<p><strong>ಬೀದರ್</strong>: ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಫೆ.22ರಂದು ಕಮಲನಗರ ತಾಲ್ಲೂಕಿನ ಸಂಗಮ ಗ್ರಾಮದಲ್ಲಿ ವಾಸ್ತವ್ಯ ಮಾಡಲು ನಿರ್ಧರಿಸಿದ್ದಾರೆ.</p>.<p>ಕಂದಾಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಕಾರ್ಯ ಸೂಚಿಗಳನ್ವಯ ಫಲಾನುಭವಿಗಳಿಂದ ಅರ್ಜಿಗಳನ್ನು ಸಂಗ್ರಹಿಸಿ ಅರ್ಜಿಗಳ ಮೇಲೆ ಯಾವ ಹಂತದಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎನ್ನುವ ಮಾಹಿತಿ ಸಂಗ್ರಹಿಸಲಿದ್ದಾರೆ.</p>.<p>ಎಲ್ಲ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಗ್ರಾಮದಲ್ಲಿ ಹಾಜರಾಗಿ ಜನರ ಕುಂದು ಕೊರತೆಗಳನ್ನು ಪರಿಹರಿಸಬೇಕು ಎಂದು ಸೂಚನೆ ನೀಡಲಾಗಿದೆ. ತಾಲ್ಲೂಕು ಮಟ್ಟದ ಅಧಿಕಾರಿಗಳಿಗೂ ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಹಾಜರಿರುವಂತೆ ಸೂಚನೆ ನೀಡಲಾಗಿದೆ.</p>.<p>ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಫೆ.20ರಂದು ಜಿಲ್ಲಾಧಿಕಾರಿಗಳು ವಾಸ್ತವ್ಯ ಮಾಡುತ್ತಿದ್ದಾರೆ. ಆದರೆ, ಫೆ.20 ರಂದು ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಬೀದರ್ ಜಿಲ್ಲೆಗೆ ಭೇಟಿ ನೀಡುತ್ತಿರುವ ಕಾರಣ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಫೆ.22ಕ್ಕೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಫೆ.22ರಂದು ಕಮಲನಗರ ತಾಲ್ಲೂಕಿನ ಸಂಗಮ ಗ್ರಾಮದಲ್ಲಿ ವಾಸ್ತವ್ಯ ಮಾಡಲು ನಿರ್ಧರಿಸಿದ್ದಾರೆ.</p>.<p>ಕಂದಾಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಕಾರ್ಯ ಸೂಚಿಗಳನ್ವಯ ಫಲಾನುಭವಿಗಳಿಂದ ಅರ್ಜಿಗಳನ್ನು ಸಂಗ್ರಹಿಸಿ ಅರ್ಜಿಗಳ ಮೇಲೆ ಯಾವ ಹಂತದಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎನ್ನುವ ಮಾಹಿತಿ ಸಂಗ್ರಹಿಸಲಿದ್ದಾರೆ.</p>.<p>ಎಲ್ಲ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಗ್ರಾಮದಲ್ಲಿ ಹಾಜರಾಗಿ ಜನರ ಕುಂದು ಕೊರತೆಗಳನ್ನು ಪರಿಹರಿಸಬೇಕು ಎಂದು ಸೂಚನೆ ನೀಡಲಾಗಿದೆ. ತಾಲ್ಲೂಕು ಮಟ್ಟದ ಅಧಿಕಾರಿಗಳಿಗೂ ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಹಾಜರಿರುವಂತೆ ಸೂಚನೆ ನೀಡಲಾಗಿದೆ.</p>.<p>ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಫೆ.20ರಂದು ಜಿಲ್ಲಾಧಿಕಾರಿಗಳು ವಾಸ್ತವ್ಯ ಮಾಡುತ್ತಿದ್ದಾರೆ. ಆದರೆ, ಫೆ.20 ರಂದು ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಬೀದರ್ ಜಿಲ್ಲೆಗೆ ಭೇಟಿ ನೀಡುತ್ತಿರುವ ಕಾರಣ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಫೆ.22ಕ್ಕೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>