ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾಮಟ್ಟದ ಕ್ರೀಡಾಕೂಟ ಇಂದಿನಿಂದ

ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ
Last Updated 11 ಫೆಬ್ರುವರಿ 2021, 15:31 IST
ಅಕ್ಷರ ಗಾತ್ರ

ಬೀದರ್: ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಫೆಬ್ರುವರಿ 12 ಮತ್ತು 13 ರಂದು ನಗರದಲ್ಲಿ ನಡೆಯಲಿವೆ.

12ರಂದು ಬೆಳಿಗ್ಗೆ 11ಕ್ಕೆ ನಗರದ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡು ವರು. ಶಾಸಕ ರಹೀಂ ಖಾನ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಿರ್ಮಲಾ ಮಾನೆಗೋಪಾಳೆ ಕ್ರೀಡಾ ಜ್ಯೋತಿ ಸ್ವೀಕರಿಸುವರು.

ಸಂಸದ ಭಗವಂತ ಖೂಬಾ, ಶಾಸಕರಾದ ರಾಜಶೇಖರ ಪಾಟೀಲ, ಈಶ್ವರ ಖಂಡ್ರೆ, ಬಂಡೆಪ್ಪ ಕಾಶೆಂಪೂರ್, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ್ ಮಲ್ಕಾಪುರೆ, ವಿಜಯಸಿಂಗ್, ಅರವಿಂದಕುಮಾರ ಅರಳಿ, ಚಂದ್ರಶೇಖರ ಪಾಟೀಲ, ಶಶೀಲ್ ಜಿ. ನಮೋಶಿ, ರಾಜ್ಯ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ವಿಜಯಕುಮಾರ ಅಣ್ಣೆಪ್ಪ ಪಾಟೀಲ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಜಿಲ್ಲಾ ಪಂಚಾಯಿತಿ ಸಿಇಒ ಗ್ಯಾನೇಂದ್ರಕುಮಾರ ಗಂಗ್ವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್. ಉಪಸ್ಥಿತರಿರುವರು.

13ರಂದು ಸಂಜೆ 4ಕ್ಕೆ ಸಮಾರೋಪ ಹಾಗೂ ಬಹುಮಾನ ವಿತರಣೆ ಸಮಾರಂಭ ನಡೆಯಲಿದೆ. ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಉಷಾ ರಾಜೇಂದ್ರ ನಿಟ್ಟೂರಕರ್ ಬಹುಮಾನ ವಿತರಿಸುವರು. ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಅಧ್ಯಕ್ಷತೆ ವಹಿಸುವರು. ವಿವಿಧ ಇಲಾಖೆಗಳ ಅಧಿಕಾರಿಗಳು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT