ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ.ಕಾವ್ಯಕಿಶೋರ್‌ಗೆ ಅತ್ಯುತ್ತಮ ಶೈಕ್ಷಣಿಕ ಸಲಹೆಗಾರ ಪ್ರಶಸ್ತಿ ಪ್ರದಾನ

Last Updated 9 ಜನವರಿ 2021, 6:40 IST
ಅಕ್ಷರ ಗಾತ್ರ

ಔರಾದ್: ಪಟ್ಟಣದ ನಿವೃತ್ತ ಶಿಕ್ಷಕ ಬಸವಣಪ್ಪ ಪಡಂಪಳ್ಳೆ ಅವರ ಪುತ್ರ ಬೆಂಗಳೂರಿನ ಆರ್.ವಿ. ಕಾಲೇಜಿನ
ಡಾ. ಕ್ಯಾವ್ಯಕಿಶೋರ್ ಅವರಿಗೆ ಪ್ರಸಕ್ತ ಸಾಲಿನ ಅತ್ಯುತ್ತಮ ಶೈಕ್ಷಣಿಕ ಸಲಹೆಗಾರ ಪ್ರಶಸ್ತಿ ಲಭಿಸಿದೆ.

ರಾಷ್ಟ್ರೀಯ ಯುಥ್‌ ಎಫರ್ಟ್‌ ಫಾರ್ ಸೂಸೈಟಿಯವರು ಶೈಕ್ಷಣಿಕ ಮತ್ತು ಸಂಶೋಧನೆ ವಿಭಾಗದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ನೀಡ ಲಾಗುವ ಈ ಪ್ರಶಸ್ತಿಗೆ ಕರ್ನಾಟಕದಿಂದ ಕಾವ್ಯಕಿಶೋರ ಆಯ್ಕೆಯಾಗಿದ್ದಾರೆ.

ಕಳೆದ 10 ವರ್ಷಗಳಿಂದ ಬೆಂಗಳೂರಿನ ಆರ್. ವಿ. ಕಾಲೇಜಿನಲ್ಲಿ ಶಿಕ್ಷಣ ಶಾಸ್ತ್ರದ ಉಪನ್ಯಾಸಕರಾಗಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯ ಸಂಶೋಧಕ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶೈಕ್ಷಣಿಕ ಮತ್ತು ಮನೋವಿಜ್ಞಾನಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಪುಸ್ತಕಗಳನ್ನು ಹೊರ ತಂದಿದ್ದಾರೆ. ಪುತ್ರನ ಈ ಸಾಧನೆಗೆ ತಾಯಿ ನಿವೃತ್ತ ಮುಖ್ಯ ಶಿಕ್ಷಕಿ ಮಹಾದೇವಿ ಪಡಂಪಳ್ಳೆ ಸಂತಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT