ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

26ಕ್ಕೆ ಡಾ.ಪಂಡಿತ ಪುಟ್ಟರಾಜ ಸಾಹಿತ್ಯೋತ್ಸವ

Last Updated 19 ಸೆಪ್ಟೆಂಬರ್ 2021, 13:11 IST
ಅಕ್ಷರ ಗಾತ್ರ


ಬೀದರ್‌: ಗಾನಯೋಗಿ ಸಂಗೀತ ಪರಿಷತ್ತಿನ ವತಿಯಿಂದ ಸೆ 26 ರಂದು ಭಾನುವಾರ ಬೆಳಿಗ್ಗೆ 11ಕ್ಕೆ ಡಾ.ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಡಾ.ಪಂಡಿತ ಪುಟ್ಟರಾಜ ಸಾಹಿತ್ಯೋತ್ಸವದ ಪೂರ್ವಭಾವಿ ಸಭೆ ಭಾನುವಾರ ನಡೆಯಿತು.

ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಂಡು ವಿವಿಧ ಸಮಿತಿಗಳ ರಚನೆ ಮಾಡಲಾಯಿತು. ಸಾಹಿತ್ಯೋತ್ಸವದ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಶಕುಂತಲಾ ಬೆಲ್ದಾಳೆ ಅವರನ್ನು ಸರ್ವಾನು ಮತದಿಂದ ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ಬಸವ ಕೇಂದ್ರದ ಅಧ್ಯಕ್ಷ ಶರಣಪ್ಪ ಮಿಠಾರೆ, ಉಪಾಧ್ಯಕ್ಷೆ ವಿದ್ಯಾವತಿ ಬಲ್ಲೂರ, ಶಿವಶಂಕರ ಟೋಕರೆ, ಗೌರವ ಕಾರ್ಯದರ್ಶಿಯಾಗಿ ಕಸಾಪ ನಿಕಟ ಪೂರ್ವ ಅಧ್ಯಕ್ಷ ಸುರೇಶ ಚೆನಶೆಟ್ಟಿ, ಗೌರವ ಕೋಶಾಧ್ಯಕ್ಷರಾಗಿ ಬಾಬುರಾವದಾನಿ ಅವರನ್ನು ಆಯ್ಕೆ ಮಾಡಲಾಯಿತು.

ಶಿವಸ್ವಾಮಿ ಚಿನಕೇರಿ, ಕಲಾವಿದ ವೈಜಿನಾಥ ಸಜ್ಜನಶೆಟ್ಟಿ, ವಿಟಿಎಸ್ ಸಂಸ್ಥಾಪಕ ಅಲ್ಲಮಪ್ರಭು ನಾವದಗೆರೆ, ಶಿವಕುಮಾರ ಸಾಲಿ, ಮಹೇಶ ಮಜಗೆ, ಆಕಾಶ ಕೋಟೆ, ಶಂಕರರಾವ ಸಜ್ಜನಶೆಟ್ಟಿ ಅವರು ಸ್ವಾಗತ ಸಮಿತಿ, ಆಹಾರ ಸಮಿತಿ, ವೇದಿಕೆ ಸಮಿತಿ, ಸಾಂಸ್ಕೃತಿಕ ಸಮಿತಿ ರಚನೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT