ಬೀದರ್: ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಸಹಯೋಗದಲ್ಲಿ ಇಲ್ಲಿಯ ಭಗತ್ಸಿಂಗ್ ವೃತ್ತ ಸಮೀಪದ ಸ್ಟಾರ್ ಲಾಡ್ಜ್ನಲ್ಲಿ 400 ಜನ ಕಟ್ಟಡ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್, ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಲಾಯಿತು.
ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಬಾಬುರಾವ್ ಹೊನ್ನಾ, ಜಿಲ್ಲಾ ಘಟಕದ ಗೌರವಾಧ್ಯಕ್ಷ ಅಲಿ ಅಹಮ್ಮದ್ ಖಾನ್, ಅಧ್ಯಕ್ಷ ಶಫಾಯತ್ ಅಲಿ, ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ ಮಾತನಾಡಿದರು.
ಚಿಂತಕರಾದ ಸುಂದರರಾಜ್, ಗಂಧರ್ವ ಸೇನಾ ಇದ್ದರು. ಮಂಗಲಾ ನಿರೂಪಿಸಿದರು.
ಕೋವಿಡ್ನಿಂದ ಮೃತಪಟ್ಟ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ. ರಾಮಚಂದ್ರಪ್ಪ ಅವರ ಆತ್ಮಕ್ಕೆ ಶಾಂತಿ ಕೋರಿ ಎರಡು ನಿಮಿಷಗಳ ಮೌನ ಆಚರಿಸಲಾಯಿತು.