‘ಕಿರಗುಣವಾಡಿಯಲ್ಲಿ ಇರುವ ನೀರಿನ ಮೂಲ ಬತ್ತಿ ಹೋಗಿದೆ. ಒಂದು ಕೊಳವೆಬಾವಿಯಲ್ಲಿ ಮಾತ್ರ ನೀರು ಬರುತ್ತಿದೆ. ಅಲ್ಲಿ ಹೊಸ ಕೊಳವೆ ಬಾವಿ ಕೊರೆಯಲು ಜಿಲ್ಲಾ ಪಂಚಾಯಿತಿ ಸಿಇಒ ಸೂಚನೆ ನೀಡಿದ್ದಾರೆ. ಹೊಸ ಕೊಳವೆ ಬಾವಿಯಲ್ಲೂ ನೀರು ಸಿಗದೆ ಇದ್ದಾಗ ಆ ಊರಿಗೆ ಟ್ಯಾಂಕರ್ ವ್ಯವಸ್ಥೆ ಮಾಡುವುದು ಅನಿವಾರ್ಯವಾಗಲಿದೆ’ ಎಂದು ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ತಿಳಿಸಿದ್ದಾರೆ.