ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್ ಜಿಲ್ಲಾಧಿಕಾರಿ ರಾಮಚಂದ್ರನ್‌ಗೆ ಕೋವಿಡ್‌ ಸೋಂಕು

ಜಿಲ್ಲೆಯ 56 ಮಂದಿಗೆ ಕೋವಿಡ್‌ ವೈರಾಣು ದೃಢ
Last Updated 3 ಸೆಪ್ಟೆಂಬರ್ 2020, 14:59 IST
ಅಕ್ಷರ ಗಾತ್ರ

ಬೀದರ್: ಜಿಲ್ಲಾಧಿಕಾರಿ ರಾಮಚಂದ್ರನ್ ಅವರಿಗೆ ಕೋವಿಡ್‌ ಸೋಂಕು ತಗುಲಿದೆ. ನಾಲ್ಕು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರು ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡಾಗ ಸೋಂಕು ತಗುಲಿರುವುದು ದೃಢಪಟ್ಟಿದೆ.

ರಾಮಚಂದ್ರನ್ ಅವರು ಮೂರು ತಿಂಗಳಿಂದ ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣ ಹಾಗೂ ಸೋಂಕಿತರಿಗೆ ಉತ್ತಮ ಚಿಕಿತ್ಸೆ ದೊರಕಿಸಿಕೊಡುವಲ್ಲಿ ನಿರಂತವಾಗಿ ಶ್ರಮಿಸುತ್ತಿದ್ದಾರೆ. ಜಿಲ್ಲಾ ಆಡಳಿತದ ಎಲ್ಲ ಕಾರ್ಯಗಳನ್ನು ಸಹ ಜನಹಿತದಿಂದ ಸುಗಮವಾಗಿ ನಡೆಸಲು ಅವಿರತ ಪ್ರಯತ್ನ ನಡೆಸಿದ್ದಾರೆ. ಯಾರ ಸಂಪರ್ಕದಿಂದ ಸೋಂಕು ತಗುಲಿದೆ ತಿಳಿದಿಲ್ಲ. ಅವರ ಆರೋಗ್ಯದಲ್ಲಿ ಸಮಸ್ಯೆ ಇಲ್ಲ.‌ ಬ್ರಿಮ್ಸ್ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಗುರುವಾರ ಒಂದೇ ದಿನ 56 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕೋವಿಡ್ ವೈರಾಣು ಪೀಡಿತರ ಸಂಖ್ಯೆ 4721ಕ್ಕೆ ತಲುಪಿದೆ. 460 ಪ್ರಕರಣಗಳು ಸಕ್ರಿಯವಾಗಿವೆ. ಕೋವಿಡ್ ಆಸ್ಪತ್ರೆಯಿಂದ 95 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಈವರೆಗೆ 4121 ಮಂದಿ ಬಿಡುಗಡೆ ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT