<p><strong>ಬೀದರ್: </strong>ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಅವರು ತಮ್ಮ ತಂದೆ ಧರ್ಮಸಿಂಗ್ ಅವರ ಹೆಸರಿನ ಫೌಂಡೇಶನ್ ವತಿಯಿಂದ ಹದಿನೈದು ದಿನಗಳ ಅವಧಿಯಲ್ಲಿ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ 1.5 ಲಕ್ಷ ಜನರಿಗೆ ಉಚಿತ ಆಹಾರ ಪೊಟ್ಟಣ ವಿತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.</p>.<p>ಕೋವಿಡ್ ಪ್ರಯುಕ್ತ ವಿಧಿಸಲಾದ ಲಾಕ್ಡೌನ್ನಿಂದ ತೊಂದರೆಗೆ ಒಳಗಾದ ಬಸವಕಲ್ಯಾಣ ನಗರ ಹಾಗೂ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳ ಬಡವರು, ನಿರ್ಗತಿಕರು, ಅಲೆಮಾರಿಗಳು, ಕೊರೊನಾ ಸೋಂಕಿತರು, ರೋಗಿಗಳು ಸೇರಿದಂತೆ 10 ಸಾವಿರ ಜನರಿಗೆ ಆಹಾರ ಪೂರೈಕೆ ಮಾಡುತ್ತಿದ್ದಾರೆ.</p>.<p>ಚಪಾತಿ, ಪಲ್ಯ, ಅನ್ನ, ಸಾಂಬಾರು, ಮೊಸರು, ಮಜ್ಜಿಗೆ ಒಳಗೊಂಡ ಆಹಾರ ಪೊಟ್ಟಣ ವಿತರಣೆ ಮಾಡುತ್ತಿದ್ದಾರೆ. ಒಂದು ದಿನ ವೆಜ್ ಬಿರಿಯಾನಿ, ಮತ್ತೊಂದು ದಿನ ಆಲೂಭಾತ್, ಇನ್ನೊಂದು ದಿನ ಚಿತ್ರಾನ್ನ ಹೀಗೆ ಆಹಾರ ಒದಗಿಸುತ್ತಿದ್ದಾರೆ.</p>.<p>‘ಸಂಕಷ್ಟದಲ್ಲಿದ್ದವರಿಗೆ ನೆರವಾಗು ವುದು ನಮ್ಮ ಧರ್ಮ. ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 15 ದಿನಗಳಿಂದ ನಿರಂತರ ಅನ್ನ ದಾಸೋಹ ಮಾಡುತ್ತಿದ್ದೇನೆ. ಲಾಕ್ಡೌನ್ ಮುಗಿಯುವವರೆಗೂ ಆಹಾರ ಪೊಟ್ಟಣ ವಿತರಿಸಲಾಗುವುದು’ ಎಂದು ವಿಜಯಸಿಂಗ್ ತಿಳಿಸಿದ್ದಾರೆ.</p>.<p>‘ಆಹಾರ ಸರಬರಾಜು ಮಾಡಲು ನಿತ್ಯ 10 ಕ್ವಿಂಟಲ್ ಅಕ್ಕಿ ಬಳಸಲಾಗುತ್ತಿದೆ. ಅಡುಗೆ ತಯಾರಿಕೆ, ಪ್ಯಾಕಿಂಗ್ ಹಾಗೂ ವಿತರಣೆ ಕಾರ್ಯದಲ್ಲಿ ಪ್ರತ್ಯೇಕ ತಂಡಗಳು ಕಾರ್ಯನಿರತವಾಗಿವೆ. ಧರ್ಮಸಿಂಗ್ ಫೌಂಡೇಶನ್ ಕಾರ್ಯಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.</p>.<p>‘ಸೋಂಕಿತರನ್ನು ತುರ್ತಾಗಿ ಆಸ್ಪತ್ರೆಗೆ ಸಾಗಿಸಲು ಬಸವಕಲ್ಯಾಣ ಹಾಗೂ ಹುಲಸೂರು ತಾಲ್ಲೂಕಿಗೆ ಒಟ್ಟು ಎರಡು ಹಾಗೂ ಔರಾದ್ ತಾಲ್ಲೂಕಿಗೆ ಒಂದು ಆಂಬುಲೆನ್ಸ್ ಒದಗಿಸಲಾಗಿದೆ. ಆಂಬುಲೆನ್ಸ್ಗಳು ರೋಗಿಗಳಿಗೆ ಉಚಿತ ಸೇವೆ ನೀಡಲಿವೆ. ಅವಶ್ಯಕತೆ ಇರುವವರು ಆಂಬುಲೆನ್ಸ್ ಸೇವೆಯ ಪ್ರಯೋಜನ ಪಡೆಯಬೇಕು’ ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಅವರು ತಮ್ಮ ತಂದೆ ಧರ್ಮಸಿಂಗ್ ಅವರ ಹೆಸರಿನ ಫೌಂಡೇಶನ್ ವತಿಯಿಂದ ಹದಿನೈದು ದಿನಗಳ ಅವಧಿಯಲ್ಲಿ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ 1.5 ಲಕ್ಷ ಜನರಿಗೆ ಉಚಿತ ಆಹಾರ ಪೊಟ್ಟಣ ವಿತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.</p>.<p>ಕೋವಿಡ್ ಪ್ರಯುಕ್ತ ವಿಧಿಸಲಾದ ಲಾಕ್ಡೌನ್ನಿಂದ ತೊಂದರೆಗೆ ಒಳಗಾದ ಬಸವಕಲ್ಯಾಣ ನಗರ ಹಾಗೂ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳ ಬಡವರು, ನಿರ್ಗತಿಕರು, ಅಲೆಮಾರಿಗಳು, ಕೊರೊನಾ ಸೋಂಕಿತರು, ರೋಗಿಗಳು ಸೇರಿದಂತೆ 10 ಸಾವಿರ ಜನರಿಗೆ ಆಹಾರ ಪೂರೈಕೆ ಮಾಡುತ್ತಿದ್ದಾರೆ.</p>.<p>ಚಪಾತಿ, ಪಲ್ಯ, ಅನ್ನ, ಸಾಂಬಾರು, ಮೊಸರು, ಮಜ್ಜಿಗೆ ಒಳಗೊಂಡ ಆಹಾರ ಪೊಟ್ಟಣ ವಿತರಣೆ ಮಾಡುತ್ತಿದ್ದಾರೆ. ಒಂದು ದಿನ ವೆಜ್ ಬಿರಿಯಾನಿ, ಮತ್ತೊಂದು ದಿನ ಆಲೂಭಾತ್, ಇನ್ನೊಂದು ದಿನ ಚಿತ್ರಾನ್ನ ಹೀಗೆ ಆಹಾರ ಒದಗಿಸುತ್ತಿದ್ದಾರೆ.</p>.<p>‘ಸಂಕಷ್ಟದಲ್ಲಿದ್ದವರಿಗೆ ನೆರವಾಗು ವುದು ನಮ್ಮ ಧರ್ಮ. ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 15 ದಿನಗಳಿಂದ ನಿರಂತರ ಅನ್ನ ದಾಸೋಹ ಮಾಡುತ್ತಿದ್ದೇನೆ. ಲಾಕ್ಡೌನ್ ಮುಗಿಯುವವರೆಗೂ ಆಹಾರ ಪೊಟ್ಟಣ ವಿತರಿಸಲಾಗುವುದು’ ಎಂದು ವಿಜಯಸಿಂಗ್ ತಿಳಿಸಿದ್ದಾರೆ.</p>.<p>‘ಆಹಾರ ಸರಬರಾಜು ಮಾಡಲು ನಿತ್ಯ 10 ಕ್ವಿಂಟಲ್ ಅಕ್ಕಿ ಬಳಸಲಾಗುತ್ತಿದೆ. ಅಡುಗೆ ತಯಾರಿಕೆ, ಪ್ಯಾಕಿಂಗ್ ಹಾಗೂ ವಿತರಣೆ ಕಾರ್ಯದಲ್ಲಿ ಪ್ರತ್ಯೇಕ ತಂಡಗಳು ಕಾರ್ಯನಿರತವಾಗಿವೆ. ಧರ್ಮಸಿಂಗ್ ಫೌಂಡೇಶನ್ ಕಾರ್ಯಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.</p>.<p>‘ಸೋಂಕಿತರನ್ನು ತುರ್ತಾಗಿ ಆಸ್ಪತ್ರೆಗೆ ಸಾಗಿಸಲು ಬಸವಕಲ್ಯಾಣ ಹಾಗೂ ಹುಲಸೂರು ತಾಲ್ಲೂಕಿಗೆ ಒಟ್ಟು ಎರಡು ಹಾಗೂ ಔರಾದ್ ತಾಲ್ಲೂಕಿಗೆ ಒಂದು ಆಂಬುಲೆನ್ಸ್ ಒದಗಿಸಲಾಗಿದೆ. ಆಂಬುಲೆನ್ಸ್ಗಳು ರೋಗಿಗಳಿಗೆ ಉಚಿತ ಸೇವೆ ನೀಡಲಿವೆ. ಅವಶ್ಯಕತೆ ಇರುವವರು ಆಂಬುಲೆನ್ಸ್ ಸೇವೆಯ ಪ್ರಯೋಜನ ಪಡೆಯಬೇಕು’ ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>