<p><strong>ಬೀದರ್:</strong> ಜಿಲ್ಲೆಯ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳ ಮೇಲೆ ಕನ್ನಡದಲ್ಲಿ ನಾಮಫಲಕ ಅಳವಡಿಸಲು ಹಾಗೂ ರೋಗಿಗಳೊಂದಿಗೆ ವೈದ್ಯರು ಕನ್ನಡದಲ್ಲೇ ವ್ಯವಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವಿ.ಜಿ. ರೆಡ್ಡಿ ಭರವಸೆ ನೀಡಿದರು.</p>.<p>ವೈದ್ಯಕೀಯ ವಲಯದಲ್ಲಿ ಕನ್ನಡ ಬಳಕೆ ಅಭಿಯಾನ ಪ್ರಯುಕ್ತ ನಗರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯರು ಸಲ್ಲಿಸಿದ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಈಗಾಗಲೇ ಸರ್ಕಾರದಿಂದ ಈ ಕುರಿತ ಸುತ್ತೋಲೆ ಬಂದಿದೆ ಎಂದು ತಿಳಿಸಿದರು.</p>.<p>ವೈದ್ಯಕೀಯ ಸಿಬ್ಬಂದಿ ಕನ್ನಡ ಕಲಿತರೆ ರೋಗಿಯೊಂದಿಗೆ ಸಂವಹನ ಸುಲಭವಾಗುತ್ತದೆ. ಹೀಗಾಗಿ ವೈದ್ಯಕೀಯ ವಲಯದಲ್ಲಿ ಕನ್ನಡ ಬಳಕೆ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಸದಸ್ಯರು ತಿಳಿಸಿದರು.</p>.<p>ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯರಾದ ವಿಜಯಕುಮಾರ ಸೋನಾರೆ, ಎಂ.ಪಿ. ಮುದಾಳೆ, ಕನ್ನಡಪರ ಸಂಘಟನೆಗಳ ಮುಖಂಡರಾದ ಶ್ರೀಮಂತ ಸಪಾಟೆ, ಸುನೀಲ್ ಭಾವಿಕಟ್ಟಿ, ರವಿ ಕಾಂಬಳೆ, ಚಂದ್ರಕಾಂತ ಹಳ್ಳಿಖೇಡಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಜಿಲ್ಲೆಯ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳ ಮೇಲೆ ಕನ್ನಡದಲ್ಲಿ ನಾಮಫಲಕ ಅಳವಡಿಸಲು ಹಾಗೂ ರೋಗಿಗಳೊಂದಿಗೆ ವೈದ್ಯರು ಕನ್ನಡದಲ್ಲೇ ವ್ಯವಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವಿ.ಜಿ. ರೆಡ್ಡಿ ಭರವಸೆ ನೀಡಿದರು.</p>.<p>ವೈದ್ಯಕೀಯ ವಲಯದಲ್ಲಿ ಕನ್ನಡ ಬಳಕೆ ಅಭಿಯಾನ ಪ್ರಯುಕ್ತ ನಗರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯರು ಸಲ್ಲಿಸಿದ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಈಗಾಗಲೇ ಸರ್ಕಾರದಿಂದ ಈ ಕುರಿತ ಸುತ್ತೋಲೆ ಬಂದಿದೆ ಎಂದು ತಿಳಿಸಿದರು.</p>.<p>ವೈದ್ಯಕೀಯ ಸಿಬ್ಬಂದಿ ಕನ್ನಡ ಕಲಿತರೆ ರೋಗಿಯೊಂದಿಗೆ ಸಂವಹನ ಸುಲಭವಾಗುತ್ತದೆ. ಹೀಗಾಗಿ ವೈದ್ಯಕೀಯ ವಲಯದಲ್ಲಿ ಕನ್ನಡ ಬಳಕೆ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಸದಸ್ಯರು ತಿಳಿಸಿದರು.</p>.<p>ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯರಾದ ವಿಜಯಕುಮಾರ ಸೋನಾರೆ, ಎಂ.ಪಿ. ಮುದಾಳೆ, ಕನ್ನಡಪರ ಸಂಘಟನೆಗಳ ಮುಖಂಡರಾದ ಶ್ರೀಮಂತ ಸಪಾಟೆ, ಸುನೀಲ್ ಭಾವಿಕಟ್ಟಿ, ರವಿ ಕಾಂಬಳೆ, ಚಂದ್ರಕಾಂತ ಹಳ್ಳಿಖೇಡಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>