<p><strong>ಬೀದರ್:</strong> ಬೆಂಗಳೂರಿನ ಚಿಂತಕ ಸೂಲಿಬೆಲೆ ಚಕ್ರವರ್ತಿ ನೇತೃತ್ವದ ಯುವ ಬ್ರಿಗೇಡ್ ಇಲ್ಲಿಯ ಪ್ರತಾಪನಗರದ ಜನಸೇವಾ ಶಾಲೆಯಲ್ಲಿ ಖಾಸಗಿ ಶಾಲಾ ಶಿಕ್ಷಕರಿಗೆ ಆಹಾರಧಾನ್ಯ ಕಿಟ್ ವಿತರಿಸಿತು.</p>.<p>ಬ್ರಿಗೇಡ್ ಪದಾಧಿಕಾರಿಗಳು ಜಿಲ್ಲೆಯ ವಿವಿಧ ಖಾಸಗಿ ಶಾಲೆಗಳ 75 ಜನ ಶಿಕ್ಷಕರಿಗೆ ಒಟ್ಟು ₹2 ಲಕ್ಷ ಮೌಲ್ಯದ ತಲಾ 10 ಕೆ.ಜಿ ಅಕ್ಕಿ, 2 ಕೆ.ಜಿ ಗೋಧಿ ಹಿಟ್ಟು, 2 ಕೆ.ಜಿ. ತೊಗರಿ ಬೇಳೆ, 2 ಕೆ.ಜಿ ರವೆ, 2 ಕೆ.ಜಿ ಸಕ್ಕರೆ ಹಾಗೂ 1 ಕೆ.ಜಿ ಸಿಹಿ ಎಣ್ಣೆ ಒಳಗೊಂಡ ‘ಗುರು ಗೌರವ’ ಕಿಟ್ ವಿತರಣೆ ಮಾಡಿದರು.</p>.<p>ಕೋವಿಡ್ ಶಿಕ್ಷಣ ಕ್ಷೇತ್ರದ ಮೇಲೂ ತೀವ್ರ ಪರಿಣಾಮ ಉಂಟು ಮಾಡಿದೆ. ಬಹಳಷ್ಟು ಖಾಸಗಿ ಶಾಲೆಗಳು ಮುಚ್ಚಿ ಹೋಗಿವೆ. ಸಾವಿರಾರು ಶಿಕ್ಷಕರು ಉದ್ಯೋಗ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಜನಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ರೇವಣಸಿದ್ದಪ್ಪ ಜಲಾದೆ ತೀವ್ರ ಕಳವಳ ವ್ಯಕ್ತಪಡಿಸಿದರು.</p>.<p>ಕೋವಿಡ್ನಿಂದ ತೊಂದರೆಗೆ ಒಳಗಾದ ಶಿಕ್ಷಕರಿಗೆ ಯುವ ಬ್ರಿಗೇಡ್ ನೆರವಿನ ಹಸ್ತ ಚಾಚಿರುವುದು ಪ್ರಶಂಸ ನೀಯವಾಗಿದೆ ಎಂದು ತಿಳಿಸಿದರು.</p>.<p>ಯುವ ಬ್ರಿಗೇಡ್ ಕಲಬುರ್ಗಿ ವಿಭಾಗ ಸಂಚಾಲಕ ಶ್ರೀಕಾಂತ ಕೊಳ್ಳೂರ ಮಾತನಾಡಿ, ಯುವ ಬ್ರಿಗೇಡ್ ವಿವಿಧ ಸಾಮಾಜಿಕ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆ ಎಂದು ತಿಳಿಸಿದರು.</p>.<p>ಕೋವಿಡ್ನಿಂದ ತೊಂದರೆಯಲ್ಲಿ ರುವ ಖಾಸಗಿ ಶಾಲಾ ಶಿಕ್ಷಕರಿಗೆ ನೆರವಾಗಲು ಆಹಾರಧಾನ್ಯ ಕಿಟ್ ವಿತರಿಸಲಾಗಿದೆ. ಜಿಲ್ಲೆಯಲ್ಲಿ ಖಾಸಗಿ ಶಾಲೆಗಳ ಒಟ್ಟು ಒಂದು ಸಾವಿರ ಶಿಕ್ಷಕರಿಗೆ ಕಿಟ್ ವಿತರಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.</p>.<p>ಬಿ.ಎಸ್. ಕುದರೆ ಅಧ್ಯಕ್ಷತೆ ವಹಿಸಿದ್ದರು. ವಿಕಾಸ ಅಕಾಡೆಮಿ ಜಿಲ್ಲಾ ಘಟಕದ ಅಧ್ಯಕ್ಷ ಕರ್ನಲ್ ಶರಣಪ್ಪ ಸಿನೇನಪುರ, ಜನಸೇವಾ ಶಾಲೆಯ ಆಡಳಿತ ಮಂಡಳಿ ಸದಸ್ಯ ಶಿವಲಿಂಗಪ್ಪ ಜಲಾದೆ, ಯುವ ಬ್ರಿಗೇಡ್ನ ಪ್ರಶಾಂತ ವಡ್ಡನಕೇರಾ, ಸಂತೋಷ ಮಂಗಳೂರೆ, ರಾಜು ವಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಬೆಂಗಳೂರಿನ ಚಿಂತಕ ಸೂಲಿಬೆಲೆ ಚಕ್ರವರ್ತಿ ನೇತೃತ್ವದ ಯುವ ಬ್ರಿಗೇಡ್ ಇಲ್ಲಿಯ ಪ್ರತಾಪನಗರದ ಜನಸೇವಾ ಶಾಲೆಯಲ್ಲಿ ಖಾಸಗಿ ಶಾಲಾ ಶಿಕ್ಷಕರಿಗೆ ಆಹಾರಧಾನ್ಯ ಕಿಟ್ ವಿತರಿಸಿತು.</p>.<p>ಬ್ರಿಗೇಡ್ ಪದಾಧಿಕಾರಿಗಳು ಜಿಲ್ಲೆಯ ವಿವಿಧ ಖಾಸಗಿ ಶಾಲೆಗಳ 75 ಜನ ಶಿಕ್ಷಕರಿಗೆ ಒಟ್ಟು ₹2 ಲಕ್ಷ ಮೌಲ್ಯದ ತಲಾ 10 ಕೆ.ಜಿ ಅಕ್ಕಿ, 2 ಕೆ.ಜಿ ಗೋಧಿ ಹಿಟ್ಟು, 2 ಕೆ.ಜಿ. ತೊಗರಿ ಬೇಳೆ, 2 ಕೆ.ಜಿ ರವೆ, 2 ಕೆ.ಜಿ ಸಕ್ಕರೆ ಹಾಗೂ 1 ಕೆ.ಜಿ ಸಿಹಿ ಎಣ್ಣೆ ಒಳಗೊಂಡ ‘ಗುರು ಗೌರವ’ ಕಿಟ್ ವಿತರಣೆ ಮಾಡಿದರು.</p>.<p>ಕೋವಿಡ್ ಶಿಕ್ಷಣ ಕ್ಷೇತ್ರದ ಮೇಲೂ ತೀವ್ರ ಪರಿಣಾಮ ಉಂಟು ಮಾಡಿದೆ. ಬಹಳಷ್ಟು ಖಾಸಗಿ ಶಾಲೆಗಳು ಮುಚ್ಚಿ ಹೋಗಿವೆ. ಸಾವಿರಾರು ಶಿಕ್ಷಕರು ಉದ್ಯೋಗ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಜನಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ರೇವಣಸಿದ್ದಪ್ಪ ಜಲಾದೆ ತೀವ್ರ ಕಳವಳ ವ್ಯಕ್ತಪಡಿಸಿದರು.</p>.<p>ಕೋವಿಡ್ನಿಂದ ತೊಂದರೆಗೆ ಒಳಗಾದ ಶಿಕ್ಷಕರಿಗೆ ಯುವ ಬ್ರಿಗೇಡ್ ನೆರವಿನ ಹಸ್ತ ಚಾಚಿರುವುದು ಪ್ರಶಂಸ ನೀಯವಾಗಿದೆ ಎಂದು ತಿಳಿಸಿದರು.</p>.<p>ಯುವ ಬ್ರಿಗೇಡ್ ಕಲಬುರ್ಗಿ ವಿಭಾಗ ಸಂಚಾಲಕ ಶ್ರೀಕಾಂತ ಕೊಳ್ಳೂರ ಮಾತನಾಡಿ, ಯುವ ಬ್ರಿಗೇಡ್ ವಿವಿಧ ಸಾಮಾಜಿಕ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆ ಎಂದು ತಿಳಿಸಿದರು.</p>.<p>ಕೋವಿಡ್ನಿಂದ ತೊಂದರೆಯಲ್ಲಿ ರುವ ಖಾಸಗಿ ಶಾಲಾ ಶಿಕ್ಷಕರಿಗೆ ನೆರವಾಗಲು ಆಹಾರಧಾನ್ಯ ಕಿಟ್ ವಿತರಿಸಲಾಗಿದೆ. ಜಿಲ್ಲೆಯಲ್ಲಿ ಖಾಸಗಿ ಶಾಲೆಗಳ ಒಟ್ಟು ಒಂದು ಸಾವಿರ ಶಿಕ್ಷಕರಿಗೆ ಕಿಟ್ ವಿತರಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.</p>.<p>ಬಿ.ಎಸ್. ಕುದರೆ ಅಧ್ಯಕ್ಷತೆ ವಹಿಸಿದ್ದರು. ವಿಕಾಸ ಅಕಾಡೆಮಿ ಜಿಲ್ಲಾ ಘಟಕದ ಅಧ್ಯಕ್ಷ ಕರ್ನಲ್ ಶರಣಪ್ಪ ಸಿನೇನಪುರ, ಜನಸೇವಾ ಶಾಲೆಯ ಆಡಳಿತ ಮಂಡಳಿ ಸದಸ್ಯ ಶಿವಲಿಂಗಪ್ಪ ಜಲಾದೆ, ಯುವ ಬ್ರಿಗೇಡ್ನ ಪ್ರಶಾಂತ ವಡ್ಡನಕೇರಾ, ಸಂತೋಷ ಮಂಗಳೂರೆ, ರಾಜು ವಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>