ಆಸ್ಪತ್ರೆಯ ಆಡಳಿತಾಧಿಕಾರಿ ಫಿಲೋಮನ್ರಾಜ್ ಪ್ರಸಾದ್ ಮಾತನಾಡಿ, ಜಿಲ್ಲೆಯ ವೈದ್ಯಕೀಯ ಕ್ಷೇತ್ರಕ್ಕೆ ಡಾ. ಸಾಲಿನ್ಸ್ ಕೊಡುಗೆ ಅಪಾರವಾಗಿದೆ. ಅವರ ಪುತ್ರಿ ಡಾ. ಸಿಬಿಲ್ ಅವರೂ ಅವರ ಮಾರ್ಗದಲ್ಲೇ ಸಾಗುತ್ತಿದ್ದಾರೆ. ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸಾ ಶಿಬಿರ ಆಯೋಜಿಸಿ ಬಡ ರೋಗಿಗಳಿಗೆ ನೆರವಾಗುತ್ತಿದ್ದಾರೆ ಎಂದು ಹೇಳಿದರು.