‘ಲಿಂಗಾಯತರಿಗೆ ನೋವಾಗುವ ರೀತಿಯಲ್ಲಿ ಹೇಳಿಕೆ ನೀಡಿರುವ ಡಿ.ಕೆ. ಶಿವಕುಮಾರ ಅವರು ತಕ್ಷಣ ಲಿಂಗಾಯತರಲ್ಲಿ ಕ್ಷಮೆ ಯಾಚಿಸಬೇಕು’ ಎಂದು ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಚನ್ನಬಸವಾನಂದ ಸ್ವಾಮೀಜಿ, ಉಪಾಧ್ಯಕ್ಷ ಶಿವರಾಜ್ ಪಾಟೀಲ ಅತಿವಾಳ, ಲಿಂಗಾಯತ ಸಮನ್ವಯ ಸಮಿತಿಯ ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ ಆಗ್ರಹಿಸಿದ್ದಾರೆ.
‘ನ್ಯಾಯಮೂರ್ತಿ ನಾಗಮೋಹನದಾಸ ನೇತೃತ್ವದ ತಜ್ಞರ ಸಮಿತಿಯು ರಾಜ್ಯ ಸರ್ಕಾರಕ್ಕೆ ವಿಸ್ತೃತವಾದ ವರದಿ ನೀಡಿತ್ತು. ಅದನ್ನು ಆಧರಿಸಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಂಡು ಕೇಂದ್ರಕ್ಕೆ ಶಿಫಾರಸು ಮಾಡಿದ್ದಾರೆ. ಆ ಸಭೆಯಲ್ಲಿ ಮೌನವಾಗಿದ್ದ ಸಚಿವರು ರಂಭಾಪುರಿ ಶ್ರೀಗಳ ವೇದಿಕೆಯಲ್ಲಿ ಕ್ಷಮೆಯಾಚಿಸಿ ಲಿಂಗಾಯತ ಧರ್ಮಕ್ಕೆ ದ್ರೋಹ ಬಗೆದಿದ್ದಾರೆ’ ಎಂದು ಟೀಕಿಸಿದ್ದಾರೆ.