‘ಯಾದಗಿರಿ, ರಾಯಚೂರು, ಬಳ್ಳಾರಿ ಜಿಲ್ಲೆಗಳಿಗೆ ಸಚಿವ ಬಿ.ಶ್ರೀರಾಮಲು ಅವರೊಂದಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯ ಅವಲೋಕನ ನಡೆಸಿದ್ದೇನೆ. ಪ್ರವಾಹದಲ್ಲಿ ಅನೇಕರ ಬದುಕು ನುಚ್ಚು ನೂರಾಗಿರುವುದು ಕಣ್ಣಾರೆ ಕಂಡಿದ್ದೇನೆ. ಸರ್ಕಾರ ಸಂತ್ರಸ್ತರ ನೆರವಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಜನ ತೊಂದರೆಯಲ್ಲಿರುವಾಗ ಸನ್ಮಾನ, ಮೆರವಣಿಗೆ ಮಾಡಿ ಸಂಭ್ರಮಿಸುವುದು ಸರಿಯಲ್ಲ’ ಎಂದು ತಿಳಿಸಿದ್ದಾರೆ.