10 ಕೆ.ಜಿ ಅಕ್ಕಿ, 5 ಕೆ.ಜಿ ಗೋಧಿ ಹಿಟ್ಟು, 1 ಕೆ.ಜಿ ಸಿಹಿ ಎಣ್ಣೆ, 1 ಕೆ.ಜಿ. ಬೇಳೆ, 1 ಕೆ.ಜಿ ಸಕ್ಕರೆ, ಉಪ್ಪು, ಖಾರ ಮೊದಲಾದ ಸಾಮಗ್ರಿಗಳನ್ನು ಒಳಗೊಂಡಿದೆ’ ಎಂದು ತಿಳಿಸಿದರು.</p>.<p>‘ವಲಸೆ ಕಾರ್ಮಿಕರು ತಪ್ಪದೇ ಕೋವಿಡ್ ಲಸಿಕೆ ಪಡೆಯಬೇಕು. ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು’ ಎಂದು ಮನವಿ ಮಾಡಿದರು.</p>.<p>ಸಂಸ್ಥೆಯ ಆಪ್ತ ಸಮಾಲೋಚಕ ಕಲ್ಲಪ್ಪ, ಕ್ಷೇತ್ರ ಕಾರ್ಯಕರ್ತರಾದ ಸತೀಶ, ಸಾಧನಾ, ಜಗದೀಶ, ಶ್ರೀದೇವಿ, ಸೈಮನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>