<p><strong>ಬೀದರ್</strong>: ಮಾನವ ಜನ್ಮ ಬಹಳ ಅಮೂಲ್ಯವಾದದ್ದು. ಅದನ್ನು ವ್ಯರ್ಥ ಮಾಡಿಕೊಳ್ಳಬಾರದು ಎಂದು ಜಹೀರಾಬಾದ್ ತಾಲ್ಲೂಕಿನ ಮಲ್ಲಯ್ಯಗಿರಿ ಹಾಗೂ ದೇಗಲಮಡಿ ಆಶ್ರಮದ ಪೀಠಾಧಿಪತಿ ಬಸವಲಿಂಗ ಅವಧೂತರು ಹೇಳಿದರು.</p>.<p>ಬೀದರ್ ತಾಲ್ಲೂಕಿನ ನಾಗೂರ ಗ್ರಾಮದ ಹನುಮಾನ ಮಂದಿರದಲ್ಲಿ ಆಯೋಜಿಸಿದ್ದ ಹನುಮಾನ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಒಳ್ಳೆಯ ನಡೆ, ನುಡಿ, ದೇವರ ಸ್ಮರಣೆ, ಪೂಜೆ, ಪ್ರಾರ್ಥನೆ ಮೂಲಕ ಬದುಕು ಸಾರ್ಥಕ ಮಾಡಿಕೊಳ್ಳಬೇಕು ಎಂದು ನುಡಿದರು.</p>.<p>ಹೃದಯ ವೈಶಾಲ್ಯತೆ ಬೆಳೆಸಿಕೊಳ್ಳಬೇಕು. ಕೈಲಾದ ಪರೋಪಕಾರದ ಕಾರ್ಯಗಳನ್ನು ಮಾಡಬೇಕು. ಅತ್ತೆ-ಸೊಸೆ ತಾಯಿ-ಮಕ್ಕಳಂತೆ ಇರಬೇಕು. ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಬೇಕು ಎಂದು ಹೇಳಿದರು.</p>.<p>ಸರಳ, ಸಹಜ ಬದುಕು ನಡೆಸಬೇಕು. ಅನೇಕ ಆರೋಗ್ಯ ಸಮಸ್ಯೆಗಳಿಗೆ ಇಂದಿನ ಆಹಾರ ಪದ್ಧತಿಯೇ ಕಾರಣವಾಗಿದೆ. ಹೀಗಾಗಿ ದೇಸಿ ಆಹಾರ ಪದ್ಧತಿಯನ್ನು ಅನುಸರಿಸಬೇಕು ಎಂದು ತಿಳಿಸಿದರು.</p>.<p>ಆಧ್ಯಾತ್ಮದಿಂದ ನೆಮ್ಮದಿಯ ಬದುಕು ಸಾಧ್ಯವಿದೆ. ಹೀಗಾಗಿ ಗ್ರಾಮೀಣ ಭಾಗದಲ್ಲಿ ಭಜನೆ, ಕೀರ್ತನೆ, ಪ್ರವಚನ ಸೇರಿದಂತೆ ಆಧ್ಯಾತ್ಮಿಕ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯಬೇಕು ಎಂದರು.</p>.<p>ನಿವೃತ್ತ ಮುಖ್ಯಶಿಕ್ಷಕ ಸಿದ್ಧಾರೆಡ್ಡಿ ನಾಗೂರಾ, ಶಿವಕುಮಾರ ಪಾಪಣ್ಣ, ವೆಂಕಟರೆಡ್ಡಿ ಮರಿ, ರಾಜರೆಡ್ಡಿ ರಾಮರೆಡ್ಡಿ, ಕೇಶಪ್ಪ ಚಟ್ನಳ್ಳಿಕರ್, ಸುಭಾಷ್ ಪೊಲೀಸ್ ಪಾಟೀಲ ಯಾಕತಪುರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಮಾನವ ಜನ್ಮ ಬಹಳ ಅಮೂಲ್ಯವಾದದ್ದು. ಅದನ್ನು ವ್ಯರ್ಥ ಮಾಡಿಕೊಳ್ಳಬಾರದು ಎಂದು ಜಹೀರಾಬಾದ್ ತಾಲ್ಲೂಕಿನ ಮಲ್ಲಯ್ಯಗಿರಿ ಹಾಗೂ ದೇಗಲಮಡಿ ಆಶ್ರಮದ ಪೀಠಾಧಿಪತಿ ಬಸವಲಿಂಗ ಅವಧೂತರು ಹೇಳಿದರು.</p>.<p>ಬೀದರ್ ತಾಲ್ಲೂಕಿನ ನಾಗೂರ ಗ್ರಾಮದ ಹನುಮಾನ ಮಂದಿರದಲ್ಲಿ ಆಯೋಜಿಸಿದ್ದ ಹನುಮಾನ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಒಳ್ಳೆಯ ನಡೆ, ನುಡಿ, ದೇವರ ಸ್ಮರಣೆ, ಪೂಜೆ, ಪ್ರಾರ್ಥನೆ ಮೂಲಕ ಬದುಕು ಸಾರ್ಥಕ ಮಾಡಿಕೊಳ್ಳಬೇಕು ಎಂದು ನುಡಿದರು.</p>.<p>ಹೃದಯ ವೈಶಾಲ್ಯತೆ ಬೆಳೆಸಿಕೊಳ್ಳಬೇಕು. ಕೈಲಾದ ಪರೋಪಕಾರದ ಕಾರ್ಯಗಳನ್ನು ಮಾಡಬೇಕು. ಅತ್ತೆ-ಸೊಸೆ ತಾಯಿ-ಮಕ್ಕಳಂತೆ ಇರಬೇಕು. ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಬೇಕು ಎಂದು ಹೇಳಿದರು.</p>.<p>ಸರಳ, ಸಹಜ ಬದುಕು ನಡೆಸಬೇಕು. ಅನೇಕ ಆರೋಗ್ಯ ಸಮಸ್ಯೆಗಳಿಗೆ ಇಂದಿನ ಆಹಾರ ಪದ್ಧತಿಯೇ ಕಾರಣವಾಗಿದೆ. ಹೀಗಾಗಿ ದೇಸಿ ಆಹಾರ ಪದ್ಧತಿಯನ್ನು ಅನುಸರಿಸಬೇಕು ಎಂದು ತಿಳಿಸಿದರು.</p>.<p>ಆಧ್ಯಾತ್ಮದಿಂದ ನೆಮ್ಮದಿಯ ಬದುಕು ಸಾಧ್ಯವಿದೆ. ಹೀಗಾಗಿ ಗ್ರಾಮೀಣ ಭಾಗದಲ್ಲಿ ಭಜನೆ, ಕೀರ್ತನೆ, ಪ್ರವಚನ ಸೇರಿದಂತೆ ಆಧ್ಯಾತ್ಮಿಕ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯಬೇಕು ಎಂದರು.</p>.<p>ನಿವೃತ್ತ ಮುಖ್ಯಶಿಕ್ಷಕ ಸಿದ್ಧಾರೆಡ್ಡಿ ನಾಗೂರಾ, ಶಿವಕುಮಾರ ಪಾಪಣ್ಣ, ವೆಂಕಟರೆಡ್ಡಿ ಮರಿ, ರಾಜರೆಡ್ಡಿ ರಾಮರೆಡ್ಡಿ, ಕೇಶಪ್ಪ ಚಟ್ನಳ್ಳಿಕರ್, ಸುಭಾಷ್ ಪೊಲೀಸ್ ಪಾಟೀಲ ಯಾಕತಪುರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>