ಬೀದರ್: ಕಲ್ಯಾಣ ಕರ್ನಾಟಕ ಪ್ರದೇಶದ ಅಚ್ಚುಕಟ್ಟು ಪ್ರದೇಶಾಭಿವೃದ್ಧಿಯ ಯಾದಗಿರಿ ಜಿಲ್ಲೆಯ ಹಸನಾಪುರ ವಿಭಾಗೀಯ ಕಚೇರಿ ಮತ್ತು ಭಾತಂಭ್ರಾ ಉಪ ವಿಭಾಗೀಯ ಕಚೇರಿಗಳನ್ನು ಬಾಗಲಕೋಟೆಗೆ ಸ್ಧಳಾಂತರ ಮಾಡಿರುವುದನ್ನು ತಕ್ಷಣ ರದ್ದುಪಡಿಸಬೇಕು ಎಂದು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಒತ್ತಾಯಿಸಿದೆ.
ಬಾಗಲಕೋಟೆಗೆ ಸ್ಥಳಾಂತರ ಮಾಡಿದರೆ ಕಲ್ಯಾಣ ಕರ್ನಾಟಕದ ಜನತೆಗೆ 371ನೇ(ಜೆ) ಅಡಿಯಲ್ಲಿ ಲಾಭ ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ. ನೇಮಕಾತಿಯಲ್ಲೂ ಅನ್ಯಾಯವಾಗಲಿದೆ ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ಸಮಿತಿ ಜಿಲ್ಲಾ ಘಟಕದ ಅನಂತರೆಡ್ಡಿ ಟಿ. ಮಿರ್ಜಾಪೂರ ತಿಳಿಸಿದ್ದಾರೆ.
ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಹಾಗೂ ಈ ಭಾಗದ ಹುದ್ದೆಗಳನ್ನು ಉಳಿಸಿಕೊಳ್ಳಲು ಸರ್ಕಾರ ಕಚೇರಿಗಳ ಸ್ಥಳಾಂತರ ಆದೇಶ ರದ್ದುಪಡಿಸಬೇಕು. ಈಗಿರುವ ಸ್ಥಳಗಳಲ್ಲೇ ಮುಂದವರಿಸಬೇಕು ಎಂದು ಅನಂತರೆಡ್ಡಿ ಟಿ. ಮಿರ್ಜಾಪೂರ ಆಗ್ರಹಿಸಿದ್ದಾರೆ.