<p><strong>ಬೀದರ್:</strong> ಕೋವಿಡ್ ಪ್ರಯುಕ್ತ ಕಾರ್ಮಿಕ ಇಲಾಖೆ ವತಿಯಿಂದ ಇಲ್ಲಿಯ ವಾರ್ಡ್ ಸಂಖ್ಯೆ 18 ರ ವ್ಯಾಪ್ತಿಯ ಶಹಾಗಂಜ್ನಲ್ಲಿ ಸಾಯಿ ಕಾಲೊನಿ, ಹನುಮಾನ ನಗರ, ನಂದಿ ಕಾಲೊನಿ ಹಾಗೂ ಶಹಾಗಂಜ್ನ 128 ಮಂದಿ ಕಟ್ಟಡ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್ ವಿತರಿಸಲಾಯಿತು.</p>.<p>ರಾಜ್ಯ ಮಹಿಳಾ ಸಹಕಾರ ಮಹಾ ಮಂಡಳ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ ಹಾಗೂ ನಗರಸಭೆ ಸದಸ್ಯೆ ಉಲ್ಲಾಸಿನಿ ವಿಕ್ರಮ ಮುದಾಳೆ ಕಿಟ್ ವಿತರಣೆಗೆ ಜಂಟಿಯಾಗಿ ಚಾಲನೆ ನೀಡಿದರು.</p>.<p>ಕೋವಿಡ್ನಿಂದ ಸಂಕಷ್ಟಕ್ಕೆ ಒಳಗಾಗಿರುವ ಕಾರ್ಮಿಕರಿಗೆ ಬಿಜೆಪಿ ಸರ್ಕಾರ ಆಹಾರಧಾನ್ಯ ಕಿಟ್ ವಿತರಣೆ ಮೂಲಕ ನೆರವಾಗುತ್ತಿದೆ ಎಂದು ಉಲ್ಲಾಸಿನಿ ಹೇಳಿದರು.</p>.<p>ಬೀದರ್ ಸೇರಿದಂತೆ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದೆ. ಆದರೆ, ಸಂಪೂರ್ಣ ನಿರ್ಮೂಲನೆ ಆಗಿಲ್ಲ. ಹೀಗಾಗಿ ಸಾರ್ವಜನಿಕರು ತಪ್ಪದೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದರು.</p>.<p>ಯುವ ಮುಖಂಡ ವಿಕ್ರಮ ಮುದಾಳೆ, ಕೆ. ಸಿದ್ರಾಮೇಶ್ವರ ರೆಡ್ಡಿ, ವಿನಾಯಕ ಮುದಾಳೆ, ಸಂತೋಷ ನಿಂಬೂರೆ, ಶರಣು ಬಿರಾದಾರ, ಶಿವಕುಮಾರ ಸ್ವಾಮಿ, ಮಹೇಶ ಮಡಕಿ, ಸಂತೋಷ ಭಂಗೂರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಕೋವಿಡ್ ಪ್ರಯುಕ್ತ ಕಾರ್ಮಿಕ ಇಲಾಖೆ ವತಿಯಿಂದ ಇಲ್ಲಿಯ ವಾರ್ಡ್ ಸಂಖ್ಯೆ 18 ರ ವ್ಯಾಪ್ತಿಯ ಶಹಾಗಂಜ್ನಲ್ಲಿ ಸಾಯಿ ಕಾಲೊನಿ, ಹನುಮಾನ ನಗರ, ನಂದಿ ಕಾಲೊನಿ ಹಾಗೂ ಶಹಾಗಂಜ್ನ 128 ಮಂದಿ ಕಟ್ಟಡ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್ ವಿತರಿಸಲಾಯಿತು.</p>.<p>ರಾಜ್ಯ ಮಹಿಳಾ ಸಹಕಾರ ಮಹಾ ಮಂಡಳ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ ಹಾಗೂ ನಗರಸಭೆ ಸದಸ್ಯೆ ಉಲ್ಲಾಸಿನಿ ವಿಕ್ರಮ ಮುದಾಳೆ ಕಿಟ್ ವಿತರಣೆಗೆ ಜಂಟಿಯಾಗಿ ಚಾಲನೆ ನೀಡಿದರು.</p>.<p>ಕೋವಿಡ್ನಿಂದ ಸಂಕಷ್ಟಕ್ಕೆ ಒಳಗಾಗಿರುವ ಕಾರ್ಮಿಕರಿಗೆ ಬಿಜೆಪಿ ಸರ್ಕಾರ ಆಹಾರಧಾನ್ಯ ಕಿಟ್ ವಿತರಣೆ ಮೂಲಕ ನೆರವಾಗುತ್ತಿದೆ ಎಂದು ಉಲ್ಲಾಸಿನಿ ಹೇಳಿದರು.</p>.<p>ಬೀದರ್ ಸೇರಿದಂತೆ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದೆ. ಆದರೆ, ಸಂಪೂರ್ಣ ನಿರ್ಮೂಲನೆ ಆಗಿಲ್ಲ. ಹೀಗಾಗಿ ಸಾರ್ವಜನಿಕರು ತಪ್ಪದೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದರು.</p>.<p>ಯುವ ಮುಖಂಡ ವಿಕ್ರಮ ಮುದಾಳೆ, ಕೆ. ಸಿದ್ರಾಮೇಶ್ವರ ರೆಡ್ಡಿ, ವಿನಾಯಕ ಮುದಾಳೆ, ಸಂತೋಷ ನಿಂಬೂರೆ, ಶರಣು ಬಿರಾದಾರ, ಶಿವಕುಮಾರ ಸ್ವಾಮಿ, ಮಹೇಶ ಮಡಕಿ, ಸಂತೋಷ ಭಂಗೂರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>