<p><strong>ಬೀದರ್:</strong> ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ನಗದು ಬಹುಮಾನ ವಿತರಿಸಲಿದ್ದಾರೆ.</p>.<p>‘ಜಿಲ್ಲಾ ಟಾಪರ್ಗಳಿಗೆ ಪ್ರಥಮ ಬಹುಮಾನವಾಗಿ ₹ 11 ಸಾವಿರ, ದ್ವಿತೀಯ ಬಹುಮಾನ ₹ 7 ಸಾವಿರ ಹಾಗೂ ತೃತೀಯ ಬಹುಮಾನ ₹ 5 ಸಾವಿರ, ತಾಲ್ಲೂಕು ಟಾಪರ್ಸ್ಗಳಿಗೆ ಪ್ರಥಮ ಬಹುಮಾನವಾಗಿ ₹ 7 ಸಾವಿರ, ದ್ವಿತೀಯ ಬಹುಮಾನ ₹ 5 ಸಾವಿರ ಹಾಗೂ ತೃತಿಯ ಬಹುಮಾನ ₹ 2,500 ತಮ್ಮ ಸಂಬಳದಿಂದ ನಗದು ರೂಪದಲ್ಲಿ ನೀಡಿ, ಶಾಲು ಮತ್ತು ಫಲಪುಷ್ಪಗಳಿಂದ ಸನ್ಮಾನಿಸಲಾಗುವುದು’ ಎಂದು ಪ್ರಭು ಚವಾಣ್ ಘೋಷಣೆ ಮಾಡಿದ್ದಾರೆ.</p>.<p>‘ಹಿಂದೆ ಶಾಸಕರಾಗಿದ್ದಾಗ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ವೃದ್ಧಿಸಿ, ಫಲಿತಾಂಶ ಸುಧಾರಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ತಾಲ್ಲೂಕು ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಿ ಹೆಚ್ಚು ಅಂಕಗಳಿಸುವ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸುತ್ತ ಬಂದಿದ್ದೇನೆ. ಜಿಲ್ಲೆಯ ಮಹಾಜನತೆಯ ಆಶೀರ್ವಾದಿಂದ ಸಚಿವ ಸ್ಥಾನ ಸಿಕ್ಕಿರುವುದರಿಂದ ಈ ಬಾರಿ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲು ನಿರ್ಧರಿಸಿದ್ದೇನೆ’ ಎಂದು ಸಚಿವರು ತಿಳಿಸಿದ್ದಾರೆ.</p>.<p>‘ಮುಂದಿನ ದಿನಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳ ಪಾಲಕರಿಗೂ ಸನ್ಮಾನಿಸುವ ಯೋಜನೆ ರೂಪಿಸಿದ್ದೇನೆ’ ಎಂದು<br />ಹೇಳಿದ್ದಾರೆ.</p>.<p class="Subhead">ವಿದ್ಯಾರ್ಥಿಗಳ ಸಾಧನೆಗೆ ಹರ್ಷ: ಕೋವಿಡ್ ಸೋಂಕು ಭೀತಿಯ ನಡುವೆಯೂ ಜಿಲ್ಲೆಯ ವಿದ್ಯಾರ್ಥಿಗಳು ಸುರಕ್ಷತೆಯಿಂದ ಪರೀಕ್ಷೆ ಎದುರಿಸಿ ಹಿಂದೆಂದಿಗಿಂತಲೂ ಉತ್ತಮ ಸಾಧನೆ ತೋರಿಸಿ ಇತರರಿಗೆ ಮಾದರಿಯಾಗಿದ್ದಾರೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಫಲಿತಾಂಶದಲ್ಲಿ ಪ್ರತಿ ಸಲ ಕಡೆಯ ಸ್ಥಾನದಲ್ಲಿರುತ್ತಿದ್ದ ಜಿಲ್ಲೆಯು ಈ ಬಾರಿ ಸುಧಾರಣೆ ಕಂಡಿದೆ. ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯು 29ರಿಂದ 24ನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಪಿಯುಸಿಯಲ್ಲಿಯೂ ಈ ವರ್ಷ ಹದಿನೆಂಟನೇಯ ಸ್ಥಾನಕ್ಕೇರಿರುವುದು ಸಂತಸದ ಸಂಗತಿ’ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.</p>.<p class="Subhead"><strong>ಅಧಿಕಾರಿಗಳಿಗೆ ಸೂಚನೆ:</strong> ‘ಈ ಬಾರಿಯ ಫಲಿತಾಂಶ ಇನ್ನು ಹೆಚ್ಚಿನ ಸ್ಥಾನ ಬರಬಹುದೆಂಬ ನಿರೀಕ್ಷೆ ಹೊಂದಿದ್ದೆ. ಆದರೂ ಆಶಾದಾಯಕ ಫಲಿತಾಂಶ ಬಂದಿದೆ. ಮುಂದಿನ ದಿನಗಳಲ್ಲಿ ಬೀದರ ಜಿಲ್ಲೆಯು ಟಾಪ್ 10 ಜಿಲ್ಲೆಗಳ ಪಟ್ಟಿಯಲ್ಲಿ ಇರಬೇಕು ಎನ್ನುವ ಸದಾಶಯ ಹೊಂದಿದ್ದೇನೆ’ ಎಂದು ತಿಳಿಸಿದ್ದಾರೆ.</p>.<p>‘ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಹಾಗೂ ಇನ್ನಿತರ ಅಧಿಕಾರಿಗಳು ಇನ್ನಷ್ಟು ಚುರುಕಾಗಿ ಕರ್ತವ್ಯ ನಿರ್ವಹಿಸಬೇಕು’ ಎಂದು ಸಚಿವರು ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ನಗದು ಬಹುಮಾನ ವಿತರಿಸಲಿದ್ದಾರೆ.</p>.<p>‘ಜಿಲ್ಲಾ ಟಾಪರ್ಗಳಿಗೆ ಪ್ರಥಮ ಬಹುಮಾನವಾಗಿ ₹ 11 ಸಾವಿರ, ದ್ವಿತೀಯ ಬಹುಮಾನ ₹ 7 ಸಾವಿರ ಹಾಗೂ ತೃತೀಯ ಬಹುಮಾನ ₹ 5 ಸಾವಿರ, ತಾಲ್ಲೂಕು ಟಾಪರ್ಸ್ಗಳಿಗೆ ಪ್ರಥಮ ಬಹುಮಾನವಾಗಿ ₹ 7 ಸಾವಿರ, ದ್ವಿತೀಯ ಬಹುಮಾನ ₹ 5 ಸಾವಿರ ಹಾಗೂ ತೃತಿಯ ಬಹುಮಾನ ₹ 2,500 ತಮ್ಮ ಸಂಬಳದಿಂದ ನಗದು ರೂಪದಲ್ಲಿ ನೀಡಿ, ಶಾಲು ಮತ್ತು ಫಲಪುಷ್ಪಗಳಿಂದ ಸನ್ಮಾನಿಸಲಾಗುವುದು’ ಎಂದು ಪ್ರಭು ಚವಾಣ್ ಘೋಷಣೆ ಮಾಡಿದ್ದಾರೆ.</p>.<p>‘ಹಿಂದೆ ಶಾಸಕರಾಗಿದ್ದಾಗ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ವೃದ್ಧಿಸಿ, ಫಲಿತಾಂಶ ಸುಧಾರಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ತಾಲ್ಲೂಕು ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಿ ಹೆಚ್ಚು ಅಂಕಗಳಿಸುವ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸುತ್ತ ಬಂದಿದ್ದೇನೆ. ಜಿಲ್ಲೆಯ ಮಹಾಜನತೆಯ ಆಶೀರ್ವಾದಿಂದ ಸಚಿವ ಸ್ಥಾನ ಸಿಕ್ಕಿರುವುದರಿಂದ ಈ ಬಾರಿ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲು ನಿರ್ಧರಿಸಿದ್ದೇನೆ’ ಎಂದು ಸಚಿವರು ತಿಳಿಸಿದ್ದಾರೆ.</p>.<p>‘ಮುಂದಿನ ದಿನಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳ ಪಾಲಕರಿಗೂ ಸನ್ಮಾನಿಸುವ ಯೋಜನೆ ರೂಪಿಸಿದ್ದೇನೆ’ ಎಂದು<br />ಹೇಳಿದ್ದಾರೆ.</p>.<p class="Subhead">ವಿದ್ಯಾರ್ಥಿಗಳ ಸಾಧನೆಗೆ ಹರ್ಷ: ಕೋವಿಡ್ ಸೋಂಕು ಭೀತಿಯ ನಡುವೆಯೂ ಜಿಲ್ಲೆಯ ವಿದ್ಯಾರ್ಥಿಗಳು ಸುರಕ್ಷತೆಯಿಂದ ಪರೀಕ್ಷೆ ಎದುರಿಸಿ ಹಿಂದೆಂದಿಗಿಂತಲೂ ಉತ್ತಮ ಸಾಧನೆ ತೋರಿಸಿ ಇತರರಿಗೆ ಮಾದರಿಯಾಗಿದ್ದಾರೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಫಲಿತಾಂಶದಲ್ಲಿ ಪ್ರತಿ ಸಲ ಕಡೆಯ ಸ್ಥಾನದಲ್ಲಿರುತ್ತಿದ್ದ ಜಿಲ್ಲೆಯು ಈ ಬಾರಿ ಸುಧಾರಣೆ ಕಂಡಿದೆ. ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯು 29ರಿಂದ 24ನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಪಿಯುಸಿಯಲ್ಲಿಯೂ ಈ ವರ್ಷ ಹದಿನೆಂಟನೇಯ ಸ್ಥಾನಕ್ಕೇರಿರುವುದು ಸಂತಸದ ಸಂಗತಿ’ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.</p>.<p class="Subhead"><strong>ಅಧಿಕಾರಿಗಳಿಗೆ ಸೂಚನೆ:</strong> ‘ಈ ಬಾರಿಯ ಫಲಿತಾಂಶ ಇನ್ನು ಹೆಚ್ಚಿನ ಸ್ಥಾನ ಬರಬಹುದೆಂಬ ನಿರೀಕ್ಷೆ ಹೊಂದಿದ್ದೆ. ಆದರೂ ಆಶಾದಾಯಕ ಫಲಿತಾಂಶ ಬಂದಿದೆ. ಮುಂದಿನ ದಿನಗಳಲ್ಲಿ ಬೀದರ ಜಿಲ್ಲೆಯು ಟಾಪ್ 10 ಜಿಲ್ಲೆಗಳ ಪಟ್ಟಿಯಲ್ಲಿ ಇರಬೇಕು ಎನ್ನುವ ಸದಾಶಯ ಹೊಂದಿದ್ದೇನೆ’ ಎಂದು ತಿಳಿಸಿದ್ದಾರೆ.</p>.<p>‘ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಹಾಗೂ ಇನ್ನಿತರ ಅಧಿಕಾರಿಗಳು ಇನ್ನಷ್ಟು ಚುರುಕಾಗಿ ಕರ್ತವ್ಯ ನಿರ್ವಹಿಸಬೇಕು’ ಎಂದು ಸಚಿವರು ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>