<p><strong>ಬಗದಲ್(ಜನವಾಡ):</strong> ‘ಬೀದರ್ ತಾಲ್ಲೂಕಿನ ಬಗದಲ್ ಗ್ರಾಮದಲ್ಲಿ ಮುಖ್ಯರಸ್ತೆ ಬದಿಯ ಚರಂಡಿ ಹಾಗೂ ಒಳ ಚರಂಡಿ ನೀರು ಪರಿಶಿಷ್ಟರ ಓಣಿಗೆ ಹರಿದು ಬರುತ್ತಿದೆ’ ಎಂದು ಬಗದಲ್ ಗ್ರಾಮ ಸುಧಾರಣಾ ಹೋರಾಟ ಸಮಿತಿ ಆರೋಪಿಸಿದೆ.</p>.<p>ಸಮಿತಿಯ ಪ್ರಮುಖರು ಈ ಕುರಿತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದರು.</p>.<p>‘ಬೀದರ್-ಚಿಂಚೋಳಿ ಮುಖ್ಯ ರಸ್ತೆಯಲ್ಲಿನ ಒಂದು ಕಿ.ಮೀ. ವರೆಗಿನ ಚರಂಡಿ ನೀರು ಪರಿಶಿಷ್ಟರ ಓಣಿಗೆ ಬಂದು ಸೇರುತ್ತಿದೆ. ಮಳೆ ಸುರಿದರೆ ಗ್ರಾಮದ ಒಳಚರಂಡಿ ನೀರು ಕೂಡ ಓಣಿಯೊಳಗೆ ಬರುತ್ತಿದೆ. ಮನೆಯೊಳಗೂ ನುಗ್ಗುತ್ತಿದೆ’ ಎಂದು ದೂರಿದರು.</p>.<p>‘ಹೊಲಸು ನೀರಿನಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಸಮಸ್ಯೆ ಕುರಿತು ಪಂಚಾಯಿತಿ ಗಮನ ಸೆಳೆದರೂ ಪ್ರಯೋಜನವಾಗಿಲ್ಲ’ ಎಂದು ಆರೋಪಿಸಿದರು.</p>.<p>‘ಕೂಡಲೇ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ’ ಎಂದು ಎಚ್ಚರಿಸಿದರು.</p>.<p>ಬಗದಲ್ ಗ್ರಾಮ ಸುಧಾರಣಾ ಹೋರಾಟ ಸಮಿತಿಯ ಅಧ್ಯಕ್ಷ ರಾಜಕುಮಾರ ಬಗದಲ್ಕರ್, ಪ್ರಮುಖರಾದ ಪ್ರಕಾಶ ಎಸ್. ಹಾಲಹಳ್ಳಿಕರ್, ಸಿದ್ರಾಮ ಬಗದಲ್, ಶಿವರಾಜ ಕಟಗಿ, ಪಂಡಿತ ಕರನಾಯಕ್, ಪ್ರಭುರಾಜ ಕರನಾಯಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಗದಲ್(ಜನವಾಡ):</strong> ‘ಬೀದರ್ ತಾಲ್ಲೂಕಿನ ಬಗದಲ್ ಗ್ರಾಮದಲ್ಲಿ ಮುಖ್ಯರಸ್ತೆ ಬದಿಯ ಚರಂಡಿ ಹಾಗೂ ಒಳ ಚರಂಡಿ ನೀರು ಪರಿಶಿಷ್ಟರ ಓಣಿಗೆ ಹರಿದು ಬರುತ್ತಿದೆ’ ಎಂದು ಬಗದಲ್ ಗ್ರಾಮ ಸುಧಾರಣಾ ಹೋರಾಟ ಸಮಿತಿ ಆರೋಪಿಸಿದೆ.</p>.<p>ಸಮಿತಿಯ ಪ್ರಮುಖರು ಈ ಕುರಿತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದರು.</p>.<p>‘ಬೀದರ್-ಚಿಂಚೋಳಿ ಮುಖ್ಯ ರಸ್ತೆಯಲ್ಲಿನ ಒಂದು ಕಿ.ಮೀ. ವರೆಗಿನ ಚರಂಡಿ ನೀರು ಪರಿಶಿಷ್ಟರ ಓಣಿಗೆ ಬಂದು ಸೇರುತ್ತಿದೆ. ಮಳೆ ಸುರಿದರೆ ಗ್ರಾಮದ ಒಳಚರಂಡಿ ನೀರು ಕೂಡ ಓಣಿಯೊಳಗೆ ಬರುತ್ತಿದೆ. ಮನೆಯೊಳಗೂ ನುಗ್ಗುತ್ತಿದೆ’ ಎಂದು ದೂರಿದರು.</p>.<p>‘ಹೊಲಸು ನೀರಿನಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಸಮಸ್ಯೆ ಕುರಿತು ಪಂಚಾಯಿತಿ ಗಮನ ಸೆಳೆದರೂ ಪ್ರಯೋಜನವಾಗಿಲ್ಲ’ ಎಂದು ಆರೋಪಿಸಿದರು.</p>.<p>‘ಕೂಡಲೇ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ’ ಎಂದು ಎಚ್ಚರಿಸಿದರು.</p>.<p>ಬಗದಲ್ ಗ್ರಾಮ ಸುಧಾರಣಾ ಹೋರಾಟ ಸಮಿತಿಯ ಅಧ್ಯಕ್ಷ ರಾಜಕುಮಾರ ಬಗದಲ್ಕರ್, ಪ್ರಮುಖರಾದ ಪ್ರಕಾಶ ಎಸ್. ಹಾಲಹಳ್ಳಿಕರ್, ಸಿದ್ರಾಮ ಬಗದಲ್, ಶಿವರಾಜ ಕಟಗಿ, ಪಂಡಿತ ಕರನಾಯಕ್, ಪ್ರಭುರಾಜ ಕರನಾಯಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>