<p><strong>ಹುಮನಾಬಾದ್: </strong>‘ಸತತ 25 ವರ್ಷಗಳಿಂದ ಬೀದರ್ ಜಿಲ್ಲೆ ಮತ್ತು ಗ್ರಾಮೀಣ ಆರೋಗ್ಯ ಕೇಂದ್ರಗಳಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಕುಟುಂಬ ಕಲ್ಯಾಣ ಶಸ್ತ್ರ ಚಿಕಿತ್ಸೆಯನ್ನು ಡಾ.ಸಂಗೀತಾ ಹುಲಸೂರೆ ಅವರು ಕೈಗೊಂಡಿರುವುದು ಶ್ಲಾಘನೀಯವಾಗಿದೆ’ ಎಂದು ಆರೋಗ್ಯ ಇಲಾಖೆಯ ಉಪ ನಿರ್ದೇಶಕಿ ಡಾ.ಚಂದ್ರಿಕಾ ತಿಳಿಸಿದರು.</p>.<p>ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚಾರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ವಿಪತ್ತಿನಲ್ಲೂ ಕುಟುಂಬ ಯೋಜನೆ ಸೇವೆ, ಸ್ವಾವಲಂಬಿ ರಾಷ್ಟ್ರ ಮತ್ತು ಕುಟುಂಬಕ್ಕೆ ನಾಂದಿ ಎಂಬ ಘೋಷವಾಕ್ಯದೊಂದಿಗೆ ಈ ವರ್ಷ ವಿಶ್ವ ಜನಸಂಖ್ಯಾ ದಿನವನ್ನು ಆಚರಣೆ ಮಾಡಲಾಗುತ್ತಿದೆ’ ಎಂದು ಅವರು ತಿಳಿಸಿದರು.</p>.<p>ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವಶಂಕರ ಬಿ. ಮಾತನಾಡಿ, ಕುಟುಂಬ ಕಲ್ಯಾಣ ವಿವಿಧ ವಿಧಾನಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಸೂಚಿಸಿದರು.</p>.<p>ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ನಾಗನಾಥ ಹುಲಸೂರೆ, ಡಾ.ವಿ.ಬಿ.ಲಕ್ಕಾ, ಡಾ. ದಿಲೀಪ್ ಡೋಂಗ್ರೆ, ಡಾ. ವಿಶ್ವ ಸೈನೀರ್, ಡಾ. ರೋಹಿತ್ ರಘೋಜಿ, ಸುವರ್ಣಕುಮಾರಿ ಇದ್ದರು.</p>.<p>ಶಿವಕುಮಾರ ಕಂಪ್ಲಿ ಸ್ವಾಗತಿಸಿದರು. ಗೀತಾರೆಡ್ಡಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್: </strong>‘ಸತತ 25 ವರ್ಷಗಳಿಂದ ಬೀದರ್ ಜಿಲ್ಲೆ ಮತ್ತು ಗ್ರಾಮೀಣ ಆರೋಗ್ಯ ಕೇಂದ್ರಗಳಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಕುಟುಂಬ ಕಲ್ಯಾಣ ಶಸ್ತ್ರ ಚಿಕಿತ್ಸೆಯನ್ನು ಡಾ.ಸಂಗೀತಾ ಹುಲಸೂರೆ ಅವರು ಕೈಗೊಂಡಿರುವುದು ಶ್ಲಾಘನೀಯವಾಗಿದೆ’ ಎಂದು ಆರೋಗ್ಯ ಇಲಾಖೆಯ ಉಪ ನಿರ್ದೇಶಕಿ ಡಾ.ಚಂದ್ರಿಕಾ ತಿಳಿಸಿದರು.</p>.<p>ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚಾರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ವಿಪತ್ತಿನಲ್ಲೂ ಕುಟುಂಬ ಯೋಜನೆ ಸೇವೆ, ಸ್ವಾವಲಂಬಿ ರಾಷ್ಟ್ರ ಮತ್ತು ಕುಟುಂಬಕ್ಕೆ ನಾಂದಿ ಎಂಬ ಘೋಷವಾಕ್ಯದೊಂದಿಗೆ ಈ ವರ್ಷ ವಿಶ್ವ ಜನಸಂಖ್ಯಾ ದಿನವನ್ನು ಆಚರಣೆ ಮಾಡಲಾಗುತ್ತಿದೆ’ ಎಂದು ಅವರು ತಿಳಿಸಿದರು.</p>.<p>ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವಶಂಕರ ಬಿ. ಮಾತನಾಡಿ, ಕುಟುಂಬ ಕಲ್ಯಾಣ ವಿವಿಧ ವಿಧಾನಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಸೂಚಿಸಿದರು.</p>.<p>ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ನಾಗನಾಥ ಹುಲಸೂರೆ, ಡಾ.ವಿ.ಬಿ.ಲಕ್ಕಾ, ಡಾ. ದಿಲೀಪ್ ಡೋಂಗ್ರೆ, ಡಾ. ವಿಶ್ವ ಸೈನೀರ್, ಡಾ. ರೋಹಿತ್ ರಘೋಜಿ, ಸುವರ್ಣಕುಮಾರಿ ಇದ್ದರು.</p>.<p>ಶಿವಕುಮಾರ ಕಂಪ್ಲಿ ಸ್ವಾಗತಿಸಿದರು. ಗೀತಾರೆಡ್ಡಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>