‘ಚುನಾವಣೆ ಪ್ರಕ್ರಿಯೆ ಸುಸೂತ್ರವಾಗಿ ನಡೆಯಲು ಎಲ್ಲ ಮತಗಟ್ಟೆ ಕೇಂದ್ರಗಳಿಗೆ ಅಗತ್ಯ ಭದ್ರತೆ ಒದಗಿಸಲಾಗಿದೆ. ಗೊಂದಲಗಳಿಗೆ ಆಸ್ಪದವಾಗದಂತೆ ತಮ್ಮ ಹೊಣೆಗಾರಿಕೆಯನ್ನು ಮುಂಚಿತವಾಗಿ ತಿಳಿದುಕೊಳ್ಳಬೇಕು. ಕರ್ತವ್ಯದ ವೇಳೆ ಯಾವುದೇ ರೀತಿಯ ತೊಡಕುಗಳು ಉಂಟಾದಲ್ಲಿ ತಕ್ಷಣ ಮೇಲಧಿಕಾರಿಗಳನ್ನು ಸಂಪರ್ಕಿಸಿ ಪರಿಹಾರ ಕಂಡುಕೊಳ್ಳಬೇಕು’ ಎಂದು ತಿಳಿಸಿದರು.
ಜಿಲ್ಲಾ ಚುನಾವಣಾ ಮಾಸ್ಟರ್ ಟ್ರೇನರ್ ಡಾ.ಗೌತಮ ಅರಳಿ ಅವರು ಮತಗಟ್ಟೆ ಕೇಂದ್ರಗಳ ತಯಾರಿ, ಎಲೆಕ್ಟ್ರಾನಿಕ್ ಮತಯಂತ್ರಗಳ ಜೋಡಿಸುವಿಕೆ, ನಿರ್ವಹಣೆ, ಮತಗಟ್ಟೆ ಅಧಿಕಾರಿಗಳ ಹೊಣೆಗಾರಿಕೆಗಳ ಬಗ್ಗೆ ವಿವರಣೆ ನೀಡಿದರು.