<p><strong>ಹುಮನಾಬಾದ್</strong>: ‘ಸರ್ಕಾರಿ ಸೌಲಭ್ಯಗಳ ಲಾಭ ಪಡೆದು ಆರ್ಥಿಕವಾಗಿ ಸದೃಢರಾಗಬೇಕು’ ಎಂದು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಹೇಳಿದರು.</p>.<p>ಪಟ್ಟಣದ ಶಾಸಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 9 ಫಲಾನುಭವಿಗಳಿಗೆ ಪಂಪ್ಸೆಟ್ ವಿತರಿಸಿ ಮಾತನಾಡಿದರು.</p>.<p>‘ಸಾವಿರಾರು ರೂಪಾಯಿ ನೀಡಿ ಪಂಪ್, ಮೋಟಾರ್ ಮತ್ತು ಪೈಪ್ಗಳನ್ನು ಕೊಂಡುಕೊಳ್ಳಲಾಗದ ಬಡ ರೈತರನ್ನು ಗುರುತಿಸಿ ಪ್ರತಿವರ್ಷ ಉಚಿತವಾಗಿ ಸರ್ಕಾರ ಸಲಕರಣೆಗಳನ್ನು ನೀಡುತ್ತಿದೆ’ ಎಂದರು.</p>.<p>ಸಂತೋಷ ಪಾಟೀಲ, ನಾಗಭೂಷಣ ಸಂಗಮ್, ಗೌತಮ್ ಸೇಡೋಳ, ನಾರಾಯಣ ರೆಡ್ಡಿ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್</strong>: ‘ಸರ್ಕಾರಿ ಸೌಲಭ್ಯಗಳ ಲಾಭ ಪಡೆದು ಆರ್ಥಿಕವಾಗಿ ಸದೃಢರಾಗಬೇಕು’ ಎಂದು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಹೇಳಿದರು.</p>.<p>ಪಟ್ಟಣದ ಶಾಸಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 9 ಫಲಾನುಭವಿಗಳಿಗೆ ಪಂಪ್ಸೆಟ್ ವಿತರಿಸಿ ಮಾತನಾಡಿದರು.</p>.<p>‘ಸಾವಿರಾರು ರೂಪಾಯಿ ನೀಡಿ ಪಂಪ್, ಮೋಟಾರ್ ಮತ್ತು ಪೈಪ್ಗಳನ್ನು ಕೊಂಡುಕೊಳ್ಳಲಾಗದ ಬಡ ರೈತರನ್ನು ಗುರುತಿಸಿ ಪ್ರತಿವರ್ಷ ಉಚಿತವಾಗಿ ಸರ್ಕಾರ ಸಲಕರಣೆಗಳನ್ನು ನೀಡುತ್ತಿದೆ’ ಎಂದರು.</p>.<p>ಸಂತೋಷ ಪಾಟೀಲ, ನಾಗಭೂಷಣ ಸಂಗಮ್, ಗೌತಮ್ ಸೇಡೋಳ, ನಾರಾಯಣ ರೆಡ್ಡಿ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>